<p><strong>ಲಖನೌ: </strong>ಉತ್ತರ ಪ್ರದೇಶ ಸರ್ಕಾರವು ಎಂಟು ಮಂದಿ ಪೊಲೀಸರ ಹತ್ಯೆ ಪ್ರಕರಣದ ಬಗ್ಗೆ ತನಿಖೆ ನಡೆಸಲು ರಚಿಸಿರುವ ವಿಶೇಷ ತನಿಖಾ ತಂಡವು ರೌಡಿಶೀಟರ್ ವಿಕಾಸ್ ದುಬೆ ಮತ್ತು ಆತನ ಲೆಕ್ಕಿಗನ ₹150 ಕೋಟಿ ಮೌಲ್ಯದ ಆಸ್ತಿಯ ಬಗ್ಗೆ ತನಿಖೆ ನಡೆಸುವಂತೆ ಜಾರಿ ನಿರ್ದೇಶನಾಲಯಕ್ಕೆ (ಇಡಿ) ಶಿಫಾರಸು ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಕಾನ್ಪುರದಲ್ಲಿ ವಿಕಾಸ್ ದುಬೆ ನಡೆಸಿದ ದಾಳಿಯಲ್ಲಿ 8 ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದರು. ಈ ಪ್ರಕರಣ ಸಂಬಂಧ ವಿಚಾರಣೆ ನಡೆಸಲು ಉತ್ತರ ಪ್ರದೇಶ ಸರ್ಕಾರವು ಮೂವರು ಎಸ್ಐಟಿ ಅಧಿಕಾರಿಗಳ ವಿಶೇಷ ತನಿಖಾ ತಂಡವನ್ನು ರಚಿಸಿತ್ತು.</p>.<p>ಈ ವಿಶೇಷ ತನಿಖಾ ತಂಡವು ವಿಕಾಸ್ ದುಬೆ ಮತ್ತು ಆತನ ಲೆಕ್ಕಿಗನ ₹150ಕೋಟಿ ಮೌಲ್ಯದ ಆಸ್ತಿಯ ಬಗ್ಗೆ ತನಿಖೆಗೆ ಶಿಫಾರಸು ಮಾಡಿದೆ. ಅಲ್ಲದೇ ತನ್ನ ಸಾಮ್ರಾಜ್ಯ ಕಟ್ಟಲು ವಿಕಾಸ್ ದುಬೆಗೆ ಸಹಾಯ ಮಾಡಿದ ಗ್ರಾಮಾಭಿವೃದ್ಧಿ, ಆಹಾರ ಮತ್ತು ಕಂದಾಯ ಹಾಗೂ ಪೊಲೀಸ್ ಇಲಾಖೆಯ 90 ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆಯೂ ಸಲಹೆ ನೀಡಿದೆ.</p>.<p>ವಿಕಾಸ್ ದುಬೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದ, ಅವರಿಗೆ ಸಹಾಯ ಮಾಡಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಂಜಯ್ ಭೂಸರೆಡ್ಡಿ ಅವರು ಉತ್ತರ ಪ್ರದೇಶ ಸರ್ಕಾರಕ್ಕೆ ಸಲ್ಲಿಸಿದ 3,100 ಪುಟಗಳ ವರದಿಯಲ್ಲಿ ತಿಳಿಸಿದ್ದಾರೆ.</p>.<p>ಕೆಲ ಅಧಿಕಾರಿಗಳು ವಿಕಾಸ್ ದುಬೆ ವಿರುದ್ದ ದಾಖಲಾದ ದೂರುಗಳ ಬಗ್ಗೆ ಕ್ರಮಗಳನ್ನು ಕೈಗೊಳ್ಳಲಿಲ್ಲ. ಅಲ್ಲದೆ ಅವರು ದುಬೆಗೆ ಶಸ್ತ್ರಾಸ್ತ್ರ, ಸಿಮ್ ಕಾರ್ಡ್, ಪಾಸ್ಪೋರ್ಟ್, ಸುಳ್ಳು ದಾಖಲೆಗಳನ್ನು ಒದಗಿಸಿ ಕೊಟ್ಟಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.</p>.<p>ಪರವಾನಗಿ ಪಡೆದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ಖರೀದಿಸಲು ಮತ್ತು ಕಾನೂನುಬಾಹಿರವಾಗಿ ಅದನ್ನು ಸಂಗ್ರಹಿಸಲು ವಿಕಾಸ್ ದುಬೆಗೆ ಅವಕಾಶ ನೀಡಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ಅವರ ವಿರುದ್ಧ ಎಫ್ಐಆರ್ ದಾಖಲಿಸಬೇಕು ಎಂದು ವರದಿಯಲ್ಲಿ ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ: </strong>ಉತ್ತರ ಪ್ರದೇಶ ಸರ್ಕಾರವು ಎಂಟು ಮಂದಿ ಪೊಲೀಸರ ಹತ್ಯೆ ಪ್ರಕರಣದ ಬಗ್ಗೆ ತನಿಖೆ ನಡೆಸಲು ರಚಿಸಿರುವ ವಿಶೇಷ ತನಿಖಾ ತಂಡವು ರೌಡಿಶೀಟರ್ ವಿಕಾಸ್ ದುಬೆ ಮತ್ತು ಆತನ ಲೆಕ್ಕಿಗನ ₹150 ಕೋಟಿ ಮೌಲ್ಯದ ಆಸ್ತಿಯ ಬಗ್ಗೆ ತನಿಖೆ ನಡೆಸುವಂತೆ ಜಾರಿ ನಿರ್ದೇಶನಾಲಯಕ್ಕೆ (ಇಡಿ) ಶಿಫಾರಸು ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಕಾನ್ಪುರದಲ್ಲಿ ವಿಕಾಸ್ ದುಬೆ ನಡೆಸಿದ ದಾಳಿಯಲ್ಲಿ 8 ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದರು. ಈ ಪ್ರಕರಣ ಸಂಬಂಧ ವಿಚಾರಣೆ ನಡೆಸಲು ಉತ್ತರ ಪ್ರದೇಶ ಸರ್ಕಾರವು ಮೂವರು ಎಸ್ಐಟಿ ಅಧಿಕಾರಿಗಳ ವಿಶೇಷ ತನಿಖಾ ತಂಡವನ್ನು ರಚಿಸಿತ್ತು.</p>.<p>ಈ ವಿಶೇಷ ತನಿಖಾ ತಂಡವು ವಿಕಾಸ್ ದುಬೆ ಮತ್ತು ಆತನ ಲೆಕ್ಕಿಗನ ₹150ಕೋಟಿ ಮೌಲ್ಯದ ಆಸ್ತಿಯ ಬಗ್ಗೆ ತನಿಖೆಗೆ ಶಿಫಾರಸು ಮಾಡಿದೆ. ಅಲ್ಲದೇ ತನ್ನ ಸಾಮ್ರಾಜ್ಯ ಕಟ್ಟಲು ವಿಕಾಸ್ ದುಬೆಗೆ ಸಹಾಯ ಮಾಡಿದ ಗ್ರಾಮಾಭಿವೃದ್ಧಿ, ಆಹಾರ ಮತ್ತು ಕಂದಾಯ ಹಾಗೂ ಪೊಲೀಸ್ ಇಲಾಖೆಯ 90 ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆಯೂ ಸಲಹೆ ನೀಡಿದೆ.</p>.<p>ವಿಕಾಸ್ ದುಬೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದ, ಅವರಿಗೆ ಸಹಾಯ ಮಾಡಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಂಜಯ್ ಭೂಸರೆಡ್ಡಿ ಅವರು ಉತ್ತರ ಪ್ರದೇಶ ಸರ್ಕಾರಕ್ಕೆ ಸಲ್ಲಿಸಿದ 3,100 ಪುಟಗಳ ವರದಿಯಲ್ಲಿ ತಿಳಿಸಿದ್ದಾರೆ.</p>.<p>ಕೆಲ ಅಧಿಕಾರಿಗಳು ವಿಕಾಸ್ ದುಬೆ ವಿರುದ್ದ ದಾಖಲಾದ ದೂರುಗಳ ಬಗ್ಗೆ ಕ್ರಮಗಳನ್ನು ಕೈಗೊಳ್ಳಲಿಲ್ಲ. ಅಲ್ಲದೆ ಅವರು ದುಬೆಗೆ ಶಸ್ತ್ರಾಸ್ತ್ರ, ಸಿಮ್ ಕಾರ್ಡ್, ಪಾಸ್ಪೋರ್ಟ್, ಸುಳ್ಳು ದಾಖಲೆಗಳನ್ನು ಒದಗಿಸಿ ಕೊಟ್ಟಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.</p>.<p>ಪರವಾನಗಿ ಪಡೆದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ಖರೀದಿಸಲು ಮತ್ತು ಕಾನೂನುಬಾಹಿರವಾಗಿ ಅದನ್ನು ಸಂಗ್ರಹಿಸಲು ವಿಕಾಸ್ ದುಬೆಗೆ ಅವಕಾಶ ನೀಡಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ಅವರ ವಿರುದ್ಧ ಎಫ್ಐಆರ್ ದಾಖಲಿಸಬೇಕು ಎಂದು ವರದಿಯಲ್ಲಿ ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>