<p><strong>ಮುಂಬೈ: </strong>ಹಣ ದುರ್ಬಳಕೆ ಪ್ರಕರಣವೊಂದರಲ್ಲಿ ಬಿಜೆಪಿ ಮುಖಂಡ ಕಿರೀಟ್ ಸೋಮೈಯ ಅವರನ್ನು ಬಂಧಿಸದಂತೆ ಮಧ್ಯಂತರ ರಕ್ಷಣೆ ನೀಡಿ ಬಾಂಬೆ ಹೈಕೋರ್ಟ್ ಬುಧವಾರ ಆದೇಶಿಸಿದೆ.</p>.<p>ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನುಜಾ ಪ್ರಭುದೇಸಾಯಿ ಅವರಿದ್ದ ಏಕಸದಸ್ಯ ನ್ಯಾಯಪೀಠ, ಒಂದು ವೇಳೆ ಸೋಮೈಯ ಅವರನ್ನು ಬಂಧಿಸಿದಲ್ಲಿ, ₹ 50,000 ವೈಯಕ್ತಿಕ ಬಾಂಡ್ ಮೇಲೆ ಅವರನ್ನು ಬಿಡುಗಡೆ ಮಾಡಬೇಕು ಎಂದು ಆದೇಶಿಸಿದರು.</p>.<p>‘ಪ್ರಕರಣ ಕುರಿತ ತನಿಖೆಗೆ ಸಹಕರಿಸಬೇಕು. ಏ. 18ರಿಂದ ನಾಲ್ಕು ದಿನಗಳ ಕಾಲ ತನಿಖಾಧಿಕಾರಿ ಮುಂದೆ ಹಾಜರಾಗಬೇಕು’ ಎಂದು ಸೋಮೈಯ ಅವರಿಗೆ ನಿರ್ದೇಶನ ನೀಡಿದ ನ್ಯಾಯಮೂರ್ತಿಗಳು, ವಿಚಾರಣೆಯನ್ನು ಏ.28ಕ್ಕೆ ಮುಂದೂಡಿದರು.</p>.<p>‘ಕಾರ್ಯಾಚರಣೆಯಿಂದ ಸ್ಥಗಿತಗೊಂಡಿದ್ದ ನೌಕಾಪಡೆಯ ವಿಮಾನವಾಹಕ ನೌಕೆ ಐಎನ್ಎಸ್ ವಿಕ್ರಾಂತ್ ಅನ್ನು ವಸ್ತುಸಂಗ್ರಹಾಲಯವನ್ನಾಗಿ ಪರಿವರ್ತಿಸುವ ಸಲುವಾಗಿ ಕಿರೀಟ್ ಸೋಮೈಯ ಅವರು ₹ 57 ಕೋಟಿಸಂಗ್ರಹಿಸಿದ್ದರು. ಈ ಹಣವನ್ನು ಅವರು ದುರುಪಯೋಗಪಡಿಸಿಕೊಂಡಿದ್ದಾರೆ’ ಎಂದು ಸೇನೆಯ ಮಾಜಿ ಅಧಿಕಾರಿಯೊಬ್ಬರು ಟ್ರಾಂಬೆ ಪೊಲೀಸ್ ಠಾಣೆಯಲ್ಲಿ ಏಪ್ರಿಲ್ 6ರಂದು ದೂರು ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ಹಣ ದುರ್ಬಳಕೆ ಪ್ರಕರಣವೊಂದರಲ್ಲಿ ಬಿಜೆಪಿ ಮುಖಂಡ ಕಿರೀಟ್ ಸೋಮೈಯ ಅವರನ್ನು ಬಂಧಿಸದಂತೆ ಮಧ್ಯಂತರ ರಕ್ಷಣೆ ನೀಡಿ ಬಾಂಬೆ ಹೈಕೋರ್ಟ್ ಬುಧವಾರ ಆದೇಶಿಸಿದೆ.</p>.<p>ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನುಜಾ ಪ್ರಭುದೇಸಾಯಿ ಅವರಿದ್ದ ಏಕಸದಸ್ಯ ನ್ಯಾಯಪೀಠ, ಒಂದು ವೇಳೆ ಸೋಮೈಯ ಅವರನ್ನು ಬಂಧಿಸಿದಲ್ಲಿ, ₹ 50,000 ವೈಯಕ್ತಿಕ ಬಾಂಡ್ ಮೇಲೆ ಅವರನ್ನು ಬಿಡುಗಡೆ ಮಾಡಬೇಕು ಎಂದು ಆದೇಶಿಸಿದರು.</p>.<p>‘ಪ್ರಕರಣ ಕುರಿತ ತನಿಖೆಗೆ ಸಹಕರಿಸಬೇಕು. ಏ. 18ರಿಂದ ನಾಲ್ಕು ದಿನಗಳ ಕಾಲ ತನಿಖಾಧಿಕಾರಿ ಮುಂದೆ ಹಾಜರಾಗಬೇಕು’ ಎಂದು ಸೋಮೈಯ ಅವರಿಗೆ ನಿರ್ದೇಶನ ನೀಡಿದ ನ್ಯಾಯಮೂರ್ತಿಗಳು, ವಿಚಾರಣೆಯನ್ನು ಏ.28ಕ್ಕೆ ಮುಂದೂಡಿದರು.</p>.<p>‘ಕಾರ್ಯಾಚರಣೆಯಿಂದ ಸ್ಥಗಿತಗೊಂಡಿದ್ದ ನೌಕಾಪಡೆಯ ವಿಮಾನವಾಹಕ ನೌಕೆ ಐಎನ್ಎಸ್ ವಿಕ್ರಾಂತ್ ಅನ್ನು ವಸ್ತುಸಂಗ್ರಹಾಲಯವನ್ನಾಗಿ ಪರಿವರ್ತಿಸುವ ಸಲುವಾಗಿ ಕಿರೀಟ್ ಸೋಮೈಯ ಅವರು ₹ 57 ಕೋಟಿಸಂಗ್ರಹಿಸಿದ್ದರು. ಈ ಹಣವನ್ನು ಅವರು ದುರುಪಯೋಗಪಡಿಸಿಕೊಂಡಿದ್ದಾರೆ’ ಎಂದು ಸೇನೆಯ ಮಾಜಿ ಅಧಿಕಾರಿಯೊಬ್ಬರು ಟ್ರಾಂಬೆ ಪೊಲೀಸ್ ಠಾಣೆಯಲ್ಲಿ ಏಪ್ರಿಲ್ 6ರಂದು ದೂರು ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>