<p><strong>ಚೆನ್ನೈ:</strong> ಕರೂರು ಕಾಲ್ತುಳಿತ ಘಟನೆಯ ಸಂತ್ರಸ್ತರ ಕುಟುಂಬವನ್ನು ನವೆಂಬರ್ 27ರಂದು ಚೆನ್ನೈ ಸಮೀಪದ ಮಹಾಬಲಿಪುರಂನಲ್ಲಿ ನಟ-ರಾಜಕಾರಣಿ ವಿಜಯ್ ಅವರು ಭೇಟಿಯಾಗುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲವೊಂದು ತಿಳಿಸಿದೆ. </p>.Karuru Stampede | ಕರೂರು ಕಾಲ್ತುಳಿತ: ಸಿಬಿಐ ತನಿಖೆಗೆ ವಹಿಸಿದ ಸುಪ್ರೀಂ ಕೋರ್ಟ್.<p>ಇದಕ್ಕಾಗಿ ಖಾಸಗಿ ರೆಸಾರ್ಟ್ನ 50 ಕೊಠಡಿಗಳನ್ನು ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಕಾಯ್ದಿರಿಸಿದೆ. ಪ್ರತಿ ಸಂತ್ರಸ್ತ ಕುಟುಂಬವನ್ನು ಪ್ರತ್ಯೇಕವಾಗಿ ಭೇಟಿಯಾಗಿ ವಿಜಯ್ ತಮ್ಮ ಸಂತಾಪ ವ್ಯಕ್ತಪಡಿಸಲಿದ್ದಾರೆ.</p><p>‘ನಾವು ಸ್ಥಳಕ್ಕೆ ತೆರಳಲು ಬಸ್ ವ್ಯವಸ್ಥೆ ಮಾಡಿದ್ದಾರೆ. ನಾವು ಅನೇಕ ಮಂದಿ ಹೋಗುವವರಿದ್ದೇವೆ’ ಎಂದು ಸಂತ್ರಸ್ತ ಕುಟುಂಬದ ಸದಸ್ಯೆಯೊಬ್ಬರು ಕರೂರಿನಲ್ಲಿ ಪತ್ರಕರ್ತರಿಗೆ ಹೇಳಿದ್ದಾರೆ.</p><p>ಸೆಪ್ಟೆಂಬರ್ 27ರಂದು ನಡೆದ ವಿಜಯ್ ಅವರ ಟಿವಿಕೆ ಸಭೆಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 41 ಜನರು ಮೃತಪಟ್ಟಿದ್ದಾರೆ. 60 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.</p>.ಕರೂರು ಕಾಲ್ತುಳಿತ: ಎಸ್ಐಟಿ ರಚನೆ ಪ್ರಶ್ನಿಸಿ ಟಿವಿಕೆ ಪಕ್ಷ ಸುಪ್ರೀಂ ಕೋರ್ಟ್ಗೆ.<p>ಈ ಪ್ರಸ್ತಾಪಿತ ಕಾರ್ಯಕ್ರಮ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ. ವಿಜಯ್ ಅವರು ಕರೂರಿನಲ್ಲಿಯೇ ಸಂತ್ರಸ್ತ ಕುಟುಂಬಗಳನ್ನು ಭೇಟಿಯಾಗಿ ಸಾಂತ್ವನ ಹೇಳಬಹುದಿತ್ತು. ಅವರಿಗೆ ಪ್ರಯಾಣ ಮತ್ತು ವಸತಿ ವ್ಯವಸ್ಥೆ ಮಾಡಿರುವುದು ಸರಿ ಅಲ್ಲ ಎಂದು ಕೆಲವರು ಟೀಕಿಸಿದ್ದಾರೆ.</p><p>ಆದರೆ, ಕರೂರಿಗೆ ಭೇಟಿ ನೀಡಲು ವಿಜಯ್ ಅವರಿಗೆ ಅಧಿಕಾರಿಗಳಿಂದ ಅನುಮತಿ ನಿರಾಕರಿಸಿದ್ದರಿಂದ ಹೊಸ ವ್ಯವಸ್ಥೆ ಮಾಡಲಾಗಿದೆ ಎಂದು ಪಕ್ಷವು ಸ್ಪಷ್ಟಪಡಿಸಿದೆ. </p> .ಕರೂರು ಕಾಲ್ತುಳಿತ: ಅ.10ಕ್ಕೆ ಸುಪ್ರೀಂ ವಿಚಾರಣೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಕರೂರು ಕಾಲ್ತುಳಿತ ಘಟನೆಯ ಸಂತ್ರಸ್ತರ ಕುಟುಂಬವನ್ನು ನವೆಂಬರ್ 27ರಂದು ಚೆನ್ನೈ ಸಮೀಪದ ಮಹಾಬಲಿಪುರಂನಲ್ಲಿ ನಟ-ರಾಜಕಾರಣಿ ವಿಜಯ್ ಅವರು ಭೇಟಿಯಾಗುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲವೊಂದು ತಿಳಿಸಿದೆ. </p>.Karuru Stampede | ಕರೂರು ಕಾಲ್ತುಳಿತ: ಸಿಬಿಐ ತನಿಖೆಗೆ ವಹಿಸಿದ ಸುಪ್ರೀಂ ಕೋರ್ಟ್.<p>ಇದಕ್ಕಾಗಿ ಖಾಸಗಿ ರೆಸಾರ್ಟ್ನ 50 ಕೊಠಡಿಗಳನ್ನು ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಕಾಯ್ದಿರಿಸಿದೆ. ಪ್ರತಿ ಸಂತ್ರಸ್ತ ಕುಟುಂಬವನ್ನು ಪ್ರತ್ಯೇಕವಾಗಿ ಭೇಟಿಯಾಗಿ ವಿಜಯ್ ತಮ್ಮ ಸಂತಾಪ ವ್ಯಕ್ತಪಡಿಸಲಿದ್ದಾರೆ.</p><p>‘ನಾವು ಸ್ಥಳಕ್ಕೆ ತೆರಳಲು ಬಸ್ ವ್ಯವಸ್ಥೆ ಮಾಡಿದ್ದಾರೆ. ನಾವು ಅನೇಕ ಮಂದಿ ಹೋಗುವವರಿದ್ದೇವೆ’ ಎಂದು ಸಂತ್ರಸ್ತ ಕುಟುಂಬದ ಸದಸ್ಯೆಯೊಬ್ಬರು ಕರೂರಿನಲ್ಲಿ ಪತ್ರಕರ್ತರಿಗೆ ಹೇಳಿದ್ದಾರೆ.</p><p>ಸೆಪ್ಟೆಂಬರ್ 27ರಂದು ನಡೆದ ವಿಜಯ್ ಅವರ ಟಿವಿಕೆ ಸಭೆಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 41 ಜನರು ಮೃತಪಟ್ಟಿದ್ದಾರೆ. 60 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.</p>.ಕರೂರು ಕಾಲ್ತುಳಿತ: ಎಸ್ಐಟಿ ರಚನೆ ಪ್ರಶ್ನಿಸಿ ಟಿವಿಕೆ ಪಕ್ಷ ಸುಪ್ರೀಂ ಕೋರ್ಟ್ಗೆ.<p>ಈ ಪ್ರಸ್ತಾಪಿತ ಕಾರ್ಯಕ್ರಮ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ. ವಿಜಯ್ ಅವರು ಕರೂರಿನಲ್ಲಿಯೇ ಸಂತ್ರಸ್ತ ಕುಟುಂಬಗಳನ್ನು ಭೇಟಿಯಾಗಿ ಸಾಂತ್ವನ ಹೇಳಬಹುದಿತ್ತು. ಅವರಿಗೆ ಪ್ರಯಾಣ ಮತ್ತು ವಸತಿ ವ್ಯವಸ್ಥೆ ಮಾಡಿರುವುದು ಸರಿ ಅಲ್ಲ ಎಂದು ಕೆಲವರು ಟೀಕಿಸಿದ್ದಾರೆ.</p><p>ಆದರೆ, ಕರೂರಿಗೆ ಭೇಟಿ ನೀಡಲು ವಿಜಯ್ ಅವರಿಗೆ ಅಧಿಕಾರಿಗಳಿಂದ ಅನುಮತಿ ನಿರಾಕರಿಸಿದ್ದರಿಂದ ಹೊಸ ವ್ಯವಸ್ಥೆ ಮಾಡಲಾಗಿದೆ ಎಂದು ಪಕ್ಷವು ಸ್ಪಷ್ಟಪಡಿಸಿದೆ. </p> .ಕರೂರು ಕಾಲ್ತುಳಿತ: ಅ.10ಕ್ಕೆ ಸುಪ್ರೀಂ ವಿಚಾರಣೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>