ನವದೆಹಲಿ: ಮೇ 5 ಹಾಗೂ 6 ರಂದು ನಡೆಯುವ ಬ್ರಿಟನ್ ದೊರೆ ಮೂರನೇ ಚಾರ್ಲ್ಸ್ ಅವರ ಪಟ್ಟಾಭಿಷೇಕ ಸಮಾರಂಭದಲ್ಲಿ ಭಾರತದ ಪ್ರತಿನಿಧಿಯಾಗಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ಇಲಾಖೆ ತಿಳಿಸಿದೆ.
ಭಾರತ ಹಾಗೂ ಯುಕೆ ನಡುವೆ ಐತಿಹಾಸಿಕ ಸಂಬಂಧ ಇದ್ದು, ಪ್ರಜಾಪ್ರಭುತ್ವದ ಮೌಲ್ಯ, ಆಡಳಿತ ಹಾಗೂ ಅನೇಕ ವಿಷಯಗಳನ್ನು ಹಂಚಿಕೊಂಡಿದೆ ಎಂದು ಇಲಾಖೆಯ ಪತ್ರಿಕಾ ಪ್ರಕಟಣೆಯಲ್ಲಿ ಹೇಳಲಾಗಿದೆ.
ರಾಣಿ ಎರಡನೇ ಎಲಿಜಬೆತ್ ನಿಧನರಾದಾಗ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲಂಡನ್ಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದ್ದರು.