ವಿಜಯವಾಡ: ಆಂಧ್ರಪ್ರದೇಶದ ವಿಜಯವಾಡದಲ್ಲಿ ಶನಿವಾರ ರೋಡ್ ಶೋ ವೇಳೆ ನಡೆದ ಕಲ್ಲು ತೂರಾಟದಲ್ಲಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರ ಎಡಹುಬ್ಬಿನ ಬಳಿ ಪೆಟ್ಟಾಗಿದೆ.
ವಿಜಯವಾಡದ ಸಿಂಘ್ ನಗರದಲ್ಲಿ ಬಸ್ ಯಾತ್ರೆ ನಡೆಸುತ್ತಿದ್ದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರನ್ನು ಗುರಿಯಾಗಿಸಿ ಕಲ್ಲು ತೂರಾಟ ನಡೆದಿದೆ. ಅವರಿಗೆ ಕಲ್ಲೇಟು ಬಿದ್ದ ತಕ್ಷಣವೇ ಅವರನ್ನು ಬಸ್ ಒಳಕ್ಕೆ ಕರೆದೊಯ್ದು, ವೈದ್ಯರು ಚಿಕಿತ್ಸೆ ನೀಡಿದ್ದಾರೆ.
ವೈದ್ಯರು ಚಿಕಿತ್ಸೆ ನೀಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.