<p><strong>ಚೆನ್ನೈ:</strong> ಮದುರೈನಲ್ಲಿ ನಡೆದ ಪಕ್ಷದ ಎರಡನೇ ರಾಜ್ಯ ಮಟ್ಟದ ಸಮ್ಮೆಳನದಲ್ಲಿ ಸಿಕ್ಕ ಪ್ರತಿಕ್ರಿಯೆಗಳಿಂದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ನಾಯಕ, ನಟ ವಿಜಯ ಉತ್ಸಾಹ ಹೆಚ್ಚಿಸಿಕೊಂಡಿದ್ದಾರೆ. ಸೆಪ್ಟೆಂಬರ್ 13ರಿಂದ ರಾಜ್ಯದ ತಿರುಚಿರಾಪಳ್ಳಿಯಿಂದ ತಮಿಳುನಾಡಿನ ಎಲ್ಲಾ ಜಿಲ್ಲೆಗಳಿಗೆ ಅವರು ಪ್ರವಾಸ ಕೈಗೊಳ್ಳಲಿದ್ದಾರೆ. </p>.<p class="title">ಅವರ ಈ ಪ್ರವಾಸ ರಾಜ್ಯದ ಎಲ್ಲಾ 38 ಜಿಲ್ಲೆಗಳನ್ನು ಒಳಗೊಳ್ಳಲಿದೆ. ಸೆಪ್ಟೆಂಬರ್ 13ರಿಂದ ಡಿಸೆಂಬರ್ 20ರವರೆಗಿನ ಪ್ರತಿ ಶನಿವಾರ ಅವರು ಎರಡರಿಂದ ನಾಲ್ಕು ಜಿಲ್ಲೆಗಳನ್ನು ಸುತ್ತಾಡಲಿದ್ದು, ಅಕ್ಟೋಬರ್ 5ರ ಭಾನುವಾರ ಒಂದು ಜಿಲ್ಲೆಯಲ್ಲಿ ಪ್ರವಾಸದಲ್ಲಿರಲಿದ್ದಾರೆ.</p>.<p>ಈ ಮಾಹಿತಿಯನ್ನೊಳಗೊಂಡ ಪತ್ರವನ್ನು ಟಿವಿಕೆ ಪ್ರಧಾನ ಕಾರ್ಯದರ್ಶಿ ಎನ್. ಆನಂದ್ ಅವರು ಡಿಜಿಪಿಗೆ ಸಲ್ಲಿಸಿದ್ದು, ಸಾರ್ವಜನಿಕ ಪ್ರವಾಸಕ್ಕೆ ಅನುಮತಿ ಮತ್ತು ರಕ್ಷಣೆ ನೀಡುವಂತೆ ಕೇಳಿಕೊಂಡಿದ್ದಾರೆ.</p>.<p>ಆಗಸ್ಟ್ 21ರಂದು ಮದುರೈನಲ್ಲಿ ಪಕ್ಷದ ರಾಜ್ಯ ಮಟ್ಟದ ಎರಡನೇ ಸಮ್ಮೆಳನ ನಡೆದಿತ್ತು. ಸಭೆಯು ಭಾರಿ ಸಂಖ್ಯೆಯ ಜನರನ್ನು ಸೆಳೆದಿದ್ದು, ತಮ್ಮ ಪ್ರಾಥಮಿಕ ಎದುರಾಳಿ ಆಡಳಿತಾರೂಢ ಡಿಎಂಕೆ ಎಂದು ವಿಜಯ್ ಘೋಷಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಮದುರೈನಲ್ಲಿ ನಡೆದ ಪಕ್ಷದ ಎರಡನೇ ರಾಜ್ಯ ಮಟ್ಟದ ಸಮ್ಮೆಳನದಲ್ಲಿ ಸಿಕ್ಕ ಪ್ರತಿಕ್ರಿಯೆಗಳಿಂದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ನಾಯಕ, ನಟ ವಿಜಯ ಉತ್ಸಾಹ ಹೆಚ್ಚಿಸಿಕೊಂಡಿದ್ದಾರೆ. ಸೆಪ್ಟೆಂಬರ್ 13ರಿಂದ ರಾಜ್ಯದ ತಿರುಚಿರಾಪಳ್ಳಿಯಿಂದ ತಮಿಳುನಾಡಿನ ಎಲ್ಲಾ ಜಿಲ್ಲೆಗಳಿಗೆ ಅವರು ಪ್ರವಾಸ ಕೈಗೊಳ್ಳಲಿದ್ದಾರೆ. </p>.<p class="title">ಅವರ ಈ ಪ್ರವಾಸ ರಾಜ್ಯದ ಎಲ್ಲಾ 38 ಜಿಲ್ಲೆಗಳನ್ನು ಒಳಗೊಳ್ಳಲಿದೆ. ಸೆಪ್ಟೆಂಬರ್ 13ರಿಂದ ಡಿಸೆಂಬರ್ 20ರವರೆಗಿನ ಪ್ರತಿ ಶನಿವಾರ ಅವರು ಎರಡರಿಂದ ನಾಲ್ಕು ಜಿಲ್ಲೆಗಳನ್ನು ಸುತ್ತಾಡಲಿದ್ದು, ಅಕ್ಟೋಬರ್ 5ರ ಭಾನುವಾರ ಒಂದು ಜಿಲ್ಲೆಯಲ್ಲಿ ಪ್ರವಾಸದಲ್ಲಿರಲಿದ್ದಾರೆ.</p>.<p>ಈ ಮಾಹಿತಿಯನ್ನೊಳಗೊಂಡ ಪತ್ರವನ್ನು ಟಿವಿಕೆ ಪ್ರಧಾನ ಕಾರ್ಯದರ್ಶಿ ಎನ್. ಆನಂದ್ ಅವರು ಡಿಜಿಪಿಗೆ ಸಲ್ಲಿಸಿದ್ದು, ಸಾರ್ವಜನಿಕ ಪ್ರವಾಸಕ್ಕೆ ಅನುಮತಿ ಮತ್ತು ರಕ್ಷಣೆ ನೀಡುವಂತೆ ಕೇಳಿಕೊಂಡಿದ್ದಾರೆ.</p>.<p>ಆಗಸ್ಟ್ 21ರಂದು ಮದುರೈನಲ್ಲಿ ಪಕ್ಷದ ರಾಜ್ಯ ಮಟ್ಟದ ಎರಡನೇ ಸಮ್ಮೆಳನ ನಡೆದಿತ್ತು. ಸಭೆಯು ಭಾರಿ ಸಂಖ್ಯೆಯ ಜನರನ್ನು ಸೆಳೆದಿದ್ದು, ತಮ್ಮ ಪ್ರಾಥಮಿಕ ಎದುರಾಳಿ ಆಡಳಿತಾರೂಢ ಡಿಎಂಕೆ ಎಂದು ವಿಜಯ್ ಘೋಷಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>