<p><strong>ಚೆನ್ನೈ:</strong> ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ತಮ್ಮ ಸಚಿವ ಸಂಪುಟವನ್ನು ಗುರುವಾರ ವಿಸ್ತರಿಸುವ ಸಾಧ್ಯತೆಯಿದ್ದು, ರಾಜ್ಯವು 1952ರ ಬಳಿಕ ಮೊದಲ ಸಮ್ಮಿಶ್ರ ಸರ್ಕಾರಕ್ಕೆ ಸಾಕ್ಷಿಯಾಗಲಿದೆ.</p>.<p>ಆದಾಗಿಯೂ, ಕಳೆದ ವಾರ ನಡೆದ ಬಹುಮತ ಸಾಬೀತು ಪರೀಕ್ಷೆ ವೇಳೆ ಟಿವಿಕೆ ಸರ್ಕಾರವನ್ನು ಬೆಂಬಲಿಸಿದ ಎಐಎಡಿಎಂಕೆ ಬಂಡಾಯ ಶಾಸಕರನ್ನು ಸದ್ಯಕ್ಕೆ ಸಂಪುಟಕ್ಕೆ ಸೇರಿಸಿಕೊಳ್ಳುವ ಸಾಧ್ಯತೆ ಕಡಿಮೆ ಎಂದು ಮೂಲಗಳು ತಿಳಿಸಿವೆ. </p>.<p>ಎಐಎಡಿಎಂಕೆ ಬಂಡಾಯ ಶಾಸಕರಿಗೆ ಅವಕಾಶ ನೀಡದಂತೆ ಎಡಪಕ್ಷಗಳು ಮತ್ತು ಮೈತ್ರಿಕೂಟದ ಇತರ ಪಾಲುದಾರ ಪಕ್ಷಗಳು ಮುಖ್ಯಮಂತ್ರಿ ವಿಜಯ್ ಅವರ ಮೇಲೆ ಒತ್ತಡ ಹೇರಿವೆ ಎಂದು ಗೊತ್ತಾಗಿದೆ. ಒಂದು ವೇಳೆ ಈ ಬಂಡಾಯ ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಂಡರೆ ಟಿವಿಕೆಗೆ ನೀಡಿರುವ ಬೆಂಬಲವನ್ನು ಮರು ಪರಿಶೀಲಿಸಲಾಗುವುದು ಎಂದು ಆ ಪಕ್ಷಗಳ ನಾಯಕರು ಎಚ್ಚರಿಸಿದ್ದಾರೆ. </p>.<h2>ಸಂಪುಟಕ್ಕೆ ಸೇರಲು ಕಾಂಗ್ರೆಸ್ ಸಮ್ಮತಿ:</h2>.<p>ಕಾಂಗ್ರೆಸ್ ಶಾಸಕರಾದ ಎಸ್. ರಾಜೇಶ್ ಕುಮಾರ್ ಮತ್ತು ಪಿ. ವಿಶ್ವನಾಥನ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮಾಹಿತಿ ನೀಡಿದ್ದಾರೆ. </p>.<p>‘59 ವರ್ಷಗಳ ಬಳಿಕ ಕಾಂಗ್ರೆಸ್ ತಮಿಳುನಾಡು ಸಚಿವ ಸಂಪುಟ ಸೇರುತ್ತಿರುವುದು ಐತಿಹಾಸಿಕ ಸಂದರ್ಭ’ ಎಂದು ಅವರು ಬಣ್ಣಿಸಿದ್ದಾರೆ. </p>.<p>ಐವರು ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಟಿವಿಕೆ ಸರ್ಕಾರಕ್ಕೆ ಬೆಂಬಲ ನೀಡುವ ಮೂಲಕ ಡಿಎಂಕೆ ನೇತೃತ್ವದ ಮೈತ್ರಿಕೂಟದಿಂದ ಹೊರನಡೆದಿತ್ತು. </p>.<p>ಭಾಷಾವಾರು ಪ್ರಾಂತ್ಯಗಳ ಆಧಾರದ ಮೇಲೆ ರಾಜ್ಯಗಳ ಪುನರ್ರಚನೆ ಆದ ನಂತರ ತಮಿಳುನಾಡಿನಲ್ಲಿ ರಚನೆಯಾದ ಮೊದಲ ಸಮ್ಮಿಶ್ರ ಸರ್ಕಾರ ಇದಾಗಲಿದೆ. 1952ರಲ್ಲಿ ಸಂಯೋಜಿತ ಮದ್ರಾಸ್ ರಾಜ್ಯದಲ್ಲಿ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ರಚಿಸಿತ್ತು. </p>.<h2>ವಿಸಿಕೆ, ಐಯುಎಂಎಲ್ಗೆ ಆಹ್ವಾನ:</h2>.<p>ತಮಿಳುನಾಡಿನ ಆಡಳಿತಾರೂಢ ಟಿವಿಕೆ ಸರ್ಕಾರದ ಸಂಪುಟದಲ್ಲಿ ಭಾಗಿಯಾಗುವಂತೆ ವಿಸಿಕೆ ಮತ್ತು ಐಯುಎಂಎಲ್ ಪಕ್ಷಗಳಿಗೆ ತಮಿಳುನಾಡಿನ ಲೋಕೋಪಯೋಗಿ ಮತ್ತು ಕ್ರೀಡಾ ಅಭಿವೃದ್ಧಿ ಸಚಿವ ಆಧವ್ ಅರ್ಜುನ್ ಬುಧವಾರ ಆಹ್ವಾನಿಸಿದ್ದಾರೆ. </p>.<p>ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಅವರು ಒಂದು ಕುಟುಂಬದ ರೀತಿ ಸಂಪುಟ ಕಾರ್ಯ ನಿರ್ವಹಿಸಬೇಕು ಎಂದು ಬಯಸಿದ್ದಾರೆ ಎಂದಿರುವ ಅವರು, ‘ಎಡಪಕ್ಷಗಳನ್ನೂ ಸಂಪುಟದಲ್ಲಿ ಸೇರಿಸಿಕೊಳ್ಳುವ ಇಚ್ಛೆಯನ್ನು ಮುಖ್ಯಮಂತ್ರಿ ಹೊಂದಿದ್ದಾರೆ’ ಎಂದಿದ್ದಾರೆ. </p>.<p>ಟಿವಿಕೆ ಸರ್ಕಾರ ರಚಿಸದಂತೆ ಮಾಡಲು ಮತ್ತು ತಾವು ಅಧಿಕಾರಕ್ಕೇರಲು ಡಿಎಂಕೆ ಮತ್ತು ಎಐಎಡಿಎಂಕೆ ಒಂದಾಗಲು ಯತ್ನಿಸಿದ್ದವು ಎಂದು ಅವರು ಆರೋಪಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ತಮ್ಮ ಸಚಿವ ಸಂಪುಟವನ್ನು ಗುರುವಾರ ವಿಸ್ತರಿಸುವ ಸಾಧ್ಯತೆಯಿದ್ದು, ರಾಜ್ಯವು 1952ರ ಬಳಿಕ ಮೊದಲ ಸಮ್ಮಿಶ್ರ ಸರ್ಕಾರಕ್ಕೆ ಸಾಕ್ಷಿಯಾಗಲಿದೆ.</p>.<p>ಆದಾಗಿಯೂ, ಕಳೆದ ವಾರ ನಡೆದ ಬಹುಮತ ಸಾಬೀತು ಪರೀಕ್ಷೆ ವೇಳೆ ಟಿವಿಕೆ ಸರ್ಕಾರವನ್ನು ಬೆಂಬಲಿಸಿದ ಎಐಎಡಿಎಂಕೆ ಬಂಡಾಯ ಶಾಸಕರನ್ನು ಸದ್ಯಕ್ಕೆ ಸಂಪುಟಕ್ಕೆ ಸೇರಿಸಿಕೊಳ್ಳುವ ಸಾಧ್ಯತೆ ಕಡಿಮೆ ಎಂದು ಮೂಲಗಳು ತಿಳಿಸಿವೆ. </p>.<p>ಎಐಎಡಿಎಂಕೆ ಬಂಡಾಯ ಶಾಸಕರಿಗೆ ಅವಕಾಶ ನೀಡದಂತೆ ಎಡಪಕ್ಷಗಳು ಮತ್ತು ಮೈತ್ರಿಕೂಟದ ಇತರ ಪಾಲುದಾರ ಪಕ್ಷಗಳು ಮುಖ್ಯಮಂತ್ರಿ ವಿಜಯ್ ಅವರ ಮೇಲೆ ಒತ್ತಡ ಹೇರಿವೆ ಎಂದು ಗೊತ್ತಾಗಿದೆ. ಒಂದು ವೇಳೆ ಈ ಬಂಡಾಯ ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಂಡರೆ ಟಿವಿಕೆಗೆ ನೀಡಿರುವ ಬೆಂಬಲವನ್ನು ಮರು ಪರಿಶೀಲಿಸಲಾಗುವುದು ಎಂದು ಆ ಪಕ್ಷಗಳ ನಾಯಕರು ಎಚ್ಚರಿಸಿದ್ದಾರೆ. </p>.<h2>ಸಂಪುಟಕ್ಕೆ ಸೇರಲು ಕಾಂಗ್ರೆಸ್ ಸಮ್ಮತಿ:</h2>.<p>ಕಾಂಗ್ರೆಸ್ ಶಾಸಕರಾದ ಎಸ್. ರಾಜೇಶ್ ಕುಮಾರ್ ಮತ್ತು ಪಿ. ವಿಶ್ವನಾಥನ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮಾಹಿತಿ ನೀಡಿದ್ದಾರೆ. </p>.<p>‘59 ವರ್ಷಗಳ ಬಳಿಕ ಕಾಂಗ್ರೆಸ್ ತಮಿಳುನಾಡು ಸಚಿವ ಸಂಪುಟ ಸೇರುತ್ತಿರುವುದು ಐತಿಹಾಸಿಕ ಸಂದರ್ಭ’ ಎಂದು ಅವರು ಬಣ್ಣಿಸಿದ್ದಾರೆ. </p>.<p>ಐವರು ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಟಿವಿಕೆ ಸರ್ಕಾರಕ್ಕೆ ಬೆಂಬಲ ನೀಡುವ ಮೂಲಕ ಡಿಎಂಕೆ ನೇತೃತ್ವದ ಮೈತ್ರಿಕೂಟದಿಂದ ಹೊರನಡೆದಿತ್ತು. </p>.<p>ಭಾಷಾವಾರು ಪ್ರಾಂತ್ಯಗಳ ಆಧಾರದ ಮೇಲೆ ರಾಜ್ಯಗಳ ಪುನರ್ರಚನೆ ಆದ ನಂತರ ತಮಿಳುನಾಡಿನಲ್ಲಿ ರಚನೆಯಾದ ಮೊದಲ ಸಮ್ಮಿಶ್ರ ಸರ್ಕಾರ ಇದಾಗಲಿದೆ. 1952ರಲ್ಲಿ ಸಂಯೋಜಿತ ಮದ್ರಾಸ್ ರಾಜ್ಯದಲ್ಲಿ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ರಚಿಸಿತ್ತು. </p>.<h2>ವಿಸಿಕೆ, ಐಯುಎಂಎಲ್ಗೆ ಆಹ್ವಾನ:</h2>.<p>ತಮಿಳುನಾಡಿನ ಆಡಳಿತಾರೂಢ ಟಿವಿಕೆ ಸರ್ಕಾರದ ಸಂಪುಟದಲ್ಲಿ ಭಾಗಿಯಾಗುವಂತೆ ವಿಸಿಕೆ ಮತ್ತು ಐಯುಎಂಎಲ್ ಪಕ್ಷಗಳಿಗೆ ತಮಿಳುನಾಡಿನ ಲೋಕೋಪಯೋಗಿ ಮತ್ತು ಕ್ರೀಡಾ ಅಭಿವೃದ್ಧಿ ಸಚಿವ ಆಧವ್ ಅರ್ಜುನ್ ಬುಧವಾರ ಆಹ್ವಾನಿಸಿದ್ದಾರೆ. </p>.<p>ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಅವರು ಒಂದು ಕುಟುಂಬದ ರೀತಿ ಸಂಪುಟ ಕಾರ್ಯ ನಿರ್ವಹಿಸಬೇಕು ಎಂದು ಬಯಸಿದ್ದಾರೆ ಎಂದಿರುವ ಅವರು, ‘ಎಡಪಕ್ಷಗಳನ್ನೂ ಸಂಪುಟದಲ್ಲಿ ಸೇರಿಸಿಕೊಳ್ಳುವ ಇಚ್ಛೆಯನ್ನು ಮುಖ್ಯಮಂತ್ರಿ ಹೊಂದಿದ್ದಾರೆ’ ಎಂದಿದ್ದಾರೆ. </p>.<p>ಟಿವಿಕೆ ಸರ್ಕಾರ ರಚಿಸದಂತೆ ಮಾಡಲು ಮತ್ತು ತಾವು ಅಧಿಕಾರಕ್ಕೇರಲು ಡಿಎಂಕೆ ಮತ್ತು ಎಐಎಡಿಎಂಕೆ ಒಂದಾಗಲು ಯತ್ನಿಸಿದ್ದವು ಎಂದು ಅವರು ಆರೋಪಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>