<p><strong>ಚೆನ್ನೈ:</strong> ಕರೂರು ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬದವರೊಂದಿಗೆ ವಾಟ್ಸ್ಆ್ಯಪ್ ವಿಡಿಯೊ ಕರೆ ಮೂಲಕ ಮಾತನಾಡಿರುವ ನಟ, ರಾಜಕಾರಣಿ ವಿಜಯ್, ಎಲ್ಲ ರೀತಿಯ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ. </p><p>ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಅಧ್ಯಕ್ಷ, ನಟ ವಿಜಯ್ ಸೆಪ್ಟೆಂಬರ್ 27ರಂದು ಕರೂರಿನಲ್ಲಿ ರ್ಯಾಲಿ ನಡೆಸಿದ್ದ ವೇಳೆ ಕಾಲ್ತುಳಿತ ಸಂಭವಿಸಿತ್ತು. ಈ ದುರಂತದಲ್ಲಿ 41 ಮಂದಿ ಮೃತಪಟ್ಟಿದ್ದರು. </p><p>ಆದರೆ ದುರಂತ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತರನ್ನು ಭೇಟಿಯಾಗದೇ ಇರುವುದು ವ್ಯಾಪಕ ಟೀಕೆಗೆ ಕಾರಣವಾಗಿತ್ತು. ವಿಜಯ್ ಭೇಟಿಗೆ ಅನುಮತಿ ಸಹ ದೊರಕಿರಲಿಲ್ಲ. </p><p>ಸಂತ್ರಸ್ತ ಕುಟುಂಬದ ವ್ಯಕ್ತಿಯೊಬ್ಬರು ಮಾತನಾಡಿ, 'ವಿಜಯ್ ಅವರು ನನ್ನ ಅಳಿಯನಿಗೆ ಕರೆ ಮಾಡಿ ವಿಷಾದಿಸಿದ್ದಾರೆ. ತನ್ನೆಲ್ಲ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ' ಎಂದು ಹೇಳಿದ್ದಾರೆ. </p><p>ಮತ್ತೊಂದು ಕರೆಯಲ್ಲಿ ವಿಜಯ್, 'ನಾನು ನಿನ್ನ ಮಗ ಇದ್ದಂತೆ' ಎಂದು ಮಹಿಳೆಗೆ ಸಾಂತ್ವನ ಹೇಳಿದ್ದಾರೆ. </p><p>ಕರೂರಿಗೆ ಭೇಟಿ ನೀಡವಂತೆಯೂ ಪಕ್ಷದ ಕಾರ್ಯಕರ್ತರಿಗೂ ವಿಜಯ್ ಸೂಚಿಸಿದ್ದಾರೆ.</p>.ಕರೂರು ಕಾಲ್ತುಳಿತ ಪ್ರಕರಣ: ವಿಜಯ್ ಜೊತೆ ಸಖ್ಯ ಬೆಳೆಸಲು ಎಐಎಡಿಎಂಕೆ, BJP ಕಸರತ್ತು.ಕರೂರು ಕಾಲ್ತುಳಿತ ದುರಂತ: TVK ಇಬ್ಬರು ಕಾರ್ಯದರ್ಶಿಗಳಿಗೆ 14 ದಿನ ನ್ಯಾಯಾಂಗ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಕರೂರು ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬದವರೊಂದಿಗೆ ವಾಟ್ಸ್ಆ್ಯಪ್ ವಿಡಿಯೊ ಕರೆ ಮೂಲಕ ಮಾತನಾಡಿರುವ ನಟ, ರಾಜಕಾರಣಿ ವಿಜಯ್, ಎಲ್ಲ ರೀತಿಯ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ. </p><p>ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಅಧ್ಯಕ್ಷ, ನಟ ವಿಜಯ್ ಸೆಪ್ಟೆಂಬರ್ 27ರಂದು ಕರೂರಿನಲ್ಲಿ ರ್ಯಾಲಿ ನಡೆಸಿದ್ದ ವೇಳೆ ಕಾಲ್ತುಳಿತ ಸಂಭವಿಸಿತ್ತು. ಈ ದುರಂತದಲ್ಲಿ 41 ಮಂದಿ ಮೃತಪಟ್ಟಿದ್ದರು. </p><p>ಆದರೆ ದುರಂತ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತರನ್ನು ಭೇಟಿಯಾಗದೇ ಇರುವುದು ವ್ಯಾಪಕ ಟೀಕೆಗೆ ಕಾರಣವಾಗಿತ್ತು. ವಿಜಯ್ ಭೇಟಿಗೆ ಅನುಮತಿ ಸಹ ದೊರಕಿರಲಿಲ್ಲ. </p><p>ಸಂತ್ರಸ್ತ ಕುಟುಂಬದ ವ್ಯಕ್ತಿಯೊಬ್ಬರು ಮಾತನಾಡಿ, 'ವಿಜಯ್ ಅವರು ನನ್ನ ಅಳಿಯನಿಗೆ ಕರೆ ಮಾಡಿ ವಿಷಾದಿಸಿದ್ದಾರೆ. ತನ್ನೆಲ್ಲ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ' ಎಂದು ಹೇಳಿದ್ದಾರೆ. </p><p>ಮತ್ತೊಂದು ಕರೆಯಲ್ಲಿ ವಿಜಯ್, 'ನಾನು ನಿನ್ನ ಮಗ ಇದ್ದಂತೆ' ಎಂದು ಮಹಿಳೆಗೆ ಸಾಂತ್ವನ ಹೇಳಿದ್ದಾರೆ. </p><p>ಕರೂರಿಗೆ ಭೇಟಿ ನೀಡವಂತೆಯೂ ಪಕ್ಷದ ಕಾರ್ಯಕರ್ತರಿಗೂ ವಿಜಯ್ ಸೂಚಿಸಿದ್ದಾರೆ.</p>.ಕರೂರು ಕಾಲ್ತುಳಿತ ಪ್ರಕರಣ: ವಿಜಯ್ ಜೊತೆ ಸಖ್ಯ ಬೆಳೆಸಲು ಎಐಎಡಿಎಂಕೆ, BJP ಕಸರತ್ತು.ಕರೂರು ಕಾಲ್ತುಳಿತ ದುರಂತ: TVK ಇಬ್ಬರು ಕಾರ್ಯದರ್ಶಿಗಳಿಗೆ 14 ದಿನ ನ್ಯಾಯಾಂಗ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>