ಹಿಂದೂ, ಮುಸ್ಲಿಂ, ಕ್ರೈಸ್ತ ಧರ್ಮವನ್ನು ಅನುಸರಿಸುವವರು ಸೇರಿ ಎಲ್ಲ ವರ್ಗದವರ ವಾದವನ್ನು ಸುಪ್ರೀಂ ಕೋರ್ಟ್ ಆಲಿಸಿ, ಸಲಿಂಗ ವಿವಾಹವು ಕಾನೂನು ಮಾನ್ಯತೆ ಪಡೆಯಲು ಅರ್ಹವಲ್ಲ ಎಂದು ತೀರ್ಪು ನೀಡಿದ್ದು ನಮಗೆ ಸಮಾಧಾನ ಉಂಟು ಮಾಡಿದೆ. ಇದು ಮೂಲಭೂತ ಹಕ್ಕು ಕೂಡ ಅಲ್ಲ’ ಎಂದು ವಿಶ್ವ ಹಿಂದೂ ಪರಿಷತ್ನ ರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಹೇಳಿದ್ದಾರೆ.
‘ಮಕ್ಕಳನ್ನು ದತ್ತು ಪಡೆಯಲೂ ಅವಕಾಶ ನಿರಾಕರಿಸಿದ್ದೂ ಕೂಡ ಉತ್ತಮ ನಡೆ’ ಎಂದು ಅವರು ತಿಳಿಸಿದ್ದಾರೆ.
ಸಲಿಂಗ ವಿವಾಹಕ್ಕೆ ಮಾನ್ಯತೆ ನೀಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ 21 ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರ ನೇತೃತ್ವದ ಸಂವಿಧಾನಿಕ ಪೀಠವು ಸಲಿಂಗ ವಿವಾಹ ವಿರುದ್ಧ 3:2ರ ಬಹುಮತದ ತೀರ್ಪು ನೀಡಿದೆ.