<p><strong>ಉದಯಪುರ</strong>: ರಾಜಸ್ಥಾನದಲ್ಲಿ ದಾಖಲಾಗಿರುವ ₹30 ಕೋಟಿ ವಂಚನೆ ಪ್ರಕರಣದಲ್ಲಿ ಬಂಧಿತರಾಗಿರುವ ಜನಪ್ರಿಯ ಚಲನಚಿತ್ರ ನಿರ್ದೇಶಕ, ನಿರ್ಮಾಪಕ ವಿಕ್ರಮ್ ಭಟ್ ಮತ್ತು ಅವರ ಪತ್ನಿ ಶ್ವೇತಾಂಬರಿ ಅವರನ್ನು ನ್ಯಾಯಾಲಯವು ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.</p><p>ಈ ಪ್ರಕರಣ ಸಂಬಂಧ ಎಸಿಜೆಎಂ ನ್ಯಾಯಾಲಯದ ಎದುರು ಆರೋಪಿಗಳನ್ನು ಹಾಜರುಪಡಿಸಲಾಯಿತು. ವಿಕ್ರಮ್ ಭಟ್ ಮತ್ತು ಅವರ ಪತ್ನಿ ಶ್ವೇತಾಂಬರಿ ಅವರನ್ನು ನ್ಯಾಯಾಲಯವು ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.</p><p>ಮುಂಬೈನಲ್ಲಿರುವ ವಿಕ್ರಮ್ ಅವರ ಕಚೇರಿಯಿಂದ ದಾಖಲೆಗಳನ್ನು ವಶಪಡಿಸಿಕೊಂಡು ತನಿಖೆ ನಡೆಸಬೇಕು. ಹೀಗಾಗಿ ಕಸ್ಟಡಿಗೆ ನೀಡುವಂತೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಡಿಸೆಂಬರ್ 16ರಂದು ಮತ್ತೆ ವಿಚಾರಣೆಗೆ ಮತ್ತೆ ಹಾಜರಾಗುವಂತೆ ನ್ಯಾಯಾಲಯ ತಿಳಿಸಿದೆ.</p>.ಕಾನೂನುಗಳು ಜನರ ಒಳಿತಿಗೇ ಹೊರತು, ಹೊರೆಯಾಗಲು ಅಲ್ಲ: PM ಮೋದಿ.ಧ್ರುವಂತ್ ಮೇಲೆ ಕೈ ಮಾಡಲು ಹೋದ ರಜತ್: ಆಟಕ್ಕೂ ಮೊದಲೇ ಮನೆಯಲ್ಲಿ ಹೊಡೆದಾಟ ಶುರು. <p>ಭಟ್, ಅವರ ಪತ್ನಿ ಶ್ವೇತಾಂಬರಿ ಭಟ್ ಮತ್ತು ಇತರ ಆರು ಮಂದಿ, ಇಂದಿರಾ ಗ್ರೂಪ್ ಆಫ್ ಕಂಪನಿಗಳ ಸಂಸ್ಥಾಪಕ ಉದಯಪುರ ಮೂಲದ ಡಾ. ಅಜಯ್ ಮುರ್ದಿಯಾ ಅವರಿಗೆ ₹30 ಕೋಟಿ ವಂಚನೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ ಎಂದು ಅಧಿಕಾರಿ ಹೇಳಿದ್ದರು. ಈ ಪ್ರಕರಣದಲ್ಲಿ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ ಎಂದೂ ಅವರು ತಿಳಿಸಿದ್ದರು.