ಹಿಸಾರ್(ಹರಿಯಾಣ): ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಹಿರಿಯ ರೈತ ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ್ದಾರೆ.
ಹರಿಯಾಣದ ಹಿಸಾರ್ನ ಎಮ್ಮೆಗಳ ಸಂಶೋಧನಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಹಿರಿಯ ರೈತ ಮಹಿಳೆಯ ಪಾದಗಳನ್ನು ಮುಟ್ಟಿ ನಮಸ್ಕರಿಸಿದ ಧನಕರ್, ಅಲ್ಲಿ ಹಾಜರಿದ್ದ ರೈತರಿಗೆ ಹೊಸ ಸಂಸತ್ತಿನ ಕಟ್ಟಡಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದ್ದಾರೆ.