<p><strong>ನವದೆಹಲಿ</strong>: ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರ ದಿಢೀರ್ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಹುದ್ದೆಗೆ ಇಂದು (ಮಂಗಳವಾರ) ಚುನಾವಣೆ ನಡೆಯುತ್ತಿದೆ. </p><p>10 ಗಂಟೆಗೆ ಮತದಾನ ಆರಂಭಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಎಚ್.ಡಿ. ದೇವೇಗೌಡ ಸೇರಿದಂತೆ ಹಲವು ನಾಯಕರು ತಮ್ಮ ಮತದಾನದ ಹಕ್ಕು ಚಲಾಯಿಸಿದ್ದಾರೆ. </p><p>ಜುಲೈ 21ರಂದು ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ದಿಢೀರ್ ರಾಜೀನಾಮೆ ನೀಡಿದ್ದರು.</p><p>ಎನ್ಡಿಎ ಮೈತ್ರಿಕೂಟದಿಂದ ಉಪರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಾಗಿ ಸಿ.ಪಿ. ರಾಧಾಕೃಷ್ಣನ್ ಹಾಗೂ ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ನ್ಯಾ. ಸುದರ್ಶನ ರೆಡ್ಡಿ ಕಣಕ್ಕಿಳಿದಿದ್ದಾರೆ. </p><p>ಎನ್ಡಿಎ ಬಳಿ ಬಹುಮತ ಇರುವುದಿಂದ ಸಿ.ಪಿ. ರಾಧಾಕೃಷ್ಣನ್ ಅವರ ಗೆಲುವು ಬಹುತೇಕ ಖಚಿತವಾಗಿದೆ. ಆದರೆ, 1962ರಿಂದ ಇಲ್ಲಿಯವರೆಗೂ ವಿರೋಧ ಪಕ್ಷಗಳ ಅಭ್ಯರ್ಥಿಗೆ ಸಿಕ್ಕ ಮತಗಳ ಹೋಲಿಕೆಯಲ್ಲಿ ಈ ಬಾರಿ ನ್ಯಾ. ಸುದರ್ಶನ ರೆಡ್ಡಿ ಅವರಿಗೆ ಅತಿ ಹೆಚ್ಚು ಮತಗಳು ಲಭಿಸುವ ಸಾಧ್ಯತೆ ಹೆಚ್ಚು. ಎರಡೂ ಮೈತ್ರಿಕೂಟಗಳು ಸಭೆಗಳನ್ನು ನಡೆಸಿ ತಮ್ಮ ತಮ್ಮ ಅಭ್ಯರ್ಥಿಗಳ ಪರವಾಗಿ ಒಗ್ಗಟ್ಟು ಪ್ರದರ್ಶಿಸಿವೆ</p>.<p><strong>ಒಟ್ಟು ಬಲಾಬಲ</strong></p><p>788 : ಒಟ್ಟು ಸಂಸದರು</p><p>245 : ರಾಜ್ಯಸಭೆ</p><p>543 : ಲೋಕಸಭೆ</p><p>12 : ರಾಜ್ಯಸಭೆಗೆ ನಾಮನಿರ್ದೇಶನಗೊಂಡವರು</p>.<p><strong>ಈ ಬಾರಿಯ ಬಲಾಬಲ</strong></p><p>781 : ಒಟ್ಟು ಸಂಸದರು</p><p>239 : ರಾಜ್ಯಸಭೆ (ಆರು ಸ್ಥಾನಗಳು ಖಾಲಿ ಇವೆ)</p><p>542 : ಲೋಕಸಭೆ (ಒಂದು ಸ್ಥಾನ ಖಾಲಿ ಇದೆ)</p><p>391 : ಬಹುಮತ</p>.<p><strong>‘ಮೈತ್ರಿ’ಗಳ ಬಲಾಬಲ</strong></p><p>436 : ಎನ್ಡಿಎ (ವೈಎಸ್ಆರ್ ಕಾಂಗ್ರೆಸ್ ಬೆಂಬಲ ಸೇರಿ)</p><p>324 : ಇಂಡಿಯಾ</p><p>10 : ಪಕ್ಷೇತರರು</p><p>4 : ಬಿಆರ್ಎಸ್</p><p>7 : ಬಿಜೆಡಿ</p>.Vice Presidential Election: ಉಪರಾಷ್ಟ್ರಪತಿ ಚುನಾವಣೆ ಇಂದು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರ ದಿಢೀರ್ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಹುದ್ದೆಗೆ ಇಂದು (ಮಂಗಳವಾರ) ಚುನಾವಣೆ ನಡೆಯುತ್ತಿದೆ. </p><p>10 ಗಂಟೆಗೆ ಮತದಾನ ಆರಂಭಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಎಚ್.ಡಿ. ದೇವೇಗೌಡ ಸೇರಿದಂತೆ ಹಲವು ನಾಯಕರು ತಮ್ಮ ಮತದಾನದ ಹಕ್ಕು ಚಲಾಯಿಸಿದ್ದಾರೆ. </p><p>ಜುಲೈ 21ರಂದು ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ದಿಢೀರ್ ರಾಜೀನಾಮೆ ನೀಡಿದ್ದರು.</p><p>ಎನ್ಡಿಎ ಮೈತ್ರಿಕೂಟದಿಂದ ಉಪರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಾಗಿ ಸಿ.ಪಿ. ರಾಧಾಕೃಷ್ಣನ್ ಹಾಗೂ ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ನ್ಯಾ. ಸುದರ್ಶನ ರೆಡ್ಡಿ ಕಣಕ್ಕಿಳಿದಿದ್ದಾರೆ. </p><p>ಎನ್ಡಿಎ ಬಳಿ ಬಹುಮತ ಇರುವುದಿಂದ ಸಿ.ಪಿ. ರಾಧಾಕೃಷ್ಣನ್ ಅವರ ಗೆಲುವು ಬಹುತೇಕ ಖಚಿತವಾಗಿದೆ. ಆದರೆ, 1962ರಿಂದ ಇಲ್ಲಿಯವರೆಗೂ ವಿರೋಧ ಪಕ್ಷಗಳ ಅಭ್ಯರ್ಥಿಗೆ ಸಿಕ್ಕ ಮತಗಳ ಹೋಲಿಕೆಯಲ್ಲಿ ಈ ಬಾರಿ ನ್ಯಾ. ಸುದರ್ಶನ ರೆಡ್ಡಿ ಅವರಿಗೆ ಅತಿ ಹೆಚ್ಚು ಮತಗಳು ಲಭಿಸುವ ಸಾಧ್ಯತೆ ಹೆಚ್ಚು. ಎರಡೂ ಮೈತ್ರಿಕೂಟಗಳು ಸಭೆಗಳನ್ನು ನಡೆಸಿ ತಮ್ಮ ತಮ್ಮ ಅಭ್ಯರ್ಥಿಗಳ ಪರವಾಗಿ ಒಗ್ಗಟ್ಟು ಪ್ರದರ್ಶಿಸಿವೆ</p>.<p><strong>ಒಟ್ಟು ಬಲಾಬಲ</strong></p><p>788 : ಒಟ್ಟು ಸಂಸದರು</p><p>245 : ರಾಜ್ಯಸಭೆ</p><p>543 : ಲೋಕಸಭೆ</p><p>12 : ರಾಜ್ಯಸಭೆಗೆ ನಾಮನಿರ್ದೇಶನಗೊಂಡವರು</p>.<p><strong>ಈ ಬಾರಿಯ ಬಲಾಬಲ</strong></p><p>781 : ಒಟ್ಟು ಸಂಸದರು</p><p>239 : ರಾಜ್ಯಸಭೆ (ಆರು ಸ್ಥಾನಗಳು ಖಾಲಿ ಇವೆ)</p><p>542 : ಲೋಕಸಭೆ (ಒಂದು ಸ್ಥಾನ ಖಾಲಿ ಇದೆ)</p><p>391 : ಬಹುಮತ</p>.<p><strong>‘ಮೈತ್ರಿ’ಗಳ ಬಲಾಬಲ</strong></p><p>436 : ಎನ್ಡಿಎ (ವೈಎಸ್ಆರ್ ಕಾಂಗ್ರೆಸ್ ಬೆಂಬಲ ಸೇರಿ)</p><p>324 : ಇಂಡಿಯಾ</p><p>10 : ಪಕ್ಷೇತರರು</p><p>4 : ಬಿಆರ್ಎಸ್</p><p>7 : ಬಿಜೆಡಿ</p>.Vice Presidential Election: ಉಪರಾಷ್ಟ್ರಪತಿ ಚುನಾವಣೆ ಇಂದು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>