</p><p>‘ಇಂದಿರಾ ಐವಿಎಫ್ ಆಸ್ಪತ್ರೆಯ ಮಾಲೀಕರಾದ ಮುರ್ದಿಯಾ, ತಮ್ಮ ದಿವಂಗತ ಪತ್ನಿಯ ಜೀವನ ಚರಿತ್ರೆ ಆಧರಿಸಿ ಸಿನಿಮಾ ಮಾಡಲು ಬಯಸಿದ್ದರು. ಈ ಚಿತ್ರದ ಮೂಲಕ ₹200 ಕೋಟಿ ಗಳಿಕೆಯ ಭರವಸೆಯನ್ನೂ ನಿರ್ಮಾಪಕರು ನೀಡಿದ್ದರು. ಆದರೆ, ಚಿತ್ರ ಸೆಟ್ಟೇರಲೇ ಇಲ್ಲ. ನಂತರ, ಮುರ್ದಿಯಾ ಉದಯಪುರದ ಭೋಪಾಲ್ಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ವಂಚನೆ ಮತ್ತು ಇತರ ಅಪರಾಧಗಳ ಆರೋಪದಡಿ ಎಫ್ಐಆರ್ ದಾಖಲಿಸಲಾಗಿದೆ’ಎಂದು ಅಧಿಕಾರಿ ಹೇಳಿದ್ದರು.</p><p>ಉದಯಪುರ ಪೊಲೀಸರ ತಂಡವು ಭಾನುವಾರ ವಿಕ್ರಮ್ ಭಟ್ ಮತ್ತು ಶ್ವೇತಾಂಬರಿ ಅವರನ್ನು ಬಂಧಿಸಿದೆ.</p>.ಶರ್ಮಿಷ್ಠೆಯಾಗಿ ಉಮಾಶ್ರೀ: ಅಭಿನಯಕ್ಕೆ ಮನಸೋತ ನಾಗತಿಹಳ್ಳಿ ಚಂದ್ರಶೇಖರ್ .Bollywood : ನಟಿ ಮಾಧುರಿ ದೀಕ್ಷಿತ್ ಅಂದಕ್ಕೆ ಮನಸೋತ ಯುವತಿಯರು.ಶಿರಹಟ್ಟಿ ಪಶು ವೈದ್ಯಾಧಿಕಾರಿ ಡಾ.ನಿಂಗಪ್ಪ ಮನೆ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ.IND vs SA: ಟಿ–20 ಕ್ರಿಕೆಟ್ನಲ್ಲಿ ಉಭಯ ತಂಡಗಳ ಬಲಾಬಲ ಹೀಗಿದೆ...<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉದಯಪುರ</strong>: ರಾಜಸ್ಥಾನದಲ್ಲಿ ದಾಖಲಾಗಿರುವ ₹30 ಕೋಟಿ ವಂಚನೆ ಪ್ರಕರಣದಲ್ಲಿ ಬಂಧಿತರಾಗಿರುವ ಜನಪ್ರಿಯ ಚಲನಚಿತ್ರ ನಿರ್ದೇಶಕ, ನಿರ್ಮಾಪಕ ವಿಕ್ರಮ್ ಭಟ್ ಮತ್ತು ಅವರ ಪತ್ನಿ ಶ್ವೇತಾಂಬರಿ ಅವರನ್ನು ನ್ಯಾಯಾಲಯವು ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.</p><p>ಈ ಪ್ರಕರಣ ಸಂಬಂಧ ಎಸಿಜೆಎಂ ನ್ಯಾಯಾಲಯದ ಎದುರು ಆರೋಪಿಗಳನ್ನು ಹಾಜರುಪಡಿಸಲಾಯಿತು. ವಿಕ್ರಮ್ ಭಟ್ ಮತ್ತು ಅವರ ಪತ್ನಿ ಶ್ವೇತಾಂಬರಿ ಅವರನ್ನು ನ್ಯಾಯಾಲಯವು ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.</p><p>ಮುಂಬೈನಲ್ಲಿರುವ ವಿಕ್ರಮ್ ಅವರ ಕಚೇರಿಯಿಂದ ದಾಖಲೆಗಳನ್ನು ವಶಪಡಿಸಿಕೊಂಡು ತನಿಖೆ ನಡೆಸಬೇಕು. ಹೀಗಾಗಿ ಕಸ್ಟಡಿಗೆ ನೀಡುವಂತೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಡಿಸೆಂಬರ್ 16ರಂದು ಮತ್ತೆ ವಿಚಾರಣೆಗೆ ಮತ್ತೆ ಹಾಜರಾಗುವಂತೆ ನ್ಯಾಯಾಲಯ ತಿಳಿಸಿದೆ.</p>.ಕಾನೂನುಗಳು ಜನರ ಒಳಿತಿಗೇ ಹೊರತು, ಹೊರೆಯಾಗಲು ಅಲ್ಲ: PM ಮೋದಿ.ಧ್ರುವಂತ್ ಮೇಲೆ ಕೈ ಮಾಡಲು ಹೋದ ರಜತ್: ಆಟಕ್ಕೂ ಮೊದಲೇ ಮನೆಯಲ್ಲಿ ಹೊಡೆದಾಟ ಶುರು. <p>ಭಟ್, ಅವರ ಪತ್ನಿ ಶ್ವೇತಾಂಬರಿ ಭಟ್ ಮತ್ತು ಇತರ ಆರು ಮಂದಿ, ಇಂದಿರಾ ಗ್ರೂಪ್ ಆಫ್ ಕಂಪನಿಗಳ ಸಂಸ್ಥಾಪಕ ಉದಯಪುರ ಮೂಲದ ಡಾ. ಅಜಯ್ ಮುರ್ದಿಯಾ ಅವರಿಗೆ ₹30 ಕೋಟಿ ವಂಚನೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ ಎಂದು ಅಧಿಕಾರಿ ಹೇಳಿದ್ದರು. ಈ ಪ್ರಕರಣದಲ್ಲಿ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ ಎಂದೂ ಅವರು ತಿಳಿಸಿದ್ದರು.</p><p>‘ಇಂದಿರಾ ಐವಿಎಫ್ ಆಸ್ಪತ್ರೆಯ ಮಾಲೀಕರಾದ ಮುರ್ದಿಯಾ, ತಮ್ಮ ದಿವಂಗತ ಪತ್ನಿಯ ಜೀವನ ಚರಿತ್ರೆ ಆಧರಿಸಿ ಸಿನಿಮಾ ಮಾಡಲು ಬಯಸಿದ್ದರು. ಈ ಚಿತ್ರದ ಮೂಲಕ ₹200 ಕೋಟಿ ಗಳಿಕೆಯ ಭರವಸೆಯನ್ನೂ ನಿರ್ಮಾಪಕರು ನೀಡಿದ್ದರು. ಆದರೆ, ಚಿತ್ರ ಸೆಟ್ಟೇರಲೇ ಇಲ್ಲ. ನಂತರ, ಮುರ್ದಿಯಾ ಉದಯಪುರದ ಭೋಪಾಲ್ಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ವಂಚನೆ ಮತ್ತು ಇತರ ಅಪರಾಧಗಳ ಆರೋಪದಡಿ ಎಫ್ಐಆರ್ ದಾಖಲಿಸಲಾಗಿದೆ’ಎಂದು ಅಧಿಕಾರಿ ಹೇಳಿದ್ದರು.</p><p>ಉದಯಪುರ ಪೊಲೀಸರ ತಂಡವು ಭಾನುವಾರ ವಿಕ್ರಮ್ ಭಟ್ ಮತ್ತು ಶ್ವೇತಾಂಬರಿ ಅವರನ್ನು ಬಂಧಿಸಿದೆ.</p>.ಶರ್ಮಿಷ್ಠೆಯಾಗಿ ಉಮಾಶ್ರೀ: ಅಭಿನಯಕ್ಕೆ ಮನಸೋತ ನಾಗತಿಹಳ್ಳಿ ಚಂದ್ರಶೇಖರ್ .Bollywood : ನಟಿ ಮಾಧುರಿ ದೀಕ್ಷಿತ್ ಅಂದಕ್ಕೆ ಮನಸೋತ ಯುವತಿಯರು.ಶಿರಹಟ್ಟಿ ಪಶು ವೈದ್ಯಾಧಿಕಾರಿ ಡಾ.ನಿಂಗಪ್ಪ ಮನೆ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ.IND vs SA: ಟಿ–20 ಕ್ರಿಕೆಟ್ನಲ್ಲಿ ಉಭಯ ತಂಡಗಳ ಬಲಾಬಲ ಹೀಗಿದೆ...<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>