<p><strong>ನವದೆಹಲಿ</strong>: ನಿಯಮಾವಳಿಗಳನ್ನು ಪಾಲಿಸದ ಕಾರಣಕ್ಕೆ ಬೆಂಗಳೂರು ಮೂಲದ ಅನಾಥಾಶ್ರಮ ದಾರುಲ್ ಉಲೂಮ್ ಸಯಿದಿಯಾ ಯತೀಂಖಾನಾ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸೂಚಿಸಿದೆ. </p>.<p>‘ಬಾಲನ್ಯಾಯ ಕಾಯ್ದೆಯಡಿ ಈ ಅನಾಥಾಶ್ರಮ ನೋಂದಣಿಯಾಗಿಲ್ಲ. ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿಲ್ಲ ಮತ್ತು ಮೂಲಸೌಕರ್ಯಗಳನ್ನು ಹೊಂದಿಲ್ಲ’ ಎಂದು ಆಯೋಗ ತಿಳಿಸಿದೆ. </p>.<p>‘ಕಾನೂನುಬಾಹಿರವಾಗಿ ನಡೆಸುತ್ತಿರುವ ಅನಾಥಾಶ್ರಮಕ್ಕೆ ಹಠಾತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಇಲ್ಲಿ ಮಕ್ಕಳು ಮಧ್ಯಕಾಲೀನ ತಾಲಿಬಾನ್ ಜೀವನ ನಡೆಸುತ್ತಿದ್ದಾರೆ’ ಎಂದು ಆಯೋಗದ ಮುಖ್ಯಸ್ಥ ಪ್ರಿಯಾಂಕ್ ಕನುಂಗೊ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ. </p>.<p>‘ಸುಮಾರು 200 ಅನಾಥ ಮಕ್ಕಳು ಇಲ್ಲಿದ್ದಾರೆ. 100 ಚದರ ಅಡಿ ಕೋಣೆಯಲ್ಲಿ 8 ಮಕ್ಕಳನ್ನು ಇರಿಸಲಾಗಿದೆ. ಅಂತಹ 5 ಕೊಠಡಿಗಳಲ್ಲಿ 40 ಮಕ್ಕಳು ವಾಸಿಸುತ್ತಿದ್ದಾರೆ ಮತ್ತು 16 ಮಕ್ಕಳು ಕಾರಿಡಾರ್ನಲ್ಲಿ ವಾಸಿಸುತ್ತಿದ್ದಾರೆ. ಉಳಿದ 150 ಮಕ್ಕಳು ಹಾಲ್ಗಳಲ್ಲಿ ಮಲಗುತ್ತಾರೆ. ಮಕ್ಕಳು ಮದ್ರಸಾದಲ್ಲಿ ಇಸ್ಲಾಮಿಕ್ ಧಾರ್ಮಿಕ ಶಿಕ್ಷಣ ಪಡೆಯುತ್ತಿದ್ದಾರೆ. ಯಾವುದೇ ಮಗುವನ್ನು ಶಾಲೆಗೆ ಕಳುಹಿಸುವುದಿಲ್ಲ’ ಎಂದು ಅವರು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ನಿಯಮಾವಳಿಗಳನ್ನು ಪಾಲಿಸದ ಕಾರಣಕ್ಕೆ ಬೆಂಗಳೂರು ಮೂಲದ ಅನಾಥಾಶ್ರಮ ದಾರುಲ್ ಉಲೂಮ್ ಸಯಿದಿಯಾ ಯತೀಂಖಾನಾ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸೂಚಿಸಿದೆ. </p>.<p>‘ಬಾಲನ್ಯಾಯ ಕಾಯ್ದೆಯಡಿ ಈ ಅನಾಥಾಶ್ರಮ ನೋಂದಣಿಯಾಗಿಲ್ಲ. ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿಲ್ಲ ಮತ್ತು ಮೂಲಸೌಕರ್ಯಗಳನ್ನು ಹೊಂದಿಲ್ಲ’ ಎಂದು ಆಯೋಗ ತಿಳಿಸಿದೆ. </p>.<p>‘ಕಾನೂನುಬಾಹಿರವಾಗಿ ನಡೆಸುತ್ತಿರುವ ಅನಾಥಾಶ್ರಮಕ್ಕೆ ಹಠಾತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಇಲ್ಲಿ ಮಕ್ಕಳು ಮಧ್ಯಕಾಲೀನ ತಾಲಿಬಾನ್ ಜೀವನ ನಡೆಸುತ್ತಿದ್ದಾರೆ’ ಎಂದು ಆಯೋಗದ ಮುಖ್ಯಸ್ಥ ಪ್ರಿಯಾಂಕ್ ಕನುಂಗೊ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ. </p>.<p>‘ಸುಮಾರು 200 ಅನಾಥ ಮಕ್ಕಳು ಇಲ್ಲಿದ್ದಾರೆ. 100 ಚದರ ಅಡಿ ಕೋಣೆಯಲ್ಲಿ 8 ಮಕ್ಕಳನ್ನು ಇರಿಸಲಾಗಿದೆ. ಅಂತಹ 5 ಕೊಠಡಿಗಳಲ್ಲಿ 40 ಮಕ್ಕಳು ವಾಸಿಸುತ್ತಿದ್ದಾರೆ ಮತ್ತು 16 ಮಕ್ಕಳು ಕಾರಿಡಾರ್ನಲ