ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಷ್ಮಾ ಸ್ವರಾಜ್ ಪುಣ್ಯಸ್ಮರಣೆ: ವೆಂಕಯ್ಯ ನಾಯ್ಡು ಗೌರವ ನಮನ

Last Updated 6 ಆಗಸ್ಟ್ 2021, 7:47 IST
ಅಕ್ಷರ ಗಾತ್ರ

ನವದೆಹಲಿ:ಕೇಂದ್ರದ ಮಾಜಿ ಸಚಿವೆ, ದಿವಂಗತ ಸುಷ್ಮಾ ಸ್ವರಾಜ್ ಅವರ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರು ಗೌರವ ನಮನ ಸಲ್ಲಿಸಿದ್ದಾರೆ. ಇದೇ ವೇಳೆ,‘ಸುಷ್ಮಾ ಅವರು ರಾಷ್ಟ್ರಕ್ಕೆ ಸಲ್ಲಿಸಿರುವ ನಿಸ್ವಾರ್ಥ ಸೇವೆಯನ್ನು ಸದಾ ಸ್ಮರಿಸುತ್ತೇವೆ‘ ಎಂದು ಹೇಳಿದ್ದಾರೆ.

‘ಇಂದು ಪ್ರೀತಿಯ ಸಹೋದರಿ ಸುಷ್ಮಾ ಸ್ವರಾಜ್ ಅವರ ಪುಣ್ಯ ಸ್ಮರಣೆ. ಅವರೊಬ್ಬ ಅತ್ಯುತ್ತಮ ಸಂಸದೀಯ ಪಟು ಮತ್ತು ಉತ್ತಮ ವಾಗ್ಮಿ. ಮಹಿಳೆಯರು ಮತ್ತು ದೀನ ದಲಿತರ ವರ್ಗದ ಸಬಲೀಕರಣಕ್ಕಾಗಿ ಅಹರ್ನಿಶವಾಗಿ ಸೇವೆ ಸಲ್ಲಿಸಿದ ವ್ಯಕ್ತಿ‘ ಎಂದು ವೆಂಕಯ್ಯನಾಯ್ಡು ಅವರು ಟ್ವೀಟ್‌ ಮಾಡಿದ್ದಾರೆ.

‘ಎಲ್ಲ ಕ್ಷೇತ್ರಗಳ ಜನರ ಬಗ್ಗೆಯೂ ಸಹಾನಭೂತಿ ಹೊಂದಿದ್ದ, ದೇಶ ಸೇವೆಗೆ ಸಮರ್ಪಿಸಿಕೊಂಡಿದ್ದ ಧೀಮಂತ ನಾಯಕಿ ಸುಷ್ಮಾ ಸ್ವರಾಜ್. ಅವರ ನಿಸ್ವಾರ್ಥ ಸೇವೆಯನ್ನು ಸದಾ ಸ್ಮರಿಸುತ್ತೇವೆ‘ ಎಂದು ನಾಯ್ಡು ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT