<p><strong>ಮುಂಬೈ</strong>: ಮಹಾರಾಷ್ಟ್ರ ಸಚಿವ ಮತ್ತು ಬಿಜೆಪಿ ನಾಯಕ ನಿತೇಶ್ ರಾಣೆ ಅವರು, ‘ಶಿವಸೇನೆ (ಉದ್ಧವ್ ಬಣ) ಮತ್ತು ಇತರ ವಿರೋಧ ಪಕ್ಷಗಳ ಬೆಂಬಲಿಗರಿಗೆ ತಮ್ಮ ಪ್ರದೇಶಗಳ ಅಭಿವೃದ್ಧಿಗೆ ಯಾವುದೇ ಅನುದಾನ ಸಿಗುವುದಿಲ್ಲ’ ಎಂದು ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ.</p>.<p>ಸಿಂಧುದುರ್ಗ ಜಿಲ್ಲೆಯಲ್ಲಿ ಬುಧವಾರ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಮಹಾ ವಿಕಾಸ ಆಘಾಡಿ (ಎಂವಿಎ) ಕಾರ್ಯಕರ್ತರಿಗೆ ತಮ್ಮ ಕ್ಷೇತ್ರವು ಅಭಿವೃದ್ಧಿಯಾಗಬೇಕು ಎಂದಿದ್ದರೆ ಬಿಜೆಪಿ ಸೇರ್ಪಡೆಯಾಗಬೇಕು’ ಎಂದು ಹೇಳಿದರು.</p>.<p>‘ಈಗಾಗಲೇ ಎಂವಿಎ ಕಾರ್ಯಕರ್ತರು ಸಾಕಷ್ಟು ಸಂಖ್ಯೆಯಲ್ಲಿ ಬಿಜೆಪಿ ಸೇರಿದ್ದಾರೆ. ಉಳಿದಿರುವವರೂ ಬಿಜೆಪಿ ಸೇರಲು ಪ್ರೋತ್ಸಾಹಿಸುತ್ತೇನೆ. ಆಡಳಿತಾರೂಢ ‘ಮಹಾಯುತಿ’ ಕಾರ್ಯಕರ್ತರು ಮಾತ್ರ ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಪಡೆಯುತ್ತಾರೆ. ಎಂವಿಎ ಸದಸ್ಯ ಗ್ರಾಮ ಪಂಚಾಯಿತಿಯ ಸರಪಂಚ್ ಅಥವಾ ಮುಖ್ಯಸ್ಥ ಆಗಿದ್ದರೆ ಆ ಗ್ರಾಮಕ್ಕೆ ಒಂದು ರೂಪಾಯಿ ಅನುದಾನವೂ ಸಿಗುವುದಿಲ್ಲ’ ಎಂದು ಹೇಳಿದರು.</p>.<p>ಈ ಹೇಳಿಕೆಗೆ ವಿಪಕ್ಷಗಳ ನಾಯಕರಿಂದ ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತವಾಗಿದೆ. ‘ಪ್ರಮಾಣ ವಚನ ಸ್ವೀಕರಿಸಿದ್ದು ಮರೆತುಹೋಗಿದೆಯೇ’ ಎಂದು ಪ್ರಶ್ನಿಸಿದ್ದಾರೆ.</p>.<p>ಎನ್ಸಿಪಿ (ಎಸ್ಪಿ) ಶಾಸಕ ರೋಹಿತ್ ಪವಾರ್ ಅವರು ರಾಣೆ ಅವರ ಭಾಷಣದ ವಿಡಿಯೊವನ್ನು ‘ಎಕ್ಸ್’ನಲ್ಲಿ ಹಂಚಿಕೊಂಡು, ‘ಒಂದೋ ಅವರು ಪ್ರಮಾಣ ವಚನವನ್ನು ಸರಿಯಾಗಿ ಗಮನಿಸಿ ಓದಿಲ್ಲ ಅಥವಾ ಅವರು ಮರೆತಿರಬಹುದು. ಸಚಿವರೊಬ್ಬರು ಸಂವಿಧಾನವನ್ನು ಈ ರೀತಿ ಹಾಳು ಮಾಡುತ್ತಿದ್ದರೆ, ಸಂವಿಧಾನ ಉಳಿಯಲು ಹೇಗೆ ಸಾಧ್ಯ? ಮುಖ್ಯಮಂತ್ರಿ ತಮ್ಮ ಸಂಪುಟದ ಸಚಿವರಿಗೆ ಎಚ್ಚರಿಕೆ ನೀಡುತ್ತಾರೆ ಎಂದು ನಿರೀಕ್ಷಿಸುತ್ತೇನೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಮಹಾರಾಷ್ಟ್ರ ಸಚಿವ ಮತ್ತು ಬಿಜೆಪಿ ನಾಯಕ ನಿತೇಶ್ ರಾಣೆ ಅವರು, ‘ಶಿವಸೇನೆ (ಉದ್ಧವ್ ಬಣ) ಮತ್ತು ಇತರ ವಿರೋಧ ಪಕ್ಷಗಳ ಬೆಂಬಲಿಗರಿಗೆ ತಮ್ಮ ಪ್ರದೇಶಗಳ ಅಭಿವೃದ್ಧಿಗೆ ಯಾವುದೇ ಅನುದಾನ ಸಿಗುವುದಿಲ್ಲ’ ಎಂದು ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ.</p>.<p>ಸಿಂಧುದುರ್ಗ ಜಿಲ್ಲೆಯಲ್ಲಿ ಬುಧವಾರ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಮಹಾ ವಿಕಾಸ ಆಘಾಡಿ (ಎಂವಿಎ) ಕಾರ್ಯಕರ್ತರಿಗೆ ತಮ್ಮ ಕ್ಷೇತ್ರವು ಅಭಿವೃದ್ಧಿಯಾಗಬೇಕು ಎಂದಿದ್ದರೆ ಬಿಜೆಪಿ ಸೇರ್ಪಡೆಯಾಗಬೇಕು’ ಎಂದು ಹೇಳಿದರು.</p>.<p>‘ಈಗಾಗಲೇ ಎಂವಿಎ ಕಾರ್ಯಕರ್ತರು ಸಾಕಷ್ಟು ಸಂಖ್ಯೆಯಲ್ಲಿ ಬಿಜೆಪಿ ಸೇರಿದ್ದಾರೆ. ಉಳಿದಿರುವವರೂ ಬಿಜೆಪಿ ಸೇರಲು ಪ್ರೋತ್ಸಾಹಿಸುತ್ತೇನೆ. ಆಡಳಿತಾರೂಢ ‘ಮಹಾಯುತಿ’ ಕಾರ್ಯಕರ್ತರು ಮಾತ್ರ ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಪಡೆಯುತ್ತಾರೆ. ಎಂವಿಎ ಸದಸ್ಯ ಗ್ರಾಮ ಪಂಚಾಯಿತಿಯ ಸರಪಂಚ್ ಅಥವಾ ಮುಖ್ಯಸ್ಥ ಆಗಿದ್ದರೆ ಆ ಗ್ರಾಮಕ್ಕೆ ಒಂದು ರೂಪಾಯಿ ಅನುದಾನವೂ ಸಿಗುವುದಿಲ್ಲ’ ಎಂದು ಹೇಳಿದರು.</p>.<p>ಈ ಹೇಳಿಕೆಗೆ ವಿಪಕ್ಷಗಳ ನಾಯಕರಿಂದ ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತವಾಗಿದೆ. ‘ಪ್ರಮಾಣ ವಚನ ಸ್ವೀಕರಿಸಿದ್ದು ಮರೆತುಹೋಗಿದೆಯೇ’ ಎಂದು ಪ್ರಶ್ನಿಸಿದ್ದಾರೆ.</p>.<p>ಎನ್ಸಿಪಿ (ಎಸ್ಪಿ) ಶಾಸಕ ರೋಹಿತ್ ಪವಾರ್ ಅವರು ರಾಣೆ ಅವರ ಭಾಷಣದ ವಿಡಿಯೊವನ್ನು ‘ಎಕ್ಸ್’ನಲ್ಲಿ ಹಂಚಿಕೊಂಡು, ‘ಒಂದೋ ಅವರು ಪ್ರಮಾಣ ವಚನವನ್ನು ಸರಿಯಾಗಿ ಗಮನಿಸಿ ಓದಿಲ್ಲ ಅಥವಾ ಅವರು ಮರೆತಿರಬಹುದು. ಸಚಿವರೊಬ್ಬರು ಸಂವಿಧಾನವನ್ನು ಈ ರೀತಿ ಹಾಳು ಮಾಡುತ್ತಿದ್ದರೆ, ಸಂವಿಧಾನ ಉಳಿಯಲು ಹೇಗೆ ಸಾಧ್ಯ? ಮುಖ್ಯಮಂತ್ರಿ ತಮ್ಮ ಸಂಪುಟದ ಸಚಿವರಿಗೆ ಎಚ್ಚರಿಕೆ ನೀಡುತ್ತಾರೆ ಎಂದು ನಿರೀಕ್ಷಿಸುತ್ತೇನೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>