<p><strong>ನವದೆಹಲಿ:</strong> ‘ಮತ ಚಲಾಯಿಸುವ ಸಂದರ್ಭದಲ್ಲಿ ಪಕ್ಷ ನಿಷ್ಠೆಯನ್ನು ಬದಿಗಿಟ್ಟು, ದೇಶದ ಮೇಲೆ ನಿಮಗಿರುವ ಪ್ರೀತಿಯನ್ನು ಗಮನದಲ್ಲಿಡಿ’ ಎಂದು ಉಪರಾಷ್ಟ್ರಪತಿ ಚುನಾವಣೆಯ ವಿಪಕ್ಷಗಳ ಅಭ್ಯರ್ಥಿ ಬಿ.ಸುದರ್ಶನ ರೆಡ್ಡಿ ಅವರು ಸಂಸದರಿಗೆ ಮನವಿ ಮಾಡಿದ್ದಾರೆ.</p>.<p>ಭಾನುವಾರ ಸಂಸದರನ್ನು ಉದ್ದೇಶಿಸಿ ವಿಡಿಯೊ ಸಂದೇಶ ಕಳುಹಿಸಿರುವ ಅವರು, ‘ನನಗಾಗಿ ಬೆಂಬಲ ಕೊಡಿ ಎಂದು ನಿಮ್ಮನ್ನು ಕೇಳುತ್ತಿಲ್ಲ. ನಮ್ಮ ದೇಶವನ್ನು ಸಾರ್ವಭೌಮ ಪ್ರಜಾಪ್ರಭುತ್ವ ಗಣರಾಜ್ಯ ಎಂದು ವ್ಯಾಖ್ಯಾನಿಸುವ ಮೌಲ್ಯಗಳಿಗೆ ಬೆಂಬಲ ಕೊಡಿ’ ಎಂದು ಕೋರಿದ್ದಾರೆ.</p>.<p>‘ಈ ಚುನಾವಣೆಯಲ್ಲಿ ಯಾವುದೇ ರಾಜಕೀಯ ಪಕ್ಷಕ್ಕೆ ನಿಷ್ಠೆ ತೋರಿಸಬೇಡಿ. ದೇಶದ ಮೇಲಿನ ಪ್ರೀತಿ ನಿಮ್ಮ ಆಯ್ಕೆಯ ಮೇಲೆ ಪ್ರಭಾವ ಬೀರಬೇಕು. ನಮ್ಮ ಪ್ರಜಾಪ್ರಭುತ್ವ ಗಣರಾಜ್ಯದ ಆತ್ಮವನ್ನು ರಕ್ಷಿಸುವ ನೈತಿಕ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ’ ಎಂದು ಹೇಳಿದ್ದಾರೆ. </p>.<p>‘ಈ ಹುದ್ದೆಯ (ಉಪರಾಷ್ಟ್ರಪತಿ) ಜವಾಬ್ದಾರಿಯನ್ನು ನನಗೆ ವಹಿಸುವ ಮೂಲಕ ನೀವು ಸಂಸದೀಯ ಸಂಪ್ರದಾಯಗಳನ್ನು ರಕ್ಷಿಸಲು ಮತ್ತು ರಾಜ್ಯಸಭೆಯು ಪ್ರಜಾಪ್ರಭುತ್ವದ ನಿಜವಾದ ದೇವಾಲಯವಾಗಿ ನಿಲ್ಲುವಂತೆ ನೋಡಿಕೊಳ್ಳಲು ನೆರವಾಗುವಿರಿ' ಎಂದಿದ್ದಾರೆ.</p>.<p>‘ನೀವು ಚಲಾಯಿಸಲಿರುವ ಮತ ಕೇವಲ ಉಪರಾಷ್ಟ್ರಪತಿಯನ್ನು ಆಯ್ಕೆ ಮಾಡುತ್ತಿಲ್ಲ. ಇದು ದೇಶಕ್ಕೆ ಚೈತನ್ಯ ತುಂಬುವ ಮತ’ ಎಂದು ಅವರು ಪ್ರತಿಪಾದಿಸಿದ್ದಾರೆ.</p>.<p>‘ವಿನಯದಿಂದ ಮತ್ತು ಬಲುದೊಡ್ಡ ಜವಾಬ್ದಾರಿಯೊಂದಿಗೆ ಉಪರಾಷ್ಟ್ರಪತಿ ಹುದ್ದೆಯ ಅಭ್ಯರ್ಥಿಯಾಗಿ ನಿಮ್ಮ ಮುಂದೆ ನಿಂತಿದ್ದೇನೆ. ಎಲ್ಲರೂ ಒಟ್ಟಾಗಿ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸೋಣ ಮತ್ತು ಭವಿಷ್ಯದ ಪೀಳಿಗೆಯ ಮಂದಿ ಹೆಮ್ಮೆ ಪಟ್ಟುಕೊಳ್ಳುವಂತಹ ಪರಂಪರೆಯನ್ನು ನಿರ್ಮಿಸೋಣ’ ಎಂದು ಮನವಿ ಮಾಡಿದ್ದಾರೆ.</p>.VP ಚುನಾವಣೆಯಲ್ಲಿ ಸಂಖ್ಯೆ ಅಪ್ರಸ್ತುತ.. ನ್ಯಾ. ಬಿ.ಸುದರ್ಶನ ರೆಡ್ಡಿ ಸಂದರ್ಶನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಮತ ಚಲಾಯಿಸುವ ಸಂದರ್ಭದಲ್ಲಿ ಪಕ್ಷ ನಿಷ್ಠೆಯನ್ನು ಬದಿಗಿಟ್ಟು, ದೇಶದ ಮೇಲೆ ನಿಮಗಿರುವ ಪ್ರೀತಿಯನ್ನು ಗಮನದಲ್ಲಿಡಿ’ ಎಂದು ಉಪರಾಷ್ಟ್ರಪತಿ ಚುನಾವಣೆಯ ವಿಪಕ್ಷಗಳ ಅಭ್ಯರ್ಥಿ ಬಿ.ಸುದರ್ಶನ ರೆಡ್ಡಿ ಅವರು ಸಂಸದರಿಗೆ ಮನವಿ ಮಾಡಿದ್ದಾರೆ.</p>.<p>ಭಾನುವಾರ ಸಂಸದರನ್ನು ಉದ್ದೇಶಿಸಿ ವಿಡಿಯೊ ಸಂದೇಶ ಕಳುಹಿಸಿರುವ ಅವರು, ‘ನನಗಾಗಿ ಬೆಂಬಲ ಕೊಡಿ ಎಂದು ನಿಮ್ಮನ್ನು ಕೇಳುತ್ತಿಲ್ಲ. ನಮ್ಮ ದೇಶವನ್ನು ಸಾರ್ವಭೌಮ ಪ್ರಜಾಪ್ರಭುತ್ವ ಗಣರಾಜ್ಯ ಎಂದು ವ್ಯಾಖ್ಯಾನಿಸುವ ಮೌಲ್ಯಗಳಿಗೆ ಬೆಂಬಲ ಕೊಡಿ’ ಎಂದು ಕೋರಿದ್ದಾರೆ.</p>.<p>‘ಈ ಚುನಾವಣೆಯಲ್ಲಿ ಯಾವುದೇ ರಾಜಕೀಯ ಪಕ್ಷಕ್ಕೆ ನಿಷ್ಠೆ ತೋರಿಸಬೇಡಿ. ದೇಶದ ಮೇಲಿನ ಪ್ರೀತಿ ನಿಮ್ಮ ಆಯ್ಕೆಯ ಮೇಲೆ ಪ್ರಭಾವ ಬೀರಬೇಕು. ನಮ್ಮ ಪ್ರಜಾಪ್ರಭುತ್ವ ಗಣರಾಜ್ಯದ ಆತ್ಮವನ್ನು ರಕ್ಷಿಸುವ ನೈತಿಕ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ’ ಎಂದು ಹೇಳಿದ್ದಾರೆ. </p>.<p>‘ಈ ಹುದ್ದೆಯ (ಉಪರಾಷ್ಟ್ರಪತಿ) ಜವಾಬ್ದಾರಿಯನ್ನು ನನಗೆ ವಹಿಸುವ ಮೂಲಕ ನೀವು ಸಂಸದೀಯ ಸಂಪ್ರದಾಯಗಳನ್ನು ರಕ್ಷಿಸಲು ಮತ್ತು ರಾಜ್ಯಸಭೆಯು ಪ್ರಜಾಪ್ರಭುತ್ವದ ನಿಜವಾದ ದೇವಾಲಯವಾಗಿ ನಿಲ್ಲುವಂತೆ ನೋಡಿಕೊಳ್ಳಲು ನೆರವಾಗುವಿರಿ' ಎಂದಿದ್ದಾರೆ.</p>.<p>‘ನೀವು ಚಲಾಯಿಸಲಿರುವ ಮತ ಕೇವಲ ಉಪರಾಷ್ಟ್ರಪತಿಯನ್ನು ಆಯ್ಕೆ ಮಾಡುತ್ತಿಲ್ಲ. ಇದು ದೇಶಕ್ಕೆ ಚೈತನ್ಯ ತುಂಬುವ ಮತ’ ಎಂದು ಅವರು ಪ್ರತಿಪಾದಿಸಿದ್ದಾರೆ.</p>.<p>‘ವಿನಯದಿಂದ ಮತ್ತು ಬಲುದೊಡ್ಡ ಜವಾಬ್ದಾರಿಯೊಂದಿಗೆ ಉಪರಾಷ್ಟ್ರಪತಿ ಹುದ್ದೆಯ ಅಭ್ಯರ್ಥಿಯಾಗಿ ನಿಮ್ಮ ಮುಂದೆ ನಿಂತಿದ್ದೇನೆ. ಎಲ್ಲರೂ ಒಟ್ಟಾಗಿ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸೋಣ ಮತ್ತು ಭವಿಷ್ಯದ ಪೀಳಿಗೆಯ ಮಂದಿ ಹೆಮ್ಮೆ ಪಟ್ಟುಕೊಳ್ಳುವಂತಹ ಪರಂಪರೆಯನ್ನು ನಿರ್ಮಿಸೋಣ’ ಎಂದು ಮನವಿ ಮಾಡಿದ್ದಾರೆ.</p>.VP ಚುನಾವಣೆಯಲ್ಲಿ ಸಂಖ್ಯೆ ಅಪ್ರಸ್ತುತ.. ನ್ಯಾ. ಬಿ.ಸುದರ್ಶನ ರೆಡ್ಡಿ ಸಂದರ್ಶನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>