<p><strong>ಚೆನ್ನೈ</strong>: ಐಐಟಿ ಮದ್ರಾಸ್ ನಿರ್ದೇಶಕ ವಿ. ಕಾಮಕೋಟಿ ಅವರು ಗೋಮೂತ್ರದ ‘ಔಷಧೀಯ’ ಗುಣಗಳ ಬಗ್ಗೆ ಶ್ಲಾಘಿಸಿ ಮಾತನಾಡಿರುವ ವಿಡಿಯೊ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.</p><p>ಜನವರಿ 15ರಂದು ‘ಮಾಟು ಪೊಂಗಲ್’ ದಿನದಂದು ಇಲ್ಲಿನ ಗೋ ಸಂರಕ್ಷಣಾ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ಉಪನ್ಯಾಸ ನೀಡಿದ್ದರು. </p><p>‘ಗೋಮೂತ್ರವು ಆಂಟಿಬ್ಯಾಕ್ಟೀರಿಯಲ್, ಆಂಟಿಫಂಗಲ್ ಮತ್ತು ಜೀರ್ಣಕಾರಿ ಗುಣಲಕ್ಷಣಗಳನ್ನು ಹೊಂದಿದ್ದು, ಇರಿಟೇಬಲ್ ಬೊವೆಲ್ ಸಿಂಡ್ರೋಮ್ ಅಂತಹ ಸಮಸ್ಯೆಗಳನ್ನು ಇದು ದೂರ ಮಾಡುತ್ತದೆ. ಗೋಮೂತ್ರಕೆ ಅನೇಕ ಔಷಧೀಯ ಗುಣಗಳಿವೆ’ ಎಂದು ಹೇಳಿರುವುದು ವಿಡಿಯೊದಲ್ಲಿ ಇದೆ.</p>.<p>ತೀವ್ರ ಜ್ವರ ಬಂದಾಗ ಗೋಮೂತ್ರ ಸೇವಿಸಿದ ಸನ್ಯಾಸಿಯೊಬ್ಬನ ಜೀವನದ ವೃತ್ತಾಂತವನ್ನು ಹೇಳುವಾಗ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.</p><p>ಇನ್ನು, ಐಐಟಿ ನಿರ್ದೇಶಕರ ಹೇಳಿಕೆಗಳನ್ನು ಟೀಕಿಸಿ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ನಾಯಕ ಕಾರ್ತಿ ಪಿ. ಚಿದಂಬರಂ, ‘ಐಐಟಿ ಮದ್ರಾಸ್ ನಿರ್ದೇಶಕರು ಹುಸಿ ವಿಜ್ಞಾನವನ್ನು ಪ್ರಚಾರ ಮಾಡುತ್ತಿರುವುದು ಆಘಾತಕಾರಿಯಾಗಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ಐಐಟಿ ಮದ್ರಾಸ್ ನಿರ್ದೇಶಕ ವಿ. ಕಾಮಕೋಟಿ ಅವರು ಗೋಮೂತ್ರದ ‘ಔಷಧೀಯ’ ಗುಣಗಳ ಬಗ್ಗೆ ಶ್ಲಾಘಿಸಿ ಮಾತನಾಡಿರುವ ವಿಡಿಯೊ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.</p><p>ಜನವರಿ 15ರಂದು ‘ಮಾಟು ಪೊಂಗಲ್’ ದಿನದಂದು ಇಲ್ಲಿನ ಗೋ ಸಂರಕ್ಷಣಾ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ಉಪನ್ಯಾಸ ನೀಡಿದ್ದರು. </p><p>‘ಗೋಮೂತ್ರವು ಆಂಟಿಬ್ಯಾಕ್ಟೀರಿಯಲ್, ಆಂಟಿಫಂಗಲ್ ಮತ್ತು ಜೀರ್ಣಕಾರಿ ಗುಣಲಕ್ಷಣಗಳನ್ನು ಹೊಂದಿದ್ದು, ಇರಿಟೇಬಲ್ ಬೊವೆಲ್ ಸಿಂಡ್ರೋಮ್ ಅಂತಹ ಸಮಸ್ಯೆಗಳನ್ನು ಇದು ದೂರ ಮಾಡುತ್ತದೆ. ಗೋಮೂತ್ರಕೆ ಅನೇಕ ಔಷಧೀಯ ಗುಣಗಳಿವೆ’ ಎಂದು ಹೇಳಿರುವುದು ವಿಡಿಯೊದಲ್ಲಿ ಇದೆ.</p>.<p>ತೀವ್ರ ಜ್ವರ ಬಂದಾಗ ಗೋಮೂತ್ರ ಸೇವಿಸಿದ ಸನ್ಯಾಸಿಯೊಬ್ಬನ ಜೀವನದ ವೃತ್ತಾಂತವನ್ನು ಹೇಳುವಾಗ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.</p><p>ಇನ್ನು, ಐಐಟಿ ನಿರ್ದೇಶಕರ ಹೇಳಿಕೆಗಳನ್ನು ಟೀಕಿಸಿ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ನಾಯಕ ಕಾರ್ತಿ ಪಿ. ಚಿದಂಬರಂ, ‘ಐಐಟಿ ಮದ್ರಾಸ್ ನಿರ್ದೇಶಕರು ಹುಸಿ ವಿಜ್ಞಾನವನ್ನು ಪ್ರಚಾರ ಮಾಡುತ್ತಿರುವುದು ಆಘಾತಕಾರಿಯಾಗಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>