<p><strong>ಚೆನ್ನೈ</strong>: ಹೊಸದಾಗಿ ಆಯ್ಕೆಯಾದ ಪಕ್ಷದ ಶಾಸಕರೊಂದಿಗೆ ವಿಜಯ್ ಅವರು ಇಂದು(ಮಂಗಳವಾರ) ಮೊದಲ ಸಭೆ ನಡೆಸಿದ್ದಾರೆ. </p><p>ಟಿವಿಕೆ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮತ್ತು ಸರ್ಕಾರ ರಚಿಸುವ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲಾಯಿತು ಎಂದು ಟಿವಿಕೆ ನಾಯಕ ನಂಜಿಲ್ಲ ಸಂಪತ್ ತಿಳಿಸಿದ್ದಾರೆ.</p><p>ಕಳೆದ ತಿಂಗಳು ನಡೆದ ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಗೆದ್ದಿರುವ ವಿಜಯ್ ನೇತೃತ್ವದ ಟಿವಿಕೆ, ಸರ್ಕಾರ ರಚನೆಗೆ ಮುಂದಾಗಿದೆ.</p><p>ಸರಳ ಬಹುಮತಕ್ಕೆ ಇನ್ನೂ 10 ಶಾಸಕರ ಕೊರತೆಯಿದ್ದು, ಇದನ್ನು ಟಿವಿಕೆ ಹೇಗೆ ಸರಿದೂಗಿಸಲಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಂಪತ್, ‘ಪಕ್ಷದ ನಾಯಕರು ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ. ಶೀಘ್ರದಲ್ಲೇ ಶುಭ ಸುದ್ದಿ ನೀಡಲಿದ್ದೇವೆ’ ಎಂದು ತಿಳಿಸಿದ್ದಾರೆ.</p><p>ಇದಕ್ಕೂ ಮುನ್ನ, ವಿಜಯ್ ಅವರು ತಮ್ಮ ಸೈದ್ಧಾಂತಿಕ ನಾಯಕರಾದ ಪೆರಿಯಾರ್ ಇ.ವಿ. ರಾಮಸ್ವಾಮಿ, ಬಿ.ಆರ್. ಅಂಬೇಡ್ಕರ್, ಕೆ. ಕಾಮರಾಜ್, ವೇಲು ನಾಚಿಯಾರ್ ಮತ್ತು ಅಂಜಲೈ ಅಮ್ಮಾಳ್ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿದರು.</p><p>ವಿಜಯ್ ನೇತೃತ್ವದ ಟಿವಿಕೆ 108 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೆ, ಡಿಎಂಕೆ 59 ಮತ್ತು ಎಐಎಡಿಎಂಕೆ 47 ಸ್ಥಾನಗಳನ್ನು ಪಡೆದುಕೊಂಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ಹೊಸದಾಗಿ ಆಯ್ಕೆಯಾದ ಪಕ್ಷದ ಶಾಸಕರೊಂದಿಗೆ ವಿಜಯ್ ಅವರು ಇಂದು(ಮಂಗಳವಾರ) ಮೊದಲ ಸಭೆ ನಡೆಸಿದ್ದಾರೆ. </p><p>ಟಿವಿಕೆ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮತ್ತು ಸರ್ಕಾರ ರಚಿಸುವ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲಾಯಿತು ಎಂದು ಟಿವಿಕೆ ನಾಯಕ ನಂಜಿಲ್ಲ ಸಂಪತ್ ತಿಳಿಸಿದ್ದಾರೆ.</p><p>ಕಳೆದ ತಿಂಗಳು ನಡೆದ ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಗೆದ್ದಿರುವ ವಿಜಯ್ ನೇತೃತ್ವದ ಟಿವಿಕೆ, ಸರ್ಕಾರ ರಚನೆಗೆ ಮುಂದಾಗಿದೆ.</p><p>ಸರಳ ಬಹುಮತಕ್ಕೆ ಇನ್ನೂ 10 ಶಾಸಕರ ಕೊರತೆಯಿದ್ದು, ಇದನ್ನು ಟಿವಿಕೆ ಹೇಗೆ ಸರಿದೂಗಿಸಲಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಂಪತ್, ‘ಪಕ್ಷದ ನಾಯಕರು ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ. ಶೀಘ್ರದಲ್ಲೇ ಶುಭ ಸುದ್ದಿ ನೀಡಲಿದ್ದೇವೆ’ ಎಂದು ತಿಳಿಸಿದ್ದಾರೆ.</p><p>ಇದಕ್ಕೂ ಮುನ್ನ, ವಿಜಯ್ ಅವರು ತಮ್ಮ ಸೈದ್ಧಾಂತಿಕ ನಾಯಕರಾದ ಪೆರಿಯಾರ್ ಇ.ವಿ. ರಾಮಸ್ವಾಮಿ, ಬಿ.ಆರ್. ಅಂಬೇಡ್ಕರ್, ಕೆ. ಕಾಮರಾಜ್, ವೇಲು ನಾಚಿಯಾರ್ ಮತ್ತು ಅಂಜಲೈ ಅಮ್ಮಾಳ್ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿದರು.</p><p>ವಿಜಯ್ ನೇತೃತ್ವದ ಟಿವಿಕೆ 108 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೆ, ಡಿಎಂಕೆ 59 ಮತ್ತು ಎಐಎಡಿಎಂಕೆ 47 ಸ್ಥಾನಗಳನ್ನು ಪಡೆದುಕೊಂಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>