<p><strong>ಅಹಮದಾಬಾದ್:</strong> ಅಹಮದಾಬಾದ್ನ ವಸ್ತ್ರಾಪುರ ಪ್ರದೇಶದ ಲೇಕ್ ಗಾರ್ಡನ್ನಲ್ಲಿ ಕೆಲವು ಮುಸ್ಲಿಮರು ನಮಾಜ್ ನಡೆಸಿದ್ದರು ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಕಾರ್ಯಕರ್ತರು ಪ್ರದೇಶದಲ್ಲಿ ಶುದ್ಧೀಕರಣ ನಡೆಸಿರುವ ಘಟನೆ ವರದಿಯಾಗಿದೆ.</p>.<p>ಕೆಲವು ದಿನಗಳ ಹಿಂದೆ, ವಸ್ತ್ರಾಪುರ ಲೇಕ್ ಗಾರ್ಡನ್ನಲ್ಲಿ ಮಹಿಳೆಯರು ಸೇರಿದಂತೆ ಆರು ಮಂದಿ ಮುಸ್ಲಿಮರು ನಮಾಜ್ ನಡೆಸಿದ್ದರು ಎನ್ನಲಾಗಿದೆ. ಪ್ರಸ್ತುತ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.</p>.<p>ಇದನ್ನೂ ಓದಿ:<a href="https://www.prajavani.net/india-news/lakhimpur-kheri-violence-case-sc-appoints-ex-judge-rakesh-kumar-jain-to-monitor-sit-probe-884537.html" itemprop="url">ಲಖಿಂಪುರ: ತನಿಖೆ ಮೇಲ್ವಿಚಾರಣೆಗೆ ನಿವೃತ್ತ ನ್ಯಾ. ರಾಕೇಶ್ ಕುಮಾರ್ ಜೈನ್ ನೇಮಕ </a></p>.<p>ಈ ಬಗ್ಗೆ ಯಾವುದೇ ಎಫ್ಐಆರ್ ದಾಖಲಾಗಿಲ್ಲ ಮತ್ತು ಶುದ್ಧೀಕರಣಕ್ಕೆ ಸಂಬಂಧಿಸಿದಂತೆ ಯಾರೂ ಸಂಪರ್ಕಿಸಿಲ್ಲ ಎಂದು ವಸ್ತ್ರಾಪುರ ಪೊಲೀಸ್ ಇನ್ಸ್ಪೆಕ್ಟರ್ ಸಂದೀಪ್ ಖಂಬ್ಲಾ ತಿಳಿಸಿದ್ದಾರೆ.</p>.<p>ಕೆರೆಯ ಸಮೀಪವಿರುವ ಬಹುಮಹಡಿ ಕಟ್ಟಡದ ನಿವಾಸಿಯೊಬ್ಬರು ಈ ವಿಡಿಯೊವನ್ನು ಚಿತ್ರೀಕರಿಸಿರಬಹುದು ಎನ್ನಲಾಗಿದೆ. ಬಳಿಕ ಸ್ಥಳಕ್ಕೆ ಆಗಮಿಸಿರುವ ವಿಎಚ್ಪಿ ಕಾರ್ಯಕರ್ತರು ಮಂತ್ರಗಳನ್ನು ಪಠಿಸಿ ಗಂಗಾಜಲವನ್ನು ಸಿಂಪಡಿಸಿ ಶುದ್ಧೀಕರಣ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್:</strong> ಅಹಮದಾಬಾದ್ನ ವಸ್ತ್ರಾಪುರ ಪ್ರದೇಶದ ಲೇಕ್ ಗಾರ್ಡನ್ನಲ್ಲಿ ಕೆಲವು ಮುಸ್ಲಿಮರು ನಮಾಜ್ ನಡೆಸಿದ್ದರು ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಕಾರ್ಯಕರ್ತರು ಪ್ರದೇಶದಲ್ಲಿ ಶುದ್ಧೀಕರಣ ನಡೆಸಿರುವ ಘಟನೆ ವರದಿಯಾಗಿದೆ.</p>.<p>ಕೆಲವು ದಿನಗಳ ಹಿಂದೆ, ವಸ್ತ್ರಾಪುರ ಲೇಕ್ ಗಾರ್ಡನ್ನಲ್ಲಿ ಮಹಿಳೆಯರು ಸೇರಿದಂತೆ ಆರು ಮಂದಿ ಮುಸ್ಲಿಮರು ನಮಾಜ್ ನಡೆಸಿದ್ದರು ಎನ್ನಲಾಗಿದೆ. ಪ್ರಸ್ತುತ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.</p>.<p>ಇದನ್ನೂ ಓದಿ:<a href="https://www.prajavani.net/india-news/lakhimpur-kheri-violence-case-sc-appoints-ex-judge-rakesh-kumar-jain-to-monitor-sit-probe-884537.html" itemprop="url">ಲಖಿಂಪುರ: ತನಿಖೆ ಮೇಲ್ವಿಚಾರಣೆಗೆ ನಿವೃತ್ತ ನ್ಯಾ. ರಾಕೇಶ್ ಕುಮಾರ್ ಜೈನ್ ನೇಮಕ </a></p>.<p>ಈ ಬಗ್ಗೆ ಯಾವುದೇ ಎಫ್ಐಆರ್ ದಾಖಲಾಗಿಲ್ಲ ಮತ್ತು ಶುದ್ಧೀಕರಣಕ್ಕೆ ಸಂಬಂಧಿಸಿದಂತೆ ಯಾರೂ ಸಂಪರ್ಕಿಸಿಲ್ಲ ಎಂದು ವಸ್ತ್ರಾಪುರ ಪೊಲೀಸ್ ಇನ್ಸ್ಪೆಕ್ಟರ್ ಸಂದೀಪ್ ಖಂಬ್ಲಾ ತಿಳಿಸಿದ್ದಾರೆ.</p>.<p>ಕೆರೆಯ ಸಮೀಪವಿರುವ ಬಹುಮಹಡಿ ಕಟ್ಟಡದ ನಿವಾಸಿಯೊಬ್ಬರು ಈ ವಿಡಿಯೊವನ್ನು ಚಿತ್ರೀಕರಿಸಿರಬಹುದು ಎನ್ನಲಾಗಿದೆ. ಬಳಿಕ ಸ್ಥಳಕ್ಕೆ ಆಗಮಿಸಿರುವ ವಿಎಚ್ಪಿ ಕಾರ್ಯಕರ್ತರು ಮಂತ್ರಗಳನ್ನು ಪಠಿಸಿ ಗಂಗಾಜಲವನ್ನು ಸಿಂಪಡಿಸಿ ಶುದ್ಧೀಕರಣ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>