<p><strong>ರಾಂಚಿ:</strong> ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಹೇಮಂತ್ ಸೊರೇನ್ಗೆ ಜಾಮೀನು ನೀಡಿರುವ ಹೈಕೋರ್ಟ್ನ ಆದೇಶವು ಸತ್ಯಕ್ಕೆ ಸಂದ ಜಯವಾಗಿದೆ ಎಂದು ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೇನ್ ಹೇಳಿದ್ದಾರೆ.</p>.<p>ಭೂಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿದ್ದ ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರಿಗೆ ಜಾರ್ಖಂಡ್ ಹೈಕೋರ್ಟ್ ಇಂದು (ಶುಕ್ರವಾರ) ಜಾಮೀನು ಮಂಜೂರು ಮಾಡಿದೆ. </p><p>ಈ ಕುರಿತ ಅರ್ಜಿಯನ್ನು ಜೂನ್ 13ರಂದು ವಿಚಾರಣೆ ನಡೆಸಿದ್ದ ನ್ಯಾಯಾಲಯವು ಆದೇಶವನ್ನು ಕಾಯ್ದಿರಿಸಿತ್ತು.</p><p>ಈ ಸಂಬಂಧ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಚಂಪೈ ಸೊರೇನ್, ‘ಸತ್ಯವು ಹಲವು ತೊಂದರೆಗಳನ್ನು ಎದುರಿಸುತ್ತದೆ. ಆದರೆ, ಸೋಲುವುದಿಲ್ಲ’ ಎಂದು ಹೇಳಿದ್ದಾರೆ. ಇದರೊಂದಿಗೆ ಸತ್ಯಮೇವ ಜಯತೆ ಎಂದು ಘೋಷಣೆಯನ್ನು ಟ್ಯಾಗ್ ಮಾಡುವ ಮೂಲಕ ಹೇಮಂತ್ ಸೊರೇನ್ ಜತೆಗಿನ ಫೋಟೊವನ್ನು ಹಂಚಿಕೊಂಡಿದ್ದಾರೆ.</p><p>‘ನಮಗೆ ನ್ಯಾಯಾಂಗದ ಮೇಲೆ ನಂಬಿಕೆ ಇತ್ತು. ಸತ್ಯ ಮೇಲುಗೈ ಸಾಧಿಸಿದೆ. ಜಾರ್ಖಂಡ್ ಹೈಕೋರ್ಟ್ಗೆ ಧನ್ಯವಾದ ಹೇಳಲು ಬಯಸುತ್ತೇನೆ’ ಎಂದು ಜಾರ್ಖಂಡ್ ಸಚಿವ, ಹೇಮಂತ್ ಸೊರೇನ್ ಅವರ ಕಿರಿಯ ಸಹೋದರ ಬಸಂತ್ ಸೊರೇನ್ ಹೇಳಿದ್ದಾರೆ.</p>.ಹಣ ಅಕ್ರಮ ವರ್ಗಾವಣೆ ಪ್ರಕರಣ: ಜಾರ್ಖಂಡ್ ಮಾಜಿ CM ಹೇಮಂತ್ ಸೊರೇನ್ಗೆ ಜಾಮೀನು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಂಚಿ:</strong> ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಹೇಮಂತ್ ಸೊರೇನ್ಗೆ ಜಾಮೀನು ನೀಡಿರುವ ಹೈಕೋರ್ಟ್ನ ಆದೇಶವು ಸತ್ಯಕ್ಕೆ ಸಂದ ಜಯವಾಗಿದೆ ಎಂದು ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೇನ್ ಹೇಳಿದ್ದಾರೆ.</p>.<p>ಭೂಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿದ್ದ ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರಿಗೆ ಜಾರ್ಖಂಡ್ ಹೈಕೋರ್ಟ್ ಇಂದು (ಶುಕ್ರವಾರ) ಜಾಮೀನು ಮಂಜೂರು ಮಾಡಿದೆ. </p><p>ಈ ಕುರಿತ ಅರ್ಜಿಯನ್ನು ಜೂನ್ 13ರಂದು ವಿಚಾರಣೆ ನಡೆಸಿದ್ದ ನ್ಯಾಯಾಲಯವು ಆದೇಶವನ್ನು ಕಾಯ್ದಿರಿಸಿತ್ತು.</p><p>ಈ ಸಂಬಂಧ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಚಂಪೈ ಸೊರೇನ್, ‘ಸತ್ಯವು ಹಲವು ತೊಂದರೆಗಳನ್ನು ಎದುರಿಸುತ್ತದೆ. ಆದರೆ, ಸೋಲುವುದಿಲ್ಲ’ ಎಂದು ಹೇಳಿದ್ದಾರೆ. ಇದರೊಂದಿಗೆ ಸತ್ಯಮೇವ ಜಯತೆ ಎಂದು ಘೋಷಣೆಯನ್ನು ಟ್ಯಾಗ್ ಮಾಡುವ ಮೂಲಕ ಹೇಮಂತ್ ಸೊರೇನ್ ಜತೆಗಿನ ಫೋಟೊವನ್ನು ಹಂಚಿಕೊಂಡಿದ್ದಾರೆ.</p><p>‘ನಮಗೆ ನ್ಯಾಯಾಂಗದ ಮೇಲೆ ನಂಬಿಕೆ ಇತ್ತು. ಸತ್ಯ ಮೇಲುಗೈ ಸಾಧಿಸಿದೆ. ಜಾರ್ಖಂಡ್ ಹೈಕೋರ್ಟ್ಗೆ ಧನ್ಯವಾದ ಹೇಳಲು ಬಯಸುತ್ತೇನೆ’ ಎಂದು ಜಾರ್ಖಂಡ್ ಸಚಿವ, ಹೇಮಂತ್ ಸೊರೇನ್ ಅವರ ಕಿರಿಯ ಸಹೋದರ ಬಸಂತ್ ಸೊರೇನ್ ಹೇಳಿದ್ದಾರೆ.</p>.ಹಣ ಅಕ್ರಮ ವರ್ಗಾವಣೆ ಪ್ರಕರಣ: ಜಾರ್ಖಂಡ್ ಮಾಜಿ CM ಹೇಮಂತ್ ಸೊರೇನ್ಗೆ ಜಾಮೀನು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>