<p><strong>ರಾಜ್ಯಸಭೆ:</strong> ದೇಶಬಿಟ್ಟು ಪರಾರಿಯಾಗಿರುವ ಉದ್ಯಮಿಗಳಾದ ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿ ಅವರು ಕಾನೂನನ್ನು ಎದುರಿಸಲು ಭಾರತಕ್ಕೆ ಹಿಂದಿರುಗಲಿದ್ದಾರೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಹೇಳಿದ್ದಾರೆ.</p>.<p>ವಿಜಯ್ ಮಲ್ಯ ಮತ್ತು ನೀರವ್ ಮೋದಿಯನ್ನು ಬ್ರಿಟನ್ನಿಂದ ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆ ನಡೆಯುತ್ತಿದೆ. ಚೋಕ್ಸಿ ಆಂಟಿಗುವಾದಲ್ಲಿದ್ದಾರೆ ಎಂದು ನಂಬಲಾಗಿದೆ ಎಂದು ಅವರು ಹೇಳಿದ್ದಾರೆ.</p>.<p>ವಿಜಯ್ ಮಲ್ಯ, ನೀರವ್ ಮೋದಿ, ಮೆಹುಲ್ ಚೋಕ್ಸಿ ಎಲ್ಲರೂ ಹಣಕಾಸು ವಂಚನೆ ಆರೋಪಗಳ ಕುರಿತಂತೆ ದೇಶದ ಕಾನೂನನ್ನು ಎದುರಿಸಲು ಹಿಂತಿರುಗಲಿದ್ದಾರೆ ಎಂದು ರಾಜ್ಯಸಭೆಯಲ್ಲಿ ವಿಮಾ ತಿದ್ದುಪಡಿ ಮಸೂದೆ ಮೇಲಿನ ಚರ್ಚೆ ವೇಳೆ ಉತ್ತರಿಸುವಾಗ ನಿರ್ಮಲಾ ಸೀತಾರಾಮನ್ ಹೇಳಿದರು.</p>.<p>ತನ್ನ ನಿಷ್ಕ್ರಿಯ ಕಿಂಗ್ಫಿಶರ್ ಏರ್ಲೈನ್ಸ್ ಪಡೆದಿದ್ದ ₹ 9,000 ಕೋಟಿ ಬ್ಯಾಂಕ್ ಸಾಲದ ಸುಸ್ತಿದಾರರಾಗಿರುವ ಆರೋಪಿ ವಿಜಯ್ ಮಲ್ಯ 2016 ರ ಮಾರ್ಚ್ನಿಂದ ಬ್ರಿಟನ್ನಿನಲ್ಲಿದ್ದಾರೆ.</p>.<p>ನೀರವ್ ಮೋದಿ ಮತ್ತು ಅವರ ಮಾವ ಚೋಕ್ಸಿ ಸಾರ್ವಜನಿಕ ವಲಯದ ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ವಂಚನೆ ಮಾಡಿದ ಆರೋಪ ಕೇಳಿ ಬಂದ ಬಳಿಕ ದೇಶಬಿಟ್ಟು ಪರಾರಿಯಾಗಿದ್ದಾರೆ. ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ನೀರವ್ ಮೋದಿ ಸುಮಾರು ₹ 14,500 ಕೋಟಿ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜ್ಯಸಭೆ:</strong> ದೇಶಬಿಟ್ಟು ಪರಾರಿಯಾಗಿರುವ ಉದ್ಯಮಿಗಳಾದ ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿ ಅವರು ಕಾನೂನನ್ನು ಎದುರಿಸಲು ಭಾರತಕ್ಕೆ ಹಿಂದಿರುಗಲಿದ್ದಾರೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಹೇಳಿದ್ದಾರೆ.</p>.<p>ವಿಜಯ್ ಮಲ್ಯ ಮತ್ತು ನೀರವ್ ಮೋದಿಯನ್ನು ಬ್ರಿಟನ್ನಿಂದ ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆ ನಡೆಯುತ್ತಿದೆ. ಚೋಕ್ಸಿ ಆಂಟಿಗುವಾದಲ್ಲಿದ್ದಾರೆ ಎಂದು ನಂಬಲಾಗಿದೆ ಎಂದು ಅವರು ಹೇಳಿದ್ದಾರೆ.</p>.<p>ವಿಜಯ್ ಮಲ್ಯ, ನೀರವ್ ಮೋದಿ, ಮೆಹುಲ್ ಚೋಕ್ಸಿ ಎಲ್ಲರೂ ಹಣಕಾಸು ವಂಚನೆ ಆರೋಪಗಳ ಕುರಿತಂತೆ ದೇಶದ ಕಾನೂನನ್ನು ಎದುರಿಸಲು ಹಿಂತಿರುಗಲಿದ್ದಾರೆ ಎಂದು ರಾಜ್ಯಸಭೆಯಲ್ಲಿ ವಿಮಾ ತಿದ್ದುಪಡಿ ಮಸೂದೆ ಮೇಲಿನ ಚರ್ಚೆ ವೇಳೆ ಉತ್ತರಿಸುವಾಗ ನಿರ್ಮಲಾ ಸೀತಾರಾಮನ್ ಹೇಳಿದರು.</p>.<p>ತನ್ನ ನಿಷ್ಕ್ರಿಯ ಕಿಂಗ್ಫಿಶರ್ ಏರ್ಲೈನ್ಸ್ ಪಡೆದಿದ್ದ ₹ 9,000 ಕೋಟಿ ಬ್ಯಾಂಕ್ ಸಾಲದ ಸುಸ್ತಿದಾರರಾಗಿರುವ ಆರೋಪಿ ವಿಜಯ್ ಮಲ್ಯ 2016 ರ ಮಾರ್ಚ್ನಿಂದ ಬ್ರಿಟನ್ನಿನಲ್ಲಿದ್ದಾರೆ.</p>.<p>ನೀರವ್ ಮೋದಿ ಮತ್ತು ಅವರ ಮಾವ ಚೋಕ್ಸಿ ಸಾರ್ವಜನಿಕ ವಲಯದ ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ವಂಚನೆ ಮಾಡಿದ ಆರೋಪ ಕೇಳಿ ಬಂದ ಬಳಿಕ ದೇಶಬಿಟ್ಟು ಪರಾರಿಯಾಗಿದ್ದಾರೆ. ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ನೀರವ್ ಮೋದಿ ಸುಮಾರು ₹ 14,500 ಕೋಟಿ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>