ಚೆನ್ನೈ: ಚಂದ್ರನ ಅಧ್ಯಯನಕ್ಕಾಗಿ ರವಾನಿಸಲಾಗಿದ್ದ ವಿಕ್ರಮ್ ಹೆಸರಿನ ಲ್ಯಾಂಡರ್ ಪತ್ತೆಯಾಗಿದೆಯಾದರೂ, ಅದರ ಸಂಪರ್ಕ ಈ ವರೆಗೆ ಸಾಧ್ಯವಾಗಿಲ್ಲ. ಏಕೆ ಸಂಪರ್ಕ ಸಾಧ್ಯವಾಗುತ್ತಿಲ್ಲ ಎಂಬುದರ ಬಗ್ಗೆ ವಿಜ್ಞಾನಿಗಳಿಂದಲೂ ಈ ವರೆಗೆ ಯಾವುದೇ ಅಧಿಕೃತ ಸ್ಪಷ್ಟನೆಯೂ ಸಿಕ್ಕಿಲ್ಲ. ಈ ನಡುವೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಚಂದ್ರಯಾನ–1ರ ನಿರ್ದೇಶಕ ಮೈಲಸ್ವಾಮಿ ಅಣ್ಣಾದೊರೆ ತಮ್ಮದೇ ವಾದವೊಂದನ್ನು ಮುಂದಿಟ್ಟಿದ್ದಾರೆ.