<p><strong>ನವದೆಹಲಿ:</strong> ಉಪರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಜಗದೀಪ್ ಧನಕರ್ ಮೊದಲ ಬಾರಿಗೆ ಇಂದು (ಶುಕ್ರವಾರ) ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. </p><p>ಉಪರಾಷ್ಟ್ರಪತಿಯಾಗಿ ಚುನಾಯಿತರಾಗಿರುವ ಸಿ.ಪಿ.ರಾಧಾಕೃಷ್ಣನ್ ಅವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಧನಕರ್ ಪಾಲ್ಗೊಂಡಿದ್ದು, ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. </p><p>ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿ.ಪಿ.ರಾಧಾಕೃಷ್ಣನ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದ್ದಾರೆ. </p><p>ಈ ಸಂಬಂಧ ಸುದ್ದಿ ಸಂಸ್ಥೆ 'ಎಎನ್ಐ' ವಿಡಿಯೊವನ್ನು ಹಂಚಿಕೊಂಡಿದೆ. </p>. <p>ಅನಾರೋಗ್ಯದ ಕಾರಣ ನೀಡಿ ಜುಲೈ 21ರಂದು ಉಪರಾಷ್ಟ್ರಪತಿ ಹುದ್ದೆಗೆ ಧನಕರ್ ರಾಜೀನಾಮೆ ಸಲ್ಲಿಸಿದ್ದರು. ಅದಾದ ಬಳಿಕ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. </p><p>ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಹುದ್ದೆಗೆ ಸಿ.ಪಿ.ರಾಧಾಕೃಷ್ಣನ್ ಚುನಾಯಿತರಾಗಿದ್ದರು. </p><p>ಸೆ. 9ರಂದು ನಡೆದ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್ ಅವರು, ವಿರೋಧ ಪಕ್ಷಗಳ ಅಭ್ಯರ್ಥಿ ಬಿ. ಸುದರ್ಶನ ರೆಡ್ಡಿ ಅವರಿಗಿಂತ 152 ಹೆಚ್ಚು ಮತಗಳನ್ನು ಪಡೆದು ಜಯಗಳಿಸಿದ್ದರು.</p> .Vice President: ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ರಾಧಾಕೃಷ್ಣನ್.ಸಂಪಾದಕೀಯ | ಧನಕರ್ ದಿಢೀರ್ ರಾಜೀನಾಮೆ: ಪ್ರಶ್ನೆಗಳು ಹಲವು, ಕಾರಣ ನಿಗೂಢ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಉಪರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಜಗದೀಪ್ ಧನಕರ್ ಮೊದಲ ಬಾರಿಗೆ ಇಂದು (ಶುಕ್ರವಾರ) ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. </p><p>ಉಪರಾಷ್ಟ್ರಪತಿಯಾಗಿ ಚುನಾಯಿತರಾಗಿರುವ ಸಿ.ಪಿ.ರಾಧಾಕೃಷ್ಣನ್ ಅವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಧನಕರ್ ಪಾಲ್ಗೊಂಡಿದ್ದು, ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. </p><p>ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿ.ಪಿ.ರಾಧಾಕೃಷ್ಣನ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದ್ದಾರೆ. </p><p>ಈ ಸಂಬಂಧ ಸುದ್ದಿ ಸಂಸ್ಥೆ 'ಎಎನ್ಐ' ವಿಡಿಯೊವನ್ನು ಹಂಚಿಕೊಂಡಿದೆ. </p>. <p>ಅನಾರೋಗ್ಯದ ಕಾರಣ ನೀಡಿ ಜುಲೈ 21ರಂದು ಉಪರಾಷ್ಟ್ರಪತಿ ಹುದ್ದೆಗೆ ಧನಕರ್ ರಾಜೀನಾಮೆ ಸಲ್ಲಿಸಿದ್ದರು. ಅದಾದ ಬಳಿಕ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. </p><p>ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಹುದ್ದೆಗೆ ಸಿ.ಪಿ.ರಾಧಾಕೃಷ್ಣನ್ ಚುನಾಯಿತರಾಗಿದ್ದರು. </p><p>ಸೆ. 9ರಂದು ನಡೆದ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್ ಅವರು, ವಿರೋಧ ಪಕ್ಷಗಳ ಅಭ್ಯರ್ಥಿ ಬಿ. ಸುದರ್ಶನ ರೆಡ್ಡಿ ಅವರಿಗಿಂತ 152 ಹೆಚ್ಚು ಮತಗಳನ್ನು ಪಡೆದು ಜಯಗಳಿಸಿದ್ದರು.</p> .Vice President: ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ರಾಧಾಕೃಷ್ಣನ್.ಸಂಪಾದಕೀಯ | ಧನಕರ್ ದಿಢೀರ್ ರಾಜೀನಾಮೆ: ಪ್ರಶ್ನೆಗಳು ಹಲವು, ಕಾರಣ ನಿಗೂಢ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>