<p><strong>ನವದೆಹಲಿ:</strong> ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರ ದಿಢೀರ್ ರಾಜೀನಾಮೆಗೆ ವಿರೋಧ ಪಕ್ಷದ ಅನೇಕ ನಾಯಕರು ಆಘಾತವನ್ನು ವ್ಯಕ್ತಪಡಿಸಿದ್ದಾರೆ. </p><p>ಧನಕರ್ ರಾಜೀನಾಮೆ ಸಂಬಂಧ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಇದನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಮಾತ್ರ ವಿವರಿಸಲು ಸಾಧ್ಯ ಎಂದು ವಿಪಕ್ಷಗಳ ನಾಯಕರು ಹೇಳಿದ್ದಾರೆ. </p><p>'ಧನಕರ್ ರಾಜೀನಾಮೆಗೆ ಹಲವು ಕಾರಣಗಳು ಇರಬಹುದು. ಅದನ್ನು ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರಿಂದ ಮಾತ್ರ ವಿವರಿಸಲು ಸಾಧ್ಯ. ಪ್ರಮುಖ ವಿಷಯವೆಂದರೆ ಅವರು ಆರೋಗ್ಯ ಕಾರಣಗಳಿಂದಾಗಿ ರಾಜೀನಾಮೆ ನೀಡಿಲ್ಲ' ಎಂದು ಸಿಪಿಐ ಸಂಸದ ಪಿ. ಸಂತೋಷ್ ಹೇಳಿದ್ದಾರೆ. </p><p>'ಸದನದಲ್ಲಿ ಅವರು (ಧನಕರ್) ಉತ್ಸಾಹದಿಂದ ಕಾರ್ಯ ನಿರ್ವಹಿಸುತ್ತಿದ್ದರು. ರಾಜೀನಾಮೆಗೆ ಇನ್ನೂ ಹಲವಾರು ಕಾರಣಗಳು ಇರಬಹುದು' ಎಂದು ಅವರು ಹೇಳಿದ್ದಾರೆ. </p><p>'ನಾನು ಏನು ಹೇಳಲಿ, ಅವರು ಆರೋಗ್ಯ ಕಾರಣದಿಂದಾಗಿ ರಾಜೀನಾಮೆ ನೀಡಿದ್ದಾರೆ. ಆದರೆ ಅದಕ್ಕಿಂತ ಹೆಚ್ಚಿನದ್ದೇನೋ ಇದೆ ಎಂದಷ್ಟೇ ಹೇಳಬಲ್ಲೆ' ಎಂದು ಸಮಾಜವಾದಿ ಪಕ್ಷದ ನಾಯಕ ರಾಮಗೋಪಾಲ್ ಯಾದವ್ ಪ್ರತಿಕ್ರಿಯಿಸಿದ್ದಾರೆ. </p><p>ಸೋಮವಾರ ಆರಂಭವಾದ ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನ ಕಲಾಪದಲ್ಲಿ ಭಾಗಿಯಾಗಿದ್ದ ರಾಜ್ಯಸಭೆಯ ಸಭಾಪತಿಯೂ ಆಗಿರುವ ಧನಕರ್, ವೈದ್ಯಕೀಯ ಕಾರಣಗಳನ್ನು ನೀಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಉಪ ರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ನೀಡಿದ್ದರು. </p> .VP Dhankhar Resignation: ಧನಕರ್ ದಿಢೀರ್ ರಾಜೀನಾಮೆ ಸುತ್ತ ಹಲವು ಅನುಮಾನಗಳು.ಧನಕರ್ ರಾಜೀನಾಮೆ: 1 ಗಂಟೆಯಿಂದ ಸಂಜೆ 4.30ರ ನಡುವೆ ಏನೋ ನಡೆದಿದೆ – ಕಾಂಗ್ರೆಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರ ದಿಢೀರ್ ರಾಜೀನಾಮೆಗೆ ವಿರೋಧ ಪಕ್ಷದ ಅನೇಕ ನಾಯಕರು ಆಘಾತವನ್ನು ವ್ಯಕ್ತಪಡಿಸಿದ್ದಾರೆ. </p><p>ಧನಕರ್ ರಾಜೀನಾಮೆ ಸಂಬಂಧ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಇದನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಮಾತ್ರ ವಿವರಿಸಲು ಸಾಧ್ಯ ಎಂದು ವಿಪಕ್ಷಗಳ ನಾಯಕರು ಹೇಳಿದ್ದಾರೆ. </p><p>'ಧನಕರ್ ರಾಜೀನಾಮೆಗೆ ಹಲವು ಕಾರಣಗಳು ಇರಬಹುದು. ಅದನ್ನು ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರಿಂದ ಮಾತ್ರ ವಿವರಿಸಲು ಸಾಧ್ಯ. ಪ್ರಮುಖ ವಿಷಯವೆಂದರೆ ಅವರು ಆರೋಗ್ಯ ಕಾರಣಗಳಿಂದಾಗಿ ರಾಜೀನಾಮೆ ನೀಡಿಲ್ಲ' ಎಂದು ಸಿಪಿಐ ಸಂಸದ ಪಿ. ಸಂತೋಷ್ ಹೇಳಿದ್ದಾರೆ. </p><p>'ಸದನದಲ್ಲಿ ಅವರು (ಧನಕರ್) ಉತ್ಸಾಹದಿಂದ ಕಾರ್ಯ ನಿರ್ವಹಿಸುತ್ತಿದ್ದರು. ರಾಜೀನಾಮೆಗೆ ಇನ್ನೂ ಹಲವಾರು ಕಾರಣಗಳು ಇರಬಹುದು' ಎಂದು ಅವರು ಹೇಳಿದ್ದಾರೆ. </p><p>'ನಾನು ಏನು ಹೇಳಲಿ, ಅವರು ಆರೋಗ್ಯ ಕಾರಣದಿಂದಾಗಿ ರಾಜೀನಾಮೆ ನೀಡಿದ್ದಾರೆ. ಆದರೆ ಅದಕ್ಕಿಂತ ಹೆಚ್ಚಿನದ್ದೇನೋ ಇದೆ ಎಂದಷ್ಟೇ ಹೇಳಬಲ್ಲೆ' ಎಂದು ಸಮಾಜವಾದಿ ಪಕ್ಷದ ನಾಯಕ ರಾಮಗೋಪಾಲ್ ಯಾದವ್ ಪ್ರತಿಕ್ರಿಯಿಸಿದ್ದಾರೆ. </p><p>ಸೋಮವಾರ ಆರಂಭವಾದ ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನ ಕಲಾಪದಲ್ಲಿ ಭಾಗಿಯಾಗಿದ್ದ ರಾಜ್ಯಸಭೆಯ ಸಭಾಪತಿಯೂ ಆಗಿರುವ ಧನಕರ್, ವೈದ್ಯಕೀಯ ಕಾರಣಗಳನ್ನು ನೀಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಉಪ ರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ನೀಡಿದ್ದರು. </p> .VP Dhankhar Resignation: ಧನಕರ್ ದಿಢೀರ್ ರಾಜೀನಾಮೆ ಸುತ್ತ ಹಲವು ಅನುಮಾನಗಳು.ಧನಕರ್ ರಾಜೀನಾಮೆ: 1 ಗಂಟೆಯಿಂದ ಸಂಜೆ 4.30ರ ನಡುವೆ ಏನೋ ನಡೆದಿದೆ – ಕಾಂಗ್ರೆಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>