<blockquote>ಜೋಸೆಫ್ ವಿಜಯ್ ಅವರು ತಮಿಳುನಾಡು ಮುಖ್ಯಮಂತ್ರಿಯಾಗಿ ಇಂದು (ಭಾನುವಾರ) ಪ್ರಮಾಣ ವಚನ ಸ್ವೀಕರಿಸಿದರು. ಇವರೊಂದಿಗೆ ಒಂಬತ್ತು ಮಂದಿ ಶಾಸಕರು ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರ ಕಿರು ಪರಿಚಯ ಇಲ್ಲಿದೆ..</blockquote>. <h2>ಕೆ.ಎ.ಸೆಂಗೊಟ್ಟೈಯನ್:</h2><p>ವಿಜಯ್ ಸಂಪುಟ ಸೇರಿದ ಪ್ರಮುಖರಲ್ಲಿ ಎಐಎಡಿಎಂಕೆ ಹಿರಿಯ ನಾಯಕ ಕೆ.ಎ ಸೆಂಗೊಟ್ಟೈಯನ್ ಒಬ್ಬರು. ಇವರು ದಶಕಗಳ ಕಾಲ ಮಾಜಿ ಮುಖ್ಯಮಂತ್ರಿಗಳಾದ ಎಂಜಿಆರ್ ಮತ್ತು ಜಯಲಲಿತಾ ಅವರೊಂದಿಗೆ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. </p>. <p>ಇಪಿಎಸ್ ನಾಯಕತ್ವವನ್ನು ಬಹಿರಂಗವಾಗಿ ಪ್ರಶ್ನಿಸಿದ ಮತ್ತು ಉಚ್ಚಾಟಿತ ನಾಯಕರನ್ನು ಮತ್ತೆ ಪಕ್ಷಕ್ಕೆ ಕರೆತರುವಲ್ಲಿ ಪಕ್ಷ ವಿಫಲವಾಗಿದೆ ಎಂದು ಟೀಕಿಸಿದಕ್ಕೆ ಸೆಂಗೊಟ್ಟೈಯನ್ ಅವರನ್ನು ಎಐಎಡಿಎಂಕೆಯಿಂದ ಉಚ್ಚಾಟಿಸಲಾಗಿತ್ತು. ಸೆಂಗೊಟ್ಟೈಯನ್ ಅವರ ಆಡಳಿತಾತ್ಮಕ ಅನುಭವ ಹೊಸ ಸರ್ಕಾರಕ್ಕೆ ನೆರವಾಗಲಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.</p> <h2>ಆಧವ್ ಅರ್ಜುನ:</h2><p>ವಿಜಯ್ ಅವರ ಅತ್ಯಂತ ವಿಶ್ವಾಸಾರ್ಹ ವ್ಯಕ್ತಿಗಳಲ್ಲಿ ಆಧವ್ ಅರ್ಜುನ ಕೂಡ ಒಬ್ಬರು. ಟಿವಿಕೆಯ ಸಂಘಟನಾ ಯೋಜನೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಚೆನ್ನೈನ ವಿಲ್ಲಿವಕ್ಕಂ ಕ್ಷೇತ್ರದಿಂದ ಗೆದ್ದಿರುವ ಇವರು, ಲಾಟರಿ ಉದ್ಯಮಿ ಸ್ಯಾಂಟಿಯಾಗೊ ಮಾರ್ಟಿನ್ ಅವರ ಅಳಿಯ.</p>. <h2> ನಿರ್ಮಲ್ ಕುಮಾರ್:</h2><p>ಮಧುರೈನ ತಿರುಪರಂಕುಂದ್ರಂನಿಂದ ಗೆದ್ದ ನಿರ್ಮಲ್ ಕುಮಾರ್ ವಿಜಯ್ ಸಂಪುಟ ಸೇರಿದ್ದಾರೆ. ಬಿಜೆಪಿಯ ಮಾಜಿ ಕಾರ್ಯಕರ್ತರಾಗಿದ್ದ ನಿರ್ಮಲ್ ಕುಮಾರ್ ರಾಜಕೀಯ ಪಾಳೆಯ ಬದಲಿಸಿ ದಕ್ಷಿಣ ತಮಿಳುನಾಡಿನಲ್ಲಿ ಟಿವಿಕೆಗೆ ಪ್ರಮುಖ ಮುಖವಾಗಿ ಹೊರಹೊಮ್ಮಿದ್ದಾರೆ.</p>. <h2> <strong>ಎನ್.ಆನಂದ್</strong></h2> <p>ಟಿವಿಕೆ ಪ್ರಧಾನ ಕಾರ್ಯದರ್ಶಿ ಆನಂದ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇವರು ಚೆನ್ನೈನ ಟಿ.ನಗರ ಕ್ಷೇತ್ರದಿಂದ ಗೆದ್ದಿದ್ದಾರೆ. ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸುವಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದಾರೆ.</p>. <h2> ರಾಜ್ ಮೋಹನ್</h2><p>ವಿಜಯ್ ಸಂಪುಟ ಸೇರಿದ ರಾಜ್ ಮೋಹನ್, ತಮ್ಮ ವಾಕ್ಚಾತುರ್ಯದಿಂದಲೇ ಹೆಸರುವಾಸಿಯಾಗಿದ್ದಾರೆ.</p>. <h2>ಡಾ. ಟಿ.ಕೆ. ಪ್ರಭು:</h2><p>ಡಾ.ಟಿ.ಕೆ. ಪ್ರಭು ಅವರು ವಿಜಯ್ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದಂತವೈದ್ಯರಾಗಿರುವ ಇವರು, ಕಾರೈಕುಡಿ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ.</p>. <h2>ಕೆ.ಜಿ ಅರುಣರಾಜ್:</h2><p>ಐಆರ್ಎಸ್ ವೃತ್ತಿಜೀವನ ತೊರೆದು ಟಿವಿಕೆ ಸೇರಿದ್ದ ವೈದ್ಯ ಅರುಣ್ ರಾಜ್, ತಮ್ಮ ತವರು ಕ್ಷೇತ್ರವಾದ ತಿರುಚೆಂಗೋಡ್ನಿಂದ ಗೆದ್ದಿದ್ದು, ವಿಜಯ್ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ.</p>. <h2>ಪಿ ವೆಂಕಟರಮಣನ್ </h2><p>ಚೆನ್ನೈನ ಮೈಲಾಪುರ ಶಾಸಕ ಪಿ.ವೆಂಕಟರಮಣನ್ ವಿಜಯ್ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ. ಬ್ರಾಹ್ಮಣ ಸಮುದಾಯದ ಪ್ರಭಾವವಿರುವ ಕ್ಷೇತ್ರದಲ್ಲಿ (ಮೈಲಾಪುರ) ಗೆದ್ದಿರುವ ಇವರನ್ನು ಸರ್ಕಾರದಲ್ಲಿ ಆ ಸಮುದಾಯದ ಪ್ರಮುಖ ಪ್ರತಿನಿಧಿಯಾಗಿ ಪರಿಗಣಿಸಲಾಗಿದೆ. </p>. <h2>ಎಸ್.ಕೀರ್ತನಾ</h2><p>ಕೀರ್ತನಾ ಅವರು ವಿಜಯ್ ಸಂಪುಟದ ಅತ್ಯಂತ ಕಿರಿಯ ಸಚಿವೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇವರು ವಿರುಧುನಗರ ಜಿಲ್ಲೆಯಿಂದ ಗೆದ್ದಿದ್ದಾರೆ.</p>. <h2>ಮೊದಲ ದ್ರಾವಿಡಯೇತರ ಸರ್ಕಾರ…</h2><p>ತಮಿಳುನಾಡಿನಲ್ಲಿ ಹೊಸ ಸರ್ಕಾರ ರಚನೆ ಸಂಬಂಧ ಕಳೆದ ಕೆಲ ದಿನಗಳಿಂದ ಎದ್ದಿದ್ದ ಕುತೂಹಲ ಹಾಗೂ ಅನಿಶ್ಚಿತತೆಗೆ ಕೊನೆಗೂ ತೆರೆ ಬಿದ್ದಿದೆ. ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ, ನಟ ಜೋಸೆಫ್ ವಿಜಯ್ ಅವರು ಮುಖ್ಯಮಂತ್ರಿಯಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.</p> <p>ಜವಾಹರಲಾಲ್ ನೆಹರೂ ಕ್ರೀಡಾಂಗಣದಲ್ಲಿ ಬೆಳಿಗ್ಗೆ 10ಕ್ಕೆ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಪ್ರಮಾಣವಚನ ಬೋಧಿಸಿದ್ದಾರೆ. </p> <p>ತಮಿಳುನಾಡಿನಲ್ಲಿ ಸಾಂಪ್ರದಾಯಿಕ ದ್ರಾವಿಡ ಪಕ್ಷಗಳಾದ ಎಐಎಡಿಎಂಕೆ ಮತ್ತು ಡಿಎಂಕೆಗಳ ವಾಡಿಕೆಗಳನ್ನು ಮುರಿದು ವಿಜಯ್ ಅವರ ಟಿವಿಕೆ ಪಕ್ಷವು ಸರ್ಕಾರ ರಚಿಸಿದೆ. ಅಲ್ಲದೇ ರಾಜ್ಯದಲ್ಲಿ ಅಧಿಕಾರಕ್ಕೇರಿದ ಮೊದಲ ದ್ರಾವಿಡಯೇತರ ಪಕ್ಷ ಎನಿಸಿದೆ. </p>.<p><strong>ಆಧಾರ: ಎನ್ಡಿಟಿವಿ</strong></p>.ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣ: ದಾಖಲೆ ಬರೆದ ಟಿವಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<blockquote>ಜೋಸೆಫ್ ವಿಜಯ್ ಅವರು ತಮಿಳುನಾಡು ಮುಖ್ಯಮಂತ್ರಿಯಾಗಿ ಇಂದು (ಭಾನುವಾರ) ಪ್ರಮಾಣ ವಚನ ಸ್ವೀಕರಿಸಿದರು. ಇವರೊಂದಿಗೆ ಒಂಬತ್ತು ಮಂದಿ ಶಾಸಕರು ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರ ಕಿರು ಪರಿಚಯ ಇಲ್ಲಿದೆ..</blockquote>. <h2>ಕೆ.ಎ.ಸೆಂಗೊಟ್ಟೈಯನ್:</h2><p>ವಿಜಯ್ ಸಂಪುಟ ಸೇರಿದ ಪ್ರಮುಖರಲ್ಲಿ ಎಐಎಡಿಎಂಕೆ ಹಿರಿಯ ನಾಯಕ ಕೆ.ಎ ಸೆಂಗೊಟ್ಟೈಯನ್ ಒಬ್ಬರು. ಇವರು ದಶಕಗಳ ಕಾಲ ಮಾಜಿ ಮುಖ್ಯಮಂತ್ರಿಗಳಾದ ಎಂಜಿಆರ್ ಮತ್ತು ಜಯಲಲಿತಾ ಅವರೊಂದಿಗೆ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. </p>. <p>ಇಪಿಎಸ್ ನಾಯಕತ್ವವನ್ನು ಬಹಿರಂಗವಾಗಿ ಪ್ರಶ್ನಿಸಿದ ಮತ್ತು ಉಚ್ಚಾಟಿತ ನಾಯಕರನ್ನು ಮತ್ತೆ ಪಕ್ಷಕ್ಕೆ ಕರೆತರುವಲ್ಲಿ ಪಕ್ಷ ವಿಫಲವಾಗಿದೆ ಎಂದು ಟೀಕಿಸಿದಕ್ಕೆ ಸೆಂಗೊಟ್ಟೈಯನ್ ಅವರನ್ನು ಎಐಎಡಿಎಂಕೆಯಿಂದ ಉಚ್ಚಾಟಿಸಲಾಗಿತ್ತು. ಸೆಂಗೊಟ್ಟೈಯನ್ ಅವರ ಆಡಳಿತಾತ್ಮಕ ಅನುಭವ ಹೊಸ ಸರ್ಕಾರಕ್ಕೆ ನೆರವಾಗಲಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.</p> <h2>ಆಧವ್ ಅರ್ಜುನ:</h2><p>ವಿಜಯ್ ಅವರ ಅತ್ಯಂತ ವಿಶ್ವಾಸಾರ್ಹ ವ್ಯಕ್ತಿಗಳಲ್ಲಿ ಆಧವ್ ಅರ್ಜುನ ಕೂಡ ಒಬ್ಬರು. ಟಿವಿಕೆಯ ಸಂಘಟನಾ ಯೋಜನೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಚೆನ್ನೈನ ವಿಲ್ಲಿವಕ್ಕಂ ಕ್ಷೇತ್ರದಿಂದ ಗೆದ್ದಿರುವ ಇವರು, ಲಾಟರಿ ಉದ್ಯಮಿ ಸ್ಯಾಂಟಿಯಾಗೊ ಮಾರ್ಟಿನ್ ಅವರ ಅಳಿಯ.</p>. <h2> ನಿರ್ಮಲ್ ಕುಮಾರ್:</h2><p>ಮಧುರೈನ ತಿರುಪರಂಕುಂದ್ರಂನಿಂದ ಗೆದ್ದ ನಿರ್ಮಲ್ ಕುಮಾರ್ ವಿಜಯ್ ಸಂಪುಟ ಸೇರಿದ್ದಾರೆ. ಬಿಜೆಪಿಯ ಮಾಜಿ ಕಾರ್ಯಕರ್ತರಾಗಿದ್ದ ನಿರ್ಮಲ್ ಕುಮಾರ್ ರಾಜಕೀಯ ಪಾಳೆಯ ಬದಲಿಸಿ ದಕ್ಷಿಣ ತಮಿಳುನಾಡಿನಲ್ಲಿ ಟಿವಿಕೆಗೆ ಪ್ರಮುಖ ಮುಖವಾಗಿ ಹೊರಹೊಮ್ಮಿದ್ದಾರೆ.</p>. <h2> <strong>ಎನ್.ಆನಂದ್</strong></h2> <p>ಟಿವಿಕೆ ಪ್ರಧಾನ ಕಾರ್ಯದರ್ಶಿ ಆನಂದ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇವರು ಚೆನ್ನೈನ ಟಿ.ನಗರ ಕ್ಷೇತ್ರದಿಂದ ಗೆದ್ದಿದ್ದಾರೆ. ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸುವಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದಾರೆ.</p>. <h2> ರಾಜ್ ಮೋಹನ್</h2><p>ವಿಜಯ್ ಸಂಪುಟ ಸೇರಿದ ರಾಜ್ ಮೋಹನ್, ತಮ್ಮ ವಾಕ್ಚಾತುರ್ಯದಿಂದಲೇ ಹೆಸರುವಾಸಿಯಾಗಿದ್ದಾರೆ.</p>. <h2>ಡಾ. ಟಿ.ಕೆ. ಪ್ರಭು:</h2><p>ಡಾ.ಟಿ.ಕೆ. ಪ್ರಭು ಅವರು ವಿಜಯ್ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದಂತವೈದ್ಯರಾಗಿರುವ ಇವರು, ಕಾರೈಕುಡಿ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ.</p>. <h2>ಕೆ.ಜಿ ಅರುಣರಾಜ್:</h2><p>ಐಆರ್ಎಸ್ ವೃತ್ತಿಜೀವನ ತೊರೆದು ಟಿವಿಕೆ ಸೇರಿದ್ದ ವೈದ್ಯ ಅರುಣ್ ರಾಜ್, ತಮ್ಮ ತವರು ಕ್ಷೇತ್ರವಾದ ತಿರುಚೆಂಗೋಡ್ನಿಂದ ಗೆದ್ದಿದ್ದು, ವಿಜಯ್ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ.</p>. <h2>ಪಿ ವೆಂಕಟರಮಣನ್ </h2><p>ಚೆನ್ನೈನ ಮೈಲಾಪುರ ಶಾಸಕ ಪಿ.ವೆಂಕಟರಮಣನ್ ವಿಜಯ್ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ. ಬ್ರಾಹ್ಮಣ ಸಮುದಾಯದ ಪ್ರಭಾವವಿರುವ ಕ್ಷೇತ್ರದಲ್ಲಿ (ಮೈಲಾಪುರ) ಗೆದ್ದಿರುವ ಇವರನ್ನು ಸರ್ಕಾರದಲ್ಲಿ ಆ ಸಮುದಾಯದ ಪ್ರಮುಖ ಪ್ರತಿನಿಧಿಯಾಗಿ ಪರಿಗಣಿಸಲಾಗಿದೆ. </p>. <h2>ಎಸ್.ಕೀರ್ತನಾ</h2><p>ಕೀರ್ತನಾ ಅವರು ವಿಜಯ್ ಸಂಪುಟದ ಅತ್ಯಂತ ಕಿರಿಯ ಸಚಿವೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇವರು ವಿರುಧುನಗರ ಜಿಲ್ಲೆಯಿಂದ ಗೆದ್ದಿದ್ದಾರೆ.</p>. <h2>ಮೊದಲ ದ್ರಾವಿಡಯೇತರ ಸರ್ಕಾರ…</h2><p>ತಮಿಳುನಾಡಿನಲ್ಲಿ ಹೊಸ ಸರ್ಕಾರ ರಚನೆ ಸಂಬಂಧ ಕಳೆದ ಕೆಲ ದಿನಗಳಿಂದ ಎದ್ದಿದ್ದ ಕುತೂಹಲ ಹಾಗೂ ಅನಿಶ್ಚಿತತೆಗೆ ಕೊನೆಗೂ ತೆರೆ ಬಿದ್ದಿದೆ. ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ, ನಟ ಜೋಸೆಫ್ ವಿಜಯ್ ಅವರು ಮುಖ್ಯಮಂತ್ರಿಯಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.</p> <p>ಜವಾಹರಲಾಲ್ ನೆಹರೂ ಕ್ರೀಡಾಂಗಣದಲ್ಲಿ ಬೆಳಿಗ್ಗೆ 10ಕ್ಕೆ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಪ್ರಮಾಣವಚನ ಬೋಧಿಸಿದ್ದಾರೆ. </p> <p>ತಮಿಳುನಾಡಿನಲ್ಲಿ ಸಾಂಪ್ರದಾಯಿಕ ದ್ರಾವಿಡ ಪಕ್ಷಗಳಾದ ಎಐಎಡಿಎಂಕೆ ಮತ್ತು ಡಿಎಂಕೆಗಳ ವಾಡಿಕೆಗಳನ್ನು ಮುರಿದು ವಿಜಯ್ ಅವರ ಟಿವಿಕೆ ಪಕ್ಷವು ಸರ್ಕಾರ ರಚಿಸಿದೆ. ಅಲ್ಲದೇ ರಾಜ್ಯದಲ್ಲಿ ಅಧಿಕಾರಕ್ಕೇರಿದ ಮೊದಲ ದ್ರಾವಿಡಯೇತರ ಪಕ್ಷ ಎನಿಸಿದೆ. </p>.<p><strong>ಆಧಾರ: ಎನ್ಡಿಟಿವಿ</strong></p>.ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣ: ದಾಖಲೆ ಬರೆದ ಟಿವಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>