<p>ನವದೆಹಲಿ (ಪಿಟಿಐ): 2047ರ ಹೊತ್ತಿಗೆ ಪ್ರಧಾನಿ ನರೇಂದ್ರ ಮೋದಿ ಅವರ ‘ವಿಕಸಿತ ಭಾರತ’ ರೂಪಿಸುವ ಗುರಿ ಮುಟ್ಟಲು ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ದೇಶದಾದ್ಯಂತ ಜನರನ್ನು ಒಗ್ಗೂಡಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಸೋಮವಾರ ಕರೆ ನೀಡಿದ್ದಾರೆ.</p>.<p>ಬಿಜೆಪಿಯ 47ನೇ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಬಿಜೆಪಿಯನ್ನು ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವನ್ನಾಗಿ ಕಟ್ಟುವಲ್ಲಿ ‘ತ್ಯಾಗ ಮತ್ತು ಬಲಿದಾನ’ ನೀಡಿದ ನಾಯಕರು ಮತ್ತು ಕಾರ್ಯಕರ್ತರ ಪ್ರೇರಣೆ ಪಡೆದು ಪಕ್ಷವನ್ನು ಇನ್ನಷ್ಟು ಎತ್ತರಕ್ಕೆ ಬೆಳಸಬೇಕಿದೆ’ ಎಂದು ಹೇಳಿದರು.</p>.<p>‘2047ರ ವೇಳೆಗೆ ವಿಕಸಿತ ಭಾರತ ರೂಪಿಸಲು ಮತ್ತು ಪಂಚಾಯಿತಿಯಿಂದ ಸಂಸತ್ತಿನವರೆಗೂ ‘ಭಗವಾಧ್ವಜ’ (ಕೇಸರಿ) ಹಾರಿಸುವ ಕನಸು ಈಡೇರಿಸಲು ಮುಂದಡಿ ಇಡಬೇಕಿದೆ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260407-51-1204299278</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): 2047ರ ಹೊತ್ತಿಗೆ ಪ್ರಧಾನಿ ನರೇಂದ್ರ ಮೋದಿ ಅವರ ‘ವಿಕಸಿತ ಭಾರತ’ ರೂಪಿಸುವ ಗುರಿ ಮುಟ್ಟಲು ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ದೇಶದಾದ್ಯಂತ ಜನರನ್ನು ಒಗ್ಗೂಡಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಸೋಮವಾರ ಕರೆ ನೀಡಿದ್ದಾರೆ.</p>.<p>ಬಿಜೆಪಿಯ 47ನೇ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಬಿಜೆಪಿಯನ್ನು ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವನ್ನಾಗಿ ಕಟ್ಟುವಲ್ಲಿ ‘ತ್ಯಾಗ ಮತ್ತು ಬಲಿದಾನ’ ನೀಡಿದ ನಾಯಕರು ಮತ್ತು ಕಾರ್ಯಕರ್ತರ ಪ್ರೇರಣೆ ಪಡೆದು ಪಕ್ಷವನ್ನು ಇನ್ನಷ್ಟು ಎತ್ತರಕ್ಕೆ ಬೆಳಸಬೇಕಿದೆ’ ಎಂದು ಹೇಳಿದರು.</p>.<p>‘2047ರ ವೇಳೆಗೆ ವಿಕಸಿತ ಭಾರತ ರೂಪಿಸಲು ಮತ್ತು ಪಂಚಾಯಿತಿಯಿಂದ ಸಂಸತ್ತಿನವರೆಗೂ ‘ಭಗವಾಧ್ವಜ’ (ಕೇಸರಿ) ಹಾರಿಸುವ ಕನಸು ಈಡೇರಿಸಲು ಮುಂದಡಿ ಇಡಬೇಕಿದೆ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260407-51-1204299278</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>