ಚೈಬಾಸ, ಜಾರ್ಖಂಡ್: ಜಾರ್ಖಂಡ್ನ ಸಿಂಗ್ಭೂಮ್ ಜಿಲ್ಲೆಯ ಕಾಡಿನಲ್ಲಿ ಮಾವೋವಾದಿಗಳು ಹುದುಗಿಸಿಟ್ಟಿದ್ದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಿಸಿದ್ದು, 45 ವರ್ಷದ ಚೇತನ್ ಕೊಡ ಎಂಬುವವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಟೆಂಟೋ ಪ್ರದೇಶದ ರೆಂಗ್ರಹಟು ಗ್ರಾಮಸ್ಥರಾದ ಚೇತನ್ ಭಾನುವಾರ ಉರವಲು ಸಂಗ್ರಹಿಸಲು ಕಾಡಿಗೆ ತೆರಳಿದ್ದಾಗ ಈ ಘಟನೆ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಬದುಕುಳಿಯಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಸಿಆರ್ಪಿಎಫ್ ಮತ್ತು ಜಾರ್ಖಂಡ್ ಪೊಲೀಸರಿಂದ ಬೃಹತ್ ನಕ್ಸಲ್ ವಿರೋಧಿ ಜಂಟಿ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಈ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಲು ಮಾವೋವಾದಿಗಳು ಐಇಡಿ ಬಳಸುತ್ತಿದ್ದಾರೆ ಎನ್ನಲಾಗಿದೆ.