<p><strong>ಹೈದರಾಬಾದ್:</strong> ಉಪ ರಾಷ್ಟ್ರಪತಿ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಎನ್ಡಿಎ ಹಾಗೂ ವಿರೋಧ ಪಕ್ಷಗಳ 'ಇಂಡಿಯಾ' ಮೈತ್ರಿಕೂಟದಲ್ಲಿ ಚುನಾವಣಾ ಚಟವಟಿಕೆಗಳ ಕಾವು ಏರಿದೆ. ಆದಾಗ್ಯೂ, ಭಾರತ ರಾಷ್ಟ್ರ ಸಮಿತಿ (ಬಿಆರ್ಎಸ್) ಪಕ್ಷ ಎರಡೂ ಬಣಗಳಿಂದ ಸಮಾನ ಅಂತರ ಕಾಯ್ದುಕೊಂಡಿದೆ.</p><p>ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಯಾವುದೇ ಪಕ್ಷವನ್ನು ಬೆಂಬಲಿಸುವ ಬಗ್ಗೆ ಈವರೆಗೆ ತೀರ್ಮಾನ ಮಾಡಿಲ್ಲ. ಆ ಕುರಿತು ಸಭೆ ಸೇರಿ ಚರ್ಚಿಸುತ್ತೇವೆ ಎಂದು ಬಿಆರ್ಎಸ್ ಕಾರ್ಯಾಧ್ಯಕ್ಷ ಕೆ.ಟಿ. ರಾಮ ರಾವ್ (ಕೆಟಿಆರ್) ಬುಧವಾರ ತಿಳಿಸಿದ್ದಾರೆ.</p><p>ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯನ್ನು ವಿರೋಧಿಸುವ ಸುಳಿವನ್ನೂ ನೀಡಿದ್ದಾರೆ.</p><p>ಎನ್ಡಿಎ ಮೈತ್ರಿಕೂಟವು, ತಮಿಳುನಾಡು ಬಿಜೆಪಿ ನಾಯಕ ಮತ್ತು ಮಹಾರಾಷ್ಟ್ರದ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಇಂಡಿಯಾ ಬಣ ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಸುದರ್ಶನ್ ರೆಡ್ಡಿ ಅವರನ್ನು ಹುರಿಯಾಳನ್ನಾಗಿಸಿದೆ.</p>.ಉಪ ರಾಷ್ಟ್ರಪತಿ ಚುನಾವಣೆ: NDA ಅಭ್ಯರ್ಥಿಯಾಗಿ ಸಿ.ಪಿ. ರಾಧಾಕೃಷ್ಣನ್ ಕಣಕ್ಕೆ.‘ಇಂಡಿಯಾ’ ಬಣದಿಂದ ನ್ಯಾ. ಸುದರ್ಶನ್ ರೆಡ್ಡಿ: ವಕೀಲರಿಂದ ಸುಪ್ರೀಂ ಕೋರ್ಟ್ವರೆಗೂ.<p><strong>'ಯೂರಿಯಾ ಪೂರೈಸುವವರಿಗೆ ಬೆಂಬಲ'<br></strong>ಎನ್ಡಿಎ ಆಗಲೀ, ಇಂಡಿಯಾ ಮೈತ್ರಿಕೂಟವಾಗಲೀ ಬಿಆರ್ಎಸ್ ಅನ್ನು ಈವರೆಗೆ ಸಂಪರ್ಕಿಸಿಲ್ಲ ಎಂದು ರಾಮ ರಾವ್ ಸ್ಪಷ್ಟಪಡಿಸಿದ್ದಾರೆ.</p><p>'ಯಾರೊಬ್ಬರೂ ನಮ್ಮ ಬೆಂಬಲ ಕೇಳಿಲ್ಲ. ಇನ್ನೂ ಸಮಯ ಇದೆ. ಮತದಾನ ಸೆಪ್ಟೆಂಬರ್ 9ರಂದು ನಡೆಯಲಿದೆ. ಅದಕ್ಕೂ ಮುನ್ನ ನಮ್ಮ ಪಕ್ಷವು ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಿದೆ' ಎಂದು ಮಾಹಿತಿ ನೀಡಿದ್ದಾರೆ.</p><p>ಬಿಜೆಪಿ ಹಾಗೂ ಕಾಂಗ್ರೆಸ್ – ಎರಡೂ ತೆಲಂಗಾಣವನ್ನು ಕಡೆಗಣಿಸಿವೆ ಎಂದು ಆರೋಪಿಸಿರುವ ಕೆಟಿಆರ್, ರಾಜ್ಯಕ್ಕೆ ಎರಡು ಲಕ್ಷ ಟನ್ ಯೂರಿಯಾ ಸರಬರಾಜು ಮಾಡುವ ಭರವಸೆ ನೀಡುವ ಯಾವುದೇ ಬಣವನ್ನು ಬೆಂಬಲಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.</p><p>ಲೋಕಸಭೆಯಲ್ಲಿ ಬಿಆರ್ಎಸ್ನ ಒಬ್ಬ ಸಂಸದನೂ ಇಲ್ಲ. ಆದರೆ, ರಾಜ್ಯಸಭೆಯಲ್ಲಿ ನಾಲ್ವರು ಸದಸ್ಯರಿದ್ದಾರೆ.</p><p>ಪಕ್ಷದ ನಿರ್ಧಾರವು ರಾಜ್ಯದ ಜನರ ಆಲೋಚನೆ, ನಿರೀಕ್ಷೆಗಳನ್ನು ಅವಲಂಭಿಸಿದೆ ಎಂದೂ ಹೇಳಿದ್ದಾರೆ.</p><p><strong>'ಕಾಂಗ್ರೆಸ್ ನೀಚ ಪಕ್ಷ'<br></strong>'ಮುಖ್ಯಮಂತ್ರಿ ರೇವಂತ ರೆಡ್ಡಿ ಅವರು ಯಾರನ್ನು ಬೆಂಬಲಿಸುತ್ತಾರೋ ಅವರನ್ನು ನಾವು ವಿರೋಧಿಸುತ್ತೇವೆ. ಏಕೆಂದರೆ ಕಾಂಗ್ರೆಸ್ ನೀಚ ಪಕ್ಷ. ಅಂತಹ ಪಕ್ಷದ ಅಭ್ಯರ್ಥಿಯನ್ನು ನಾವು ಬೆಂಬಲಿಸುತ್ತೇವೆಂದು ಹೇಗೆ ಭಾವಿಸುವಿರಿ' ಎಂದು ಪ್ರಶ್ನಿಸಿದ್ದಾರೆ.</p>.ವೈದ್ಯಕೀಯ ಕಾರಣ ನೀಡಿ ಉಪ ರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ಘೋಷಿಸಿದ ಧನಕರ್.ಉಪ ರಾಷ್ಟ್ರಪತಿ ಹುದ್ದೆಗೆ ಧನಕರ್ ರಾಜೀನಾಮೆ: ಸಂವಿಧಾನ ಹೇಳುವುದೇನು?.<div><div class="bigfact-title">ಧನಕರ್ ರಾಜೀನಾಮೆಯಿಂದಾಗಿ ಚುನಾವಣೆ</div><div class="bigfact-description">ಉಪ ರಾಷ್ಟ್ರಪತಿಯಾಗಿದ್ದ ಜಗದೀಪ್ ಧನಕರ್ ಅವರ ದಿಢೀರ್ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿದೆ. ಜುಲೈ 21ರಂದು ರಾಜೀನಾಮೆ ನೀಡಿದ್ದ ಧನಕರ್ ಅವರ ಅಧಿಕಾರಾವಧಿ ಇನ್ನೂ ಎರಡು ವರ್ಷವಿತ್ತು.</div></div>.<ul><li><p>ಉಪ ರಾಷ್ಟ್ರಪತಿ ಚುನಾವಣೆ ಅಧಿಸೂಚನೆ ಪ್ರಕಟ: ಆಗಸ್ಟ್ 7</p></li><li><p>ನಾಮಪತ್ರ ಸಲ್ಲಿಕೆ ಕೊನೇ ದಿನ: ಆಗಸ್ಟ್ 21</p></li><li><p>ನಾಮಪತ್ರ ಪರಿಶೀಲನೆ: ಆಗಸ್ಟ್ 22</p></li><li><p>ನಾಮಪತ್ರ ಹಿಂಪಡೆಯಲು ಕೊನೇ ದಿನ: ಆಗಸ್ಟ್ 25</p></li><li><p>ಮತದಾನ ದಿನಾಂಕ: ಸೆಪ್ಟೆಂಬರ್ 9 (ಸಮಯ: ಬೆಳಿಗ್ಗೆ 10 – ಸಂಜೆ 5)</p></li><li><p>ಮತ ಎಣಿಕೆ: ಸೆಪ್ಟೆಂಬರ್ 9</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ಉಪ ರಾಷ್ಟ್ರಪತಿ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಎನ್ಡಿಎ ಹಾಗೂ ವಿರೋಧ ಪಕ್ಷಗಳ 'ಇಂಡಿಯಾ' ಮೈತ್ರಿಕೂಟದಲ್ಲಿ ಚುನಾವಣಾ ಚಟವಟಿಕೆಗಳ ಕಾವು ಏರಿದೆ. ಆದಾಗ್ಯೂ, ಭಾರತ ರಾಷ್ಟ್ರ ಸಮಿತಿ (ಬಿಆರ್ಎಸ್) ಪಕ್ಷ ಎರಡೂ ಬಣಗಳಿಂದ ಸಮಾನ ಅಂತರ ಕಾಯ್ದುಕೊಂಡಿದೆ.</p><p>ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಯಾವುದೇ ಪಕ್ಷವನ್ನು ಬೆಂಬಲಿಸುವ ಬಗ್ಗೆ ಈವರೆಗೆ ತೀರ್ಮಾನ ಮಾಡಿಲ್ಲ. ಆ ಕುರಿತು ಸಭೆ ಸೇರಿ ಚರ್ಚಿಸುತ್ತೇವೆ ಎಂದು ಬಿಆರ್ಎಸ್ ಕಾರ್ಯಾಧ್ಯಕ್ಷ ಕೆ.ಟಿ. ರಾಮ ರಾವ್ (ಕೆಟಿಆರ್) ಬುಧವಾರ ತಿಳಿಸಿದ್ದಾರೆ.</p><p>ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯನ್ನು ವಿರೋಧಿಸುವ ಸುಳಿವನ್ನೂ ನೀಡಿದ್ದಾರೆ.</p><p>ಎನ್ಡಿಎ ಮೈತ್ರಿಕೂಟವು, ತಮಿಳುನಾಡು ಬಿಜೆಪಿ ನಾಯಕ ಮತ್ತು ಮಹಾರಾಷ್ಟ್ರದ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಇಂಡಿಯಾ ಬಣ ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಸುದರ್ಶನ್ ರೆಡ್ಡಿ ಅವರನ್ನು ಹುರಿಯಾಳನ್ನಾಗಿಸಿದೆ.</p>.ಉಪ ರಾಷ್ಟ್ರಪತಿ ಚುನಾವಣೆ: NDA ಅಭ್ಯರ್ಥಿಯಾಗಿ ಸಿ.ಪಿ. ರಾಧಾಕೃಷ್ಣನ್ ಕಣಕ್ಕೆ.‘ಇಂಡಿಯಾ’ ಬಣದಿಂದ ನ್ಯಾ. ಸುದರ್ಶನ್ ರೆಡ್ಡಿ: ವಕೀಲರಿಂದ ಸುಪ್ರೀಂ ಕೋರ್ಟ್ವರೆಗೂ.<p><strong>'ಯೂರಿಯಾ ಪೂರೈಸುವವರಿಗೆ ಬೆಂಬಲ'<br></strong>ಎನ್ಡಿಎ ಆಗಲೀ, ಇಂಡಿಯಾ ಮೈತ್ರಿಕೂಟವಾಗಲೀ ಬಿಆರ್ಎಸ್ ಅನ್ನು ಈವರೆಗೆ ಸಂಪರ್ಕಿಸಿಲ್ಲ ಎಂದು ರಾಮ ರಾವ್ ಸ್ಪಷ್ಟಪಡಿಸಿದ್ದಾರೆ.</p><p>'ಯಾರೊಬ್ಬರೂ ನಮ್ಮ ಬೆಂಬಲ ಕೇಳಿಲ್ಲ. ಇನ್ನೂ ಸಮಯ ಇದೆ. ಮತದಾನ ಸೆಪ್ಟೆಂಬರ್ 9ರಂದು ನಡೆಯಲಿದೆ. ಅದಕ್ಕೂ ಮುನ್ನ ನಮ್ಮ ಪಕ್ಷವು ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಿದೆ' ಎಂದು ಮಾಹಿತಿ ನೀಡಿದ್ದಾರೆ.</p><p>ಬಿಜೆಪಿ ಹಾಗೂ ಕಾಂಗ್ರೆಸ್ – ಎರಡೂ ತೆಲಂಗಾಣವನ್ನು ಕಡೆಗಣಿಸಿವೆ ಎಂದು ಆರೋಪಿಸಿರುವ ಕೆಟಿಆರ್, ರಾಜ್ಯಕ್ಕೆ ಎರಡು ಲಕ್ಷ ಟನ್ ಯೂರಿಯಾ ಸರಬರಾಜು ಮಾಡುವ ಭರವಸೆ ನೀಡುವ ಯಾವುದೇ ಬಣವನ್ನು ಬೆಂಬಲಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.</p><p>ಲೋಕಸಭೆಯಲ್ಲಿ ಬಿಆರ್ಎಸ್ನ ಒಬ್ಬ ಸಂಸದನೂ ಇಲ್ಲ. ಆದರೆ, ರಾಜ್ಯಸಭೆಯಲ್ಲಿ ನಾಲ್ವರು ಸದಸ್ಯರಿದ್ದಾರೆ.</p><p>ಪಕ್ಷದ ನಿರ್ಧಾರವು ರಾಜ್ಯದ ಜನರ ಆಲೋಚನೆ, ನಿರೀಕ್ಷೆಗಳನ್ನು ಅವಲಂಭಿಸಿದೆ ಎಂದೂ ಹೇಳಿದ್ದಾರೆ.</p><p><strong>'ಕಾಂಗ್ರೆಸ್ ನೀಚ ಪಕ್ಷ'<br></strong>'ಮುಖ್ಯಮಂತ್ರಿ ರೇವಂತ ರೆಡ್ಡಿ ಅವರು ಯಾರನ್ನು ಬೆಂಬಲಿಸುತ್ತಾರೋ ಅವರನ್ನು ನಾವು ವಿರೋಧಿಸುತ್ತೇವೆ. ಏಕೆಂದರೆ ಕಾಂಗ್ರೆಸ್ ನೀಚ ಪಕ್ಷ. ಅಂತಹ ಪಕ್ಷದ ಅಭ್ಯರ್ಥಿಯನ್ನು ನಾವು ಬೆಂಬಲಿಸುತ್ತೇವೆಂದು ಹೇಗೆ ಭಾವಿಸುವಿರಿ' ಎಂದು ಪ್ರಶ್ನಿಸಿದ್ದಾರೆ.</p>.ವೈದ್ಯಕೀಯ ಕಾರಣ ನೀಡಿ ಉಪ ರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ಘೋಷಿಸಿದ ಧನಕರ್.ಉಪ ರಾಷ್ಟ್ರಪತಿ ಹುದ್ದೆಗೆ ಧನಕರ್ ರಾಜೀನಾಮೆ: ಸಂವಿಧಾನ ಹೇಳುವುದೇನು?.<div><div class="bigfact-title">ಧನಕರ್ ರಾಜೀನಾಮೆಯಿಂದಾಗಿ ಚುನಾವಣೆ</div><div class="bigfact-description">ಉಪ ರಾಷ್ಟ್ರಪತಿಯಾಗಿದ್ದ ಜಗದೀಪ್ ಧನಕರ್ ಅವರ ದಿಢೀರ್ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿದೆ. ಜುಲೈ 21ರಂದು ರಾಜೀನಾಮೆ ನೀಡಿದ್ದ ಧನಕರ್ ಅವರ ಅಧಿಕಾರಾವಧಿ ಇನ್ನೂ ಎರಡು ವರ್ಷವಿತ್ತು.</div></div>.<ul><li><p>ಉಪ ರಾಷ್ಟ್ರಪತಿ ಚುನಾವಣೆ ಅಧಿಸೂಚನೆ ಪ್ರಕಟ: ಆಗಸ್ಟ್ 7</p></li><li><p>ನಾಮಪತ್ರ ಸಲ್ಲಿಕೆ ಕೊನೇ ದಿನ: ಆಗಸ್ಟ್ 21</p></li><li><p>ನಾಮಪತ್ರ ಪರಿಶೀಲನೆ: ಆಗಸ್ಟ್ 22</p></li><li><p>ನಾಮಪತ್ರ ಹಿಂಪಡೆಯಲು ಕೊನೇ ದಿನ: ಆಗಸ್ಟ್ 25</p></li><li><p>ಮತದಾನ ದಿನಾಂಕ: ಸೆಪ್ಟೆಂಬರ್ 9 (ಸಮಯ: ಬೆಳಿಗ್ಗೆ 10 – ಸಂಜೆ 5)</p></li><li><p>ಮತ ಎಣಿಕೆ: ಸೆಪ್ಟೆಂಬರ್ 9</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>