<p><strong>ಚೆನ್ನೈ:</strong> ಐಐಟಿ–ಮದ್ರಾಸ್ ನಿರ್ದೇಶಕ ವಿ. ಕಾಮಕೋಟಿ ಅವರು ಗೋಮೂತ್ರದ ಔಷಧೀಯ ಮಹತ್ವವನ್ನು ಹೊಗಳುತ್ತಿರುವುದು ಎನ್ನಲಾದ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳ ಮೂಲಕ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ.</p>.<p>ದೇಶಿ ಗೋತಳಿಗಳ ಸಂರಕ್ಷಣೆ ಮತ್ತು ಸಾವಯವ ಕೃಷಿಯ ಮಹತ್ವದ ಬಗ್ಗೆ ಮಾತನಾಡುವ ಸಂದರ್ಭದಲ್ಲಿ ಅವರು ಗೋಮೂತ್ರದ ಕುರಿತು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.</p>.<p>ಜನವರಿ 15ರಂದು ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಸನ್ಯಾಸಿಯೊಬ್ಬರ ಜೀವನದಲ್ಲಿ ನಡೆದ ಘಟನೆಯನ್ನು ವಿವರಿಸಿದ್ದಾರೆ. ಸನ್ಯಾಸಿಗೆ ಒಮ್ಮೆ ಜ್ವರ ಬಂದಿದ್ದಾಗ ಅವರು ಗೋಮೂತ್ರ ಸೇವಿಸಿದರು, ಜ್ವರ ಗುಣವಾಯಿತು ಎಂದು ಕಾಮಕೋಟಿ ಅವರು ಹೇಳಿದ್ದಾರೆ.</p>.<p class="title">ಗೋಮೂತ್ರವು ಬ್ಯಾಕ್ಟೀರಿಯಾ ಮತ್ತು ಶಿಲೀಂಧ್ರ ವಿರೋಧಿ ಗುಣಗಳನ್ನು ಹೊಂದಿದೆ ಎಂದು ಅವರು ಹೇಳಿದ್ದಾರೆ. ಗೋಮೂತ್ರದ ಔಷಧೀಯ ಮಹತ್ವವನ್ನು ಪರಿಗಣಿಸಬೇಕು ಎಂದಿದ್ದಾರೆ.</p>.<p class="title">ಕಾಮಕೋಟಿ ಅವರ ಮಾತುಗಳಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಡಿಎಂಕೆ ನಾಯಕ ಟಿ.ಕೆ.ಎಸ್. ಇಳಂಗೋವನ್, ‘ದೇಶದಲ್ಲಿ ಶಿಕ್ಷಣವನ್ನು ಹಾಳುಮಾಡುವುದು ಕೇಂದ್ರದ ಉದ್ದೇಶ’ ಎಂದು ಹೇಳಿದ್ದಾರೆ.</p>.<p class="title">‘ತಮ್ಮ ಮಾತುಗಳಿಗೆ ಕಾಮಕೋಟಿ ಅವರು ಆಧಾರ ಒದಗಿಸಬೇಕು. ಅದು ಸಾಧ್ಯವಾಗದಿದ್ದರೆ ಅವರು ಕ್ಷಮೆ ಯಾಚಿಸಬೇಕು. ಕ್ಷಮೆ ಕೇಳದೆ ಇದ್ದರೆ ನಾವು ಅವರ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ’ ಎಂದು ತಂಥೈ ಪೆರಿಯಾರ್ ದ್ರಾವಿಡರ್ ಕಳಗಂ ನಾಯಕ ಕೆ. ರಾಮಕೃಷ್ಣನ್ ಅವರು ಒತ್ತಾಯಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಐಐಟಿ–ಮದ್ರಾಸ್ ನಿರ್ದೇಶಕ ವಿ. ಕಾಮಕೋಟಿ ಅವರು ಗೋಮೂತ್ರದ ಔಷಧೀಯ ಮಹತ್ವವನ್ನು ಹೊಗಳುತ್ತಿರುವುದು ಎನ್ನಲಾದ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳ ಮೂಲಕ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ.</p>.<p>ದೇಶಿ ಗೋತಳಿಗಳ ಸಂರಕ್ಷಣೆ ಮತ್ತು ಸಾವಯವ ಕೃಷಿಯ ಮಹತ್ವದ ಬಗ್ಗೆ ಮಾತನಾಡುವ ಸಂದರ್ಭದಲ್ಲಿ ಅವರು ಗೋಮೂತ್ರದ ಕುರಿತು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.</p>.<p>ಜನವರಿ 15ರಂದು ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಸನ್ಯಾಸಿಯೊಬ್ಬರ ಜೀವನದಲ್ಲಿ ನಡೆದ ಘಟನೆಯನ್ನು ವಿವರಿಸಿದ್ದಾರೆ. ಸನ್ಯಾಸಿಗೆ ಒಮ್ಮೆ ಜ್ವರ ಬಂದಿದ್ದಾಗ ಅವರು ಗೋಮೂತ್ರ ಸೇವಿಸಿದರು, ಜ್ವರ ಗುಣವಾಯಿತು ಎಂದು ಕಾಮಕೋಟಿ ಅವರು ಹೇಳಿದ್ದಾರೆ.</p>.<p class="title">ಗೋಮೂತ್ರವು ಬ್ಯಾಕ್ಟೀರಿಯಾ ಮತ್ತು ಶಿಲೀಂಧ್ರ ವಿರೋಧಿ ಗುಣಗಳನ್ನು ಹೊಂದಿದೆ ಎಂದು ಅವರು ಹೇಳಿದ್ದಾರೆ. ಗೋಮೂತ್ರದ ಔಷಧೀಯ ಮಹತ್ವವನ್ನು ಪರಿಗಣಿಸಬೇಕು ಎಂದಿದ್ದಾರೆ.</p>.<p class="title">ಕಾಮಕೋಟಿ ಅವರ ಮಾತುಗಳಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಡಿಎಂಕೆ ನಾಯಕ ಟಿ.ಕೆ.ಎಸ್. ಇಳಂಗೋವನ್, ‘ದೇಶದಲ್ಲಿ ಶಿಕ್ಷಣವನ್ನು ಹಾಳುಮಾಡುವುದು ಕೇಂದ್ರದ ಉದ್ದೇಶ’ ಎಂದು ಹೇಳಿದ್ದಾರೆ.</p>.<p class="title">‘ತಮ್ಮ ಮಾತುಗಳಿಗೆ ಕಾಮಕೋಟಿ ಅವರು ಆಧಾರ ಒದಗಿಸಬೇಕು. ಅದು ಸಾಧ್ಯವಾಗದಿದ್ದರೆ ಅವರು ಕ್ಷಮೆ ಯಾಚಿಸಬೇಕು. ಕ್ಷಮೆ ಕೇಳದೆ ಇದ್ದರೆ ನಾವು ಅವರ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ’ ಎಂದು ತಂಥೈ ಪೆರಿಯಾರ್ ದ್ರಾವಿಡರ್ ಕಳಗಂ ನಾಯಕ ಕೆ. ರಾಮಕೃಷ್ಣನ್ ಅವರು ಒತ್ತಾಯಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>