ನವದೆಹಲಿ: ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರಿಗೆ ಕೋವಿಡ್–19 ತಗುಲಿರುವುದು ದೃಢಪಟ್ಟಿದೆ.
ಎರಡನೇ ಬಾರಿ ನಾಯ್ಡು ಅವರಿಗೆ ಸೋಂಕು ತಗುಲಿದೆ.
ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಸದ್ಯ ಹೈದರಾಬಾದ್ನಲ್ಲಿ ಇದ್ದಾರೆ. ಒಂದು ವಾರದ ತನಕ ಪ್ರತ್ಯೇಕ ವಾಸದಲ್ಲಿ ಇರಲು ಅವರು ನಿರ್ಧರಿಸಿದ್ದಾರೆ. ತಮ್ಮ ನಿಕಟ ಸಂಪರ್ಕಕ್ಕೆ ಬಂದವರು ಪ್ರತ್ಯೇಕ ವಾಸಕ್ಕೆ ಒಳಗಾಗುವಂತೆ ಅವರು ಸಲಹೆ ನೀಡಿದ್ದಾರೆ ಎಂದುಉಪರಾಷ್ಟ್ರಪತಿಯವರ ಕಾರ್ಯಾಲಯ ಭಾನುವಾರ ಟ್ವೀಟ್ ಮಾಡಿದೆ.
ವೆಂಕಯ್ಯ ನಾಯ್ಡು ಅವರಿಗೆ ಕೋವಿಡ್ ದೃಢಪಟ್ಟಿರುವುದರಿಂದ ಅವರು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.