<p><strong>ಚೆನ್ನೈ:</strong> ವಿಧಾನಸಭಾ ಚುನಾವಣೆಯಲ್ಲಿ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲು ತಮಿಳು ನಟ ಮತ್ತು ರಾಜಕಾರಣಿ ವಿಜಯ್ ಮಂಗಳವಾರ ಸಂದರ್ಶನ ಪ್ರಕ್ರಿಯೆ ಆರಂಭಿಸಿದ್ದಾರೆ.</p><p>ರಾಜ್ಯದ ಎಲ್ಲಾ 234 ವಿಧಾನಸಭೆ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಪಕ್ಷದ ಸಂಸ್ಥಾಪಕರಾದ ವಿಜಯ್ ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೊದಲ ಹಂತದ ಚುನಾವಣೆಯಲ್ಲಿ ಸ್ಪರ್ಧಿಸುವ ತಮ್ಮ ಪಕ್ಷದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲು ಸಂದರ್ಶನ ನಡೆಸುತ್ತಿದ್ದಾರೆ.</p><p>ಇಲ್ಲಿನ ಪನಯೂರಿನಲ್ಲಿರುವ ಟಿವಿಕೆ ಪಕ್ಷದ ಕೇಂದ್ರ ಕಚೇರಿಗೆ ಬಂದಿರುವ ವಿಜಯ್, ಇಂದು 60 ಅಭ್ಯರ್ಥಿಗಳ ಸಂದರ್ಶನ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.</p><p>ಟಿವಿಕೆ ಪಕ್ಷದಿಂದ ಸ್ಪರ್ಧಿಸಲು ಆಸಕ್ತಿ ವ್ಯಕ್ತಪಡಿಸಿ 4,200ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದು ಪ್ರಮುಖ ಕ್ಷೇತ್ರಗಳನ್ನು ಪಕ್ಷದ ಹಿರಿಯ ನಾಯಕರಿಗೆ ನೀಡುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.</p><p>ಪಕ್ಷದ ಹಿರಿಯ ನಾಯಕರಾದ ಬಿ.ಅನಂದ್, ಆದವ್ ಆರ್ಜುನ್, ಆರುಣ್ ರಾಜ್ ಅವರು ಕ್ರಮವಾಗಿ ಟಿ.ನಗರ, ವಿಲ್ಲಿವಾಕ್ಕಂ ಮತ್ತು ತಿರುಚಿಗೋಡ್ ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ.</p><p>2024ರ ಫೆಬ್ರವರಿ 2ರಂದು ಸ್ಥಾಪಿತವಾದ ಟಿವಿಕೆ ಪಕ್ಷ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ಎದುರಿಸುತ್ತಿದ್ದು ಆಡಳಿತದಲ್ಲಿರುವ ಡಿಎಂಕೆಗೆ ಪರ್ಯಾಯ ಶಕ್ತಿಯಾಗಿ ಬೆಳೆಯಲು ಪ್ರಯತ್ನಿಸುತ್ತಿದೆ.</p><p>ಟಿವಿಕೆ ಜೊತೆ ಮೈತ್ರಿ ಮಾಡಿಕೊಳ್ಳುವ ಪಕ್ಷಗಳಿಗೆ ಅಧಿಕಾರ ಹಂಚಿಕೆ ಮಾಡುವ ಹೇಳಿಕೆ ನೀಡಿದ್ದರೂ, ಇದುವರೆಗೆ ಯಾವುದೇ ರಾಜಕೀಯ ಪಕ್ಷ ಟಿವಿಕೆ ಜೊತೆ ಕೈಜೋಡಿಸಿಲ್ಲ.</p>.ತಮಿಳುನಾಡು ಚುನಾವಣೆ: ಐದು ವಿಧಾನಸಭಾ ಕ್ಷೇತ್ರಗಳಿಗೆ ಮುಸ್ಲಿಂ ಲೀಗ್ ಬೇಡಿಕೆ.ತಮಿಳುನಾಡು ವಿಧಾನಸಭೆ ಚುನಾವಣೆ: ಮೈತ್ರಿಗೆ ಡಿಎಂಕೆ, ಕಾಂಗ್ರೆಸ್ ಮುದ್ರೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ವಿಧಾನಸಭಾ ಚುನಾವಣೆಯಲ್ಲಿ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲು ತಮಿಳು ನಟ ಮತ್ತು ರಾಜಕಾರಣಿ ವಿಜಯ್ ಮಂಗಳವಾರ ಸಂದರ್ಶನ ಪ್ರಕ್ರಿಯೆ ಆರಂಭಿಸಿದ್ದಾರೆ.</p><p>ರಾಜ್ಯದ ಎಲ್ಲಾ 234 ವಿಧಾನಸಭೆ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಪಕ್ಷದ ಸಂಸ್ಥಾಪಕರಾದ ವಿಜಯ್ ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೊದಲ ಹಂತದ ಚುನಾವಣೆಯಲ್ಲಿ ಸ್ಪರ್ಧಿಸುವ ತಮ್ಮ ಪಕ್ಷದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲು ಸಂದರ್ಶನ ನಡೆಸುತ್ತಿದ್ದಾರೆ.</p><p>ಇಲ್ಲಿನ ಪನಯೂರಿನಲ್ಲಿರುವ ಟಿವಿಕೆ ಪಕ್ಷದ ಕೇಂದ್ರ ಕಚೇರಿಗೆ ಬಂದಿರುವ ವಿಜಯ್, ಇಂದು 60 ಅಭ್ಯರ್ಥಿಗಳ ಸಂದರ್ಶನ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.</p><p>ಟಿವಿಕೆ ಪಕ್ಷದಿಂದ ಸ್ಪರ್ಧಿಸಲು ಆಸಕ್ತಿ ವ್ಯಕ್ತಪಡಿಸಿ 4,200ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದು ಪ್ರಮುಖ ಕ್ಷೇತ್ರಗಳನ್ನು ಪಕ್ಷದ ಹಿರಿಯ ನಾಯಕರಿಗೆ ನೀಡುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.</p><p>ಪಕ್ಷದ ಹಿರಿಯ ನಾಯಕರಾದ ಬಿ.ಅನಂದ್, ಆದವ್ ಆರ್ಜುನ್, ಆರುಣ್ ರಾಜ್ ಅವರು ಕ್ರಮವಾಗಿ ಟಿ.ನಗರ, ವಿಲ್ಲಿವಾಕ್ಕಂ ಮತ್ತು ತಿರುಚಿಗೋಡ್ ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ.</p><p>2024ರ ಫೆಬ್ರವರಿ 2ರಂದು ಸ್ಥಾಪಿತವಾದ ಟಿವಿಕೆ ಪಕ್ಷ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ಎದುರಿಸುತ್ತಿದ್ದು ಆಡಳಿತದಲ್ಲಿರುವ ಡಿಎಂಕೆಗೆ ಪರ್ಯಾಯ ಶಕ್ತಿಯಾಗಿ ಬೆಳೆಯಲು ಪ್ರಯತ್ನಿಸುತ್ತಿದೆ.</p><p>ಟಿವಿಕೆ ಜೊತೆ ಮೈತ್ರಿ ಮಾಡಿಕೊಳ್ಳುವ ಪಕ್ಷಗಳಿಗೆ ಅಧಿಕಾರ ಹಂಚಿಕೆ ಮಾಡುವ ಹೇಳಿಕೆ ನೀಡಿದ್ದರೂ, ಇದುವರೆಗೆ ಯಾವುದೇ ರಾಜಕೀಯ ಪಕ್ಷ ಟಿವಿಕೆ ಜೊತೆ ಕೈಜೋಡಿಸಿಲ್ಲ.</p>.ತಮಿಳುನಾಡು ಚುನಾವಣೆ: ಐದು ವಿಧಾನಸಭಾ ಕ್ಷೇತ್ರಗಳಿಗೆ ಮುಸ್ಲಿಂ ಲೀಗ್ ಬೇಡಿಕೆ.ತಮಿಳುನಾಡು ವಿಧಾನಸಭೆ ಚುನಾವಣೆ: ಮೈತ್ರಿಗೆ ಡಿಎಂಕೆ, ಕಾಂಗ್ರೆಸ್ ಮುದ್ರೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>