<p><strong>ಚೆನ್ನೈ</strong>: ಮತದಾನ ಅವಧಿಯನ್ನು ಎರಡು ಗಂಟೆ ವಿಸ್ತರಿಸುವಂತೆ ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್ ಅವರು ಗುರುವಾರ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.</p><p>ಮುಖ್ಯ ಚುನಾವಣಾ ಆಯುಕ್ತರಿಗೆ ಬರೆದ ಪತ್ರದಲ್ಲಿ, ಹೆಚ್ಚಿನ ಸಂಖ್ಯೆಯ ಜನರು ಮತ ಚಲಾಯಿಸಲು ಅನುಕೂಲವಾಗುವಂತೆ ತುರ್ತು ಸಾರ್ವಜನಿಕ ಸಾರಿಗೆ ಸೇವೆಗಳನ್ನು ನಿಯೋಜಿಸಬೇಕೆಂದು ಒತ್ತಾಯಿಸಿದ್ದಾರೆ.</p><p>‘ಮತಗಟ್ಟೆಗಳಲ್ಲಿ ಮತದಾರರು ಮತ ಚಲಾಯಿಸಲು ದೀರ್ಘ ಸರತಿಯಲ್ಲಿ ಕಾಯುತ್ತಿರುವ ಬಗ್ಗೆ ವರದಿಗಳಿವೆ, ಆದರೆ ಮತದಾನದ ಪ್ರಕ್ರಿಯೆಯು ನಿಧಾನಗತಿಯಲ್ಲಿ ಸಾಗುತ್ತಿದೆ. ಇಂತಹ ವಿಳಂಬಗಳು ಮತದಾರರನ್ನು ನಿರುತ್ಸಾಹಗೊಳಿಸಬಹುದು ಮತ್ತು ಮತದಾನದ ಪ್ರಮಾಣದ ಮೇಲೆ ಪರಿಣಾಮ ಬೀರಬಹುದು’ ಎಂದು ಅವರು ಹೇಳಿದ್ದಾರೆ.</p><p>ಮತ್ತೊಂದೆಡೆ ಸುದ್ದಿಗಾರರೊಂದಿಗೆ ಮಾತನಾಡಿದ ಟಿವಿಕೆ ಪ್ರಧಾನ ಕಾರ್ಯದರ್ಶಿ ಆನಂದ್, ಸಾರಿಗೆ ಸೌಲಭ್ಯಗಳ ತೀವ್ರ ಕೊರತೆಯಿಂದಾಗಿ ಗುಡುವಾಂಚೇರಿ, ಚೆಂಗಲ್ಪಟ್ಟು ಮತ್ತು ಕೋಯಂಬೇಡಿನ ಪ್ರಮುಖ ಬಸ್ ಟರ್ಮಿನಲ್ಗಳಲ್ಲಿ ಸಾವಿರಾರು ಮತದಾರರು ಸಿಲುಕಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.</p><p>‘ಮತದಾನ ಮಾಡಲು ಜನರು ಯುರೋಪ್, ಅಮೆರಿಕ ಮತ್ತು ಸಿಂಗಪುರದಂತಹ ದೂರದ ದೇಶಗಳಿಂದ ಬಂದಿದ್ದಾರೆ. ಆದರೆ ಇಲ್ಲಿ ಸಾರ್ವಜನಿಕ ಸಾರಿಗೆ ಸೇವೆ ಸ್ಥಗಿತಗೊಂಡಿದ್ದು, ಸಂಚಾರ ದಟ್ಟಣೆಯಿಂದ ಬೇಸತ್ತಿದ್ದಾರೆ’ ಎಂದು ಹೇಳಿದ್ದಾರೆ.</p><p>‘ಡಿಎಂಕೆ ನೇತೃತ್ವದ ಸರ್ಕಾರವು ಉದ್ದೇಶಪೂರ್ವಕವಾಗಿ ಮತದಾನದ ಪ್ರಮಾಣವನ್ನು ಕುಗ್ಗಿಸಲು ಸಂಚು ಮಾಡುತ್ತಿದೆ ಎಂದು ಪ್ರಧಾನ ಕಾರ್ಯದರ್ಶಿ ಅರ್ಜುನ ಅವರು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ಮತದಾನ ಅವಧಿಯನ್ನು ಎರಡು ಗಂಟೆ ವಿಸ್ತರಿಸುವಂತೆ ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್ ಅವರು ಗುರುವಾರ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.</p><p>ಮುಖ್ಯ ಚುನಾವಣಾ ಆಯುಕ್ತರಿಗೆ ಬರೆದ ಪತ್ರದಲ್ಲಿ, ಹೆಚ್ಚಿನ ಸಂಖ್ಯೆಯ ಜನರು ಮತ ಚಲಾಯಿಸಲು ಅನುಕೂಲವಾಗುವಂತೆ ತುರ್ತು ಸಾರ್ವಜನಿಕ ಸಾರಿಗೆ ಸೇವೆಗಳನ್ನು ನಿಯೋಜಿಸಬೇಕೆಂದು ಒತ್ತಾಯಿಸಿದ್ದಾರೆ.</p><p>‘ಮತಗಟ್ಟೆಗಳಲ್ಲಿ ಮತದಾರರು ಮತ ಚಲಾಯಿಸಲು ದೀರ್ಘ ಸರತಿಯಲ್ಲಿ ಕಾಯುತ್ತಿರುವ ಬಗ್ಗೆ ವರದಿಗಳಿವೆ, ಆದರೆ ಮತದಾನದ ಪ್ರಕ್ರಿಯೆಯು ನಿಧಾನಗತಿಯಲ್ಲಿ ಸಾಗುತ್ತಿದೆ. ಇಂತಹ ವಿಳಂಬಗಳು ಮತದಾರರನ್ನು ನಿರುತ್ಸಾಹಗೊಳಿಸಬಹುದು ಮತ್ತು ಮತದಾನದ ಪ್ರಮಾಣದ ಮೇಲೆ ಪರಿಣಾಮ ಬೀರಬಹುದು’ ಎಂದು ಅವರು ಹೇಳಿದ್ದಾರೆ.</p><p>ಮತ್ತೊಂದೆಡೆ ಸುದ್ದಿಗಾರರೊಂದಿಗೆ ಮಾತನಾಡಿದ ಟಿವಿಕೆ ಪ್ರಧಾನ ಕಾರ್ಯದರ್ಶಿ ಆನಂದ್, ಸಾರಿಗೆ ಸೌಲಭ್ಯಗಳ ತೀವ್ರ ಕೊರತೆಯಿಂದಾಗಿ ಗುಡುವಾಂಚೇರಿ, ಚೆಂಗಲ್ಪಟ್ಟು ಮತ್ತು ಕೋಯಂಬೇಡಿನ ಪ್ರಮುಖ ಬಸ್ ಟರ್ಮಿನಲ್ಗಳಲ್ಲಿ ಸಾವಿರಾರು ಮತದಾರರು ಸಿಲುಕಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.</p><p>‘ಮತದಾನ ಮಾಡಲು ಜನರು ಯುರೋಪ್, ಅಮೆರಿಕ ಮತ್ತು ಸಿಂಗಪುರದಂತಹ ದೂರದ ದೇಶಗಳಿಂದ ಬಂದಿದ್ದಾರೆ. ಆದರೆ ಇಲ್ಲಿ ಸಾರ್ವಜನಿಕ ಸಾರಿಗೆ ಸೇವೆ ಸ್ಥಗಿತಗೊಂಡಿದ್ದು, ಸಂಚಾರ ದಟ್ಟಣೆಯಿಂದ ಬೇಸತ್ತಿದ್ದಾರೆ’ ಎಂದು ಹೇಳಿದ್ದಾರೆ.</p><p>‘ಡಿಎಂಕೆ ನೇತೃತ್ವದ ಸರ್ಕಾರವು ಉದ್ದೇಶಪೂರ್ವಕವಾಗಿ ಮತದಾನದ ಪ್ರಮಾಣವನ್ನು ಕುಗ್ಗಿಸಲು ಸಂಚು ಮಾಡುತ್ತಿದೆ ಎಂದು ಪ್ರಧಾನ ಕಾರ್ಯದರ್ಶಿ ಅರ್ಜುನ ಅವರು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>