<p><strong>ಮುಂಬೈ</strong>: ಮಹಾರಾಷ್ಟ್ರದ ಹಳ್ಳಿಯೊಂದರ ಗ್ರಾಮಸ್ಥರು ಹೊಸದಾಗಿ ಹಾಕಿರುವ ರಸ್ತೆಯ ಡಾಂಬರನ್ನು ಬರಿಗೈನಲ್ಲಿ ಎತ್ತುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಹಲವು ಮಂದಿ ಟ್ವಿಟರ್ ಬಳಕೆದಾರರು ಈ ವಿಡಿಯೊ ಹಂಚಿಕೊಂಡಿದ್ದಾರೆ.</p><p>36 ಸೆಕೆಂಡುಗಳ ವಿಡಿಯೊದಲ್ಲಿ ಕಾರ್ಪೆಟ್ ರೀತಿಯ ವಸ್ತುವನ್ನು ಬಳಸಿ ಸ್ಥಳೀಯ ಗುತ್ತಿಗೆದಾರ ಹಾಕಿರುವ ಡಾಂಬರನ್ನು ಗ್ರಾಮಸ್ಥರು ಮೇಲೆತ್ತುತ್ತಿದ್ದಾರೆ. ಕಳಪೆ ಕಾಮಗಾರಿ ನಡೆಸಿರುವ ಸ್ಥಳೀಯ ಗುತ್ತಿಗೆದಾರ ರಾಣಾ ಠಾಕೂರ್ ಎಂಬವರ ವಿರುದ್ಧ ಜನರು ವಾಗ್ದಾಳಿ ನಡೆಸುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದಾಗಿದೆ. </p>. <p> ಫ್ರೀ ಪ್ರೆಸ್ ಜರ್ನಲ್ ವರದಿ ಪ್ರಕಾರ, ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ಅಂಬಡ್ ತಾಲೂಕಿನ ಕರ್ಜತ್ ಹಸ್ತ್ ಪೊಖರಿ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಪ್ರಧಾನಮಂತ್ರಿ ಗ್ರಾಮೀಣ ರಸ್ತೆ ಅಭಿವೃದ್ಧಿ ಯೋಜನೆಯಡಿ ಈ ರಸ್ತೆಯನ್ನು ನಿರ್ಮಾಣ ಮಾಡಲಾಗಿದೆ.</p><p>ಈ ರಸ್ತೆ ನಿರ್ಮಾಣಕ್ಕೆ ಜರ್ಮನಿ ತಂತ್ರಜ್ಞಾನ ಬಳಸಿದ್ದಾಗಿ ಗುತ್ತಿಗೆದಾರ ಹೇಳಿಕೊಂಡಿರುವುದಾಗಿಯೂ ವರದಿ ತಿಳಿಸಿದೆ.</p><p>ಕಳಪೆ ಕಾಮಗಾರಿಯನ್ನು ಅನುಮೋದಿಸಿರುವ ಎಂಜಿನಿಯರ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಸರ್ಕಾರವನ್ನು ಒತ್ತಾಯಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಮಹಾರಾಷ್ಟ್ರದ ಹಳ್ಳಿಯೊಂದರ ಗ್ರಾಮಸ್ಥರು ಹೊಸದಾಗಿ ಹಾಕಿರುವ ರಸ್ತೆಯ ಡಾಂಬರನ್ನು ಬರಿಗೈನಲ್ಲಿ ಎತ್ತುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಹಲವು ಮಂದಿ ಟ್ವಿಟರ್ ಬಳಕೆದಾರರು ಈ ವಿಡಿಯೊ ಹಂಚಿಕೊಂಡಿದ್ದಾರೆ.</p><p>36 ಸೆಕೆಂಡುಗಳ ವಿಡಿಯೊದಲ್ಲಿ ಕಾರ್ಪೆಟ್ ರೀತಿಯ ವಸ್ತುವನ್ನು ಬಳಸಿ ಸ್ಥಳೀಯ ಗುತ್ತಿಗೆದಾರ ಹಾಕಿರುವ ಡಾಂಬರನ್ನು ಗ್ರಾಮಸ್ಥರು ಮೇಲೆತ್ತುತ್ತಿದ್ದಾರೆ. ಕಳಪೆ ಕಾಮಗಾರಿ ನಡೆಸಿರುವ ಸ್ಥಳೀಯ ಗುತ್ತಿಗೆದಾರ ರಾಣಾ ಠಾಕೂರ್ ಎಂಬವರ ವಿರುದ್ಧ ಜನರು ವಾಗ್ದಾಳಿ ನಡೆಸುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದಾಗಿದೆ. </p>. <p> ಫ್ರೀ ಪ್ರೆಸ್ ಜರ್ನಲ್ ವರದಿ ಪ್ರಕಾರ, ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ಅಂಬಡ್ ತಾಲೂಕಿನ ಕರ್ಜತ್ ಹಸ್ತ್ ಪೊಖರಿ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಪ್ರಧಾನಮಂತ್ರಿ ಗ್ರಾಮೀಣ ರಸ್ತೆ ಅಭಿವೃದ್ಧಿ ಯೋಜನೆಯಡಿ ಈ ರಸ್ತೆಯನ್ನು ನಿರ್ಮಾಣ ಮಾಡಲಾಗಿದೆ.</p><p>ಈ ರಸ್ತೆ ನಿರ್ಮಾಣಕ್ಕೆ ಜರ್ಮನಿ ತಂತ್ರಜ್ಞಾನ ಬಳಸಿದ್ದಾಗಿ ಗುತ್ತಿಗೆದಾರ ಹೇಳಿಕೊಂಡಿರುವುದಾಗಿಯೂ ವರದಿ ತಿಳಿಸಿದೆ.</p><p>ಕಳಪೆ ಕಾಮಗಾರಿಯನ್ನು ಅನುಮೋದಿಸಿರುವ ಎಂಜಿನಿಯರ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಸರ್ಕಾರವನ್ನು ಒತ್ತಾಯಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>