<p><strong>ನವದೆಹಲಿ:</strong> ಉಪರಾಷ್ಟ್ರಪತಿ ಮತ್ತು ರಾಜ್ಯಸಭೆಯ ಸಭಾಪತಿ ಜಗದೀಪ್ ಧನಕರ್ ಅವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬುಧವಾರ ಬಿಡುಗಡೆಯಾಗಿದ್ದಾರೆ.</p><p>ಎದೆ ನೋವು ಕಾಣಿಸಿಕೊಂಡ ಕಾರಣ ಮಾರ್ಚ್ 9ರಂದು ಧನಕರ್ ಅವರನ್ನು ದೆಹಲಿಯ ಏಮ್ಸ್ಗೆ ದಾಖಲಿಸಲಾಗಿತ್ತು.</p><p>‘ವೈದ್ಯರ ತಂಡ ಉಪರಾಷ್ಟ್ರಪತಿ ಧನಕರ್ ಅವರನ್ನು ಕಾಳಜಿಯಿಂದ ನೋಡಿಕೊಂಡಿದೆ. ಅವರು ಉತ್ತಮ ರೀತಿಯಲ್ಲಿ ಚೇತರಿಸಿಕೊಂಡ ಕಾರಣ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಮುಂದಿನ ಕೆಲವು ದಿನ ವಿಶ್ರಾಂತಿಗೆ ಸೂಚಿಸಲಾಗಿದೆ’ ಎಂದು ದೆಹಲಿಯ ಏಮ್ಸ್ ತಿಳಿಸಿದೆ.</p><p>ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಧನಕರ್, ಏಮ್ಸ್ ವೈದ್ಯರ ತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ.</p>.<p>ಆಸ್ಪತ್ರೆಗೆ ದಾಖಲಾಗಿದ್ದ ಧನಕರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ, ಸಚಿವ ಜೆ.ಪಿ. ನಡ್ಡಾ ಸೇರಿ ಹಲವರು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು.</p>.ಆರೋಗ್ಯದಲ್ಲಿ ಏರುಪೇರು: ಉಪರಾಷ್ಟ್ರಪತಿ ಜಗದೀಪ್ ಧನಕರ್ ಆಸ್ಪತ್ರೆಗೆ ದಾಖಲು.ಉಪರಾಷ್ಟ್ರಪತಿ ಜಗದೀಪ್ ಧನಕರ್ ಆಸ್ಪತ್ರೆಗೆ ದಾಖಲು: ಪ್ರಧಾನಿ ಮೋದಿ ಭೇಟಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಉಪರಾಷ್ಟ್ರಪತಿ ಮತ್ತು ರಾಜ್ಯಸಭೆಯ ಸಭಾಪತಿ ಜಗದೀಪ್ ಧನಕರ್ ಅವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬುಧವಾರ ಬಿಡುಗಡೆಯಾಗಿದ್ದಾರೆ.</p><p>ಎದೆ ನೋವು ಕಾಣಿಸಿಕೊಂಡ ಕಾರಣ ಮಾರ್ಚ್ 9ರಂದು ಧನಕರ್ ಅವರನ್ನು ದೆಹಲಿಯ ಏಮ್ಸ್ಗೆ ದಾಖಲಿಸಲಾಗಿತ್ತು.</p><p>‘ವೈದ್ಯರ ತಂಡ ಉಪರಾಷ್ಟ್ರಪತಿ ಧನಕರ್ ಅವರನ್ನು ಕಾಳಜಿಯಿಂದ ನೋಡಿಕೊಂಡಿದೆ. ಅವರು ಉತ್ತಮ ರೀತಿಯಲ್ಲಿ ಚೇತರಿಸಿಕೊಂಡ ಕಾರಣ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಮುಂದಿನ ಕೆಲವು ದಿನ ವಿಶ್ರಾಂತಿಗೆ ಸೂಚಿಸಲಾಗಿದೆ’ ಎಂದು ದೆಹಲಿಯ ಏಮ್ಸ್ ತಿಳಿಸಿದೆ.</p><p>ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಧನಕರ್, ಏಮ್ಸ್ ವೈದ್ಯರ ತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ.</p>.<p>ಆಸ್ಪತ್ರೆಗೆ ದಾಖಲಾಗಿದ್ದ ಧನಕರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ, ಸಚಿವ ಜೆ.ಪಿ. ನಡ್ಡಾ ಸೇರಿ ಹಲವರು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು.</p>.ಆರೋಗ್ಯದಲ್ಲಿ ಏರುಪೇರು: ಉಪರಾಷ್ಟ್ರಪತಿ ಜಗದೀಪ್ ಧನಕರ್ ಆಸ್ಪತ್ರೆಗೆ ದಾಖಲು.ಉಪರಾಷ್ಟ್ರಪತಿ ಜಗದೀಪ್ ಧನಕರ್ ಆಸ್ಪತ್ರೆಗೆ ದಾಖಲು: ಪ್ರಧಾನಿ ಮೋದಿ ಭೇಟಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>