<p><strong>ಭೋಪಾಲ್</strong>: ಮಧ್ಯಪ್ರದೇಶದ ಸಚಿವ ಹಾಗೂ ಬಿಜೆಪಿ ಮುಖಂಡ ವಿಜಯ್ ಶಾ ತಮ್ಮ ವಿರುದ್ಧದ ಎಫ್ಐಆರ್ಗೆ ತಡೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.</p><p>ಕರ್ನಲ್ ಸೋಫಿಯಾ ಖುರೇಷಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ವಿಜಯ್ ಶಾ ವಿರುದ್ಧ ಎಫ್ಐಆರ್ ದಾಖಲಾಗಿದೆ. </p><p>ಸಚಿವ ಶಾ ನೀಡಿದ್ದಾರೆ ಎನ್ನಲಾದ ವಿವಾದಾತ್ಮಕ ಹೇಳಿಕೆ ಕುರಿತು ಹೈಕೋರ್ಟ್ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು ಎಫ್ಐಆರ್ ದಾಖಲಿಸುವಂತೆ ನಿನ್ನೆ ಸೂಚನೆ ನೀಡಿತ್ತು. </p><p>ವಿಜಯ್ ಶಾ ಕೋರಿದ್ದ ಅರ್ಜಿಯನ್ನು ತುರ್ತು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಸಮ್ಮಿಸಿದೆ.</p><p>ಮುಖ್ಯ ನ್ಯಾಯಮೂರ್ತಿ ಗವಾಯಿ ಮತ್ತು ನ್ಯಾ. ಅಗಸ್ಟೀನ್ ಜಾರ್ಜ್ ಅವರು ನಾಳೆ (ಮೇ 16) ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದ್ದಾರೆ ಎಂದು ವಿಜಯ್ ಶಾ ವಕೀಲರು ಹೇಳಿದ್ದಾರೆ.</p><p>ನೀವು ಯಾವ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದೀರಿ? ನೀವು ಸರ್ಕಾರದ ಜವಾಬ್ದಾರಿಯುತ ಸಚಿವರಲ್ಲವೇ? ಎಂದು ಸಚಿವರ ಕುರಿತಾಗಿ ನ್ಯಾಯಪೀಠ ಅವರ ವಕೀಲರನ್ನು ತರಾಟೆಗೆ ತೆಗೆದುಕೊಂಡಿತು ಎಂದು ಮೂಲಗಳು ತಿಳಿಸಿವೆ.</p><p><strong>ಸಚಿವ ಶಾ ಹೇಳಿದ್ದೇನು:</strong> ಕಾರ್ಯಕ್ರಮ ವೊಂದರಲ್ಲಿ ಮಾತನಾಡಿದ್ದ ಸಚಿವ ವಿಜಯ್ ಶಾ ‘ಆಪರೇಷನ್ ಸಿಂಧೂರ’ ಕುರಿತು ಪ್ರಸ್ತಾಪಿಸಿದ್ದರು. ಅಲ್ಲದೇ, ಕರ್ನಲ್ ಸೋಫಿಯಾ ಅವರನ್ನು ‘ಭಯೋತ್ಪಾದಕರ ಸಹೋದರಿ’ ಎಂಬಂತಹ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು ಎನ್ನಲಾಗಿದೆ.</p><p>ಶಾ ಹೇಳಿಕೆ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಬಳಿಕ ಎಚ್ಚೆತ್ತುಕೊಂಡ ಶಾ, ‘ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದಲ್ಲಿ, 10 ಬಾರಿ ಕ್ಷಮೆ ಯಾಚಿಸಲು ನಾನು ಸಿದ್ಧ. ಕರ್ನಲ್ ಖುರೇಷಿ ಅವರನ್ನು ನನ್ನ ಸಹೋದರಿಗಿಂತಲೂ ಹೆಚ್ಚು ಗೌರವಿಸುತ್ತೇನೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್</strong>: ಮಧ್ಯಪ್ರದೇಶದ ಸಚಿವ ಹಾಗೂ ಬಿಜೆಪಿ ಮುಖಂಡ ವಿಜಯ್ ಶಾ ತಮ್ಮ ವಿರುದ್ಧದ ಎಫ್ಐಆರ್ಗೆ ತಡೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.</p><p>ಕರ್ನಲ್ ಸೋಫಿಯಾ ಖುರೇಷಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ವಿಜಯ್ ಶಾ ವಿರುದ್ಧ ಎಫ್ಐಆರ್ ದಾಖಲಾಗಿದೆ. </p><p>ಸಚಿವ ಶಾ ನೀಡಿದ್ದಾರೆ ಎನ್ನಲಾದ ವಿವಾದಾತ್ಮಕ ಹೇಳಿಕೆ ಕುರಿತು ಹೈಕೋರ್ಟ್ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು ಎಫ್ಐಆರ್ ದಾಖಲಿಸುವಂತೆ ನಿನ್ನೆ ಸೂಚನೆ ನೀಡಿತ್ತು. </p><p>ವಿಜಯ್ ಶಾ ಕೋರಿದ್ದ ಅರ್ಜಿಯನ್ನು ತುರ್ತು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಸಮ್ಮಿಸಿದೆ.</p><p>ಮುಖ್ಯ ನ್ಯಾಯಮೂರ್ತಿ ಗವಾಯಿ ಮತ್ತು ನ್ಯಾ. ಅಗಸ್ಟೀನ್ ಜಾರ್ಜ್ ಅವರು ನಾಳೆ (ಮೇ 16) ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದ್ದಾರೆ ಎಂದು ವಿಜಯ್ ಶಾ ವಕೀಲರು ಹೇಳಿದ್ದಾರೆ.</p><p>ನೀವು ಯಾವ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದೀರಿ? ನೀವು ಸರ್ಕಾರದ ಜವಾಬ್ದಾರಿಯುತ ಸಚಿವರಲ್ಲವೇ? ಎಂದು ಸಚಿವರ ಕುರಿತಾಗಿ ನ್ಯಾಯಪೀಠ ಅವರ ವಕೀಲರನ್ನು ತರಾಟೆಗೆ ತೆಗೆದುಕೊಂಡಿತು ಎಂದು ಮೂಲಗಳು ತಿಳಿಸಿವೆ.</p><p><strong>ಸಚಿವ ಶಾ ಹೇಳಿದ್ದೇನು:</strong> ಕಾರ್ಯಕ್ರಮ ವೊಂದರಲ್ಲಿ ಮಾತನಾಡಿದ್ದ ಸಚಿವ ವಿಜಯ್ ಶಾ ‘ಆಪರೇಷನ್ ಸಿಂಧೂರ’ ಕುರಿತು ಪ್ರಸ್ತಾಪಿಸಿದ್ದರು. ಅಲ್ಲದೇ, ಕರ್ನಲ್ ಸೋಫಿಯಾ ಅವರನ್ನು ‘ಭಯೋತ್ಪಾದಕರ ಸಹೋದರಿ’ ಎಂಬಂತಹ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು ಎನ್ನಲಾಗಿದೆ.</p><p>ಶಾ ಹೇಳಿಕೆ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಬಳಿಕ ಎಚ್ಚೆತ್ತುಕೊಂಡ ಶಾ, ‘ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದಲ್ಲಿ, 10 ಬಾರಿ ಕ್ಷಮೆ ಯಾಚಿಸಲು ನಾನು ಸಿದ್ಧ. ಕರ್ನಲ್ ಖುರೇಷಿ ಅವರನ್ನು ನನ್ನ ಸಹೋದರಿಗಿಂತಲೂ ಹೆಚ್ಚು ಗೌರವಿಸುತ್ತೇನೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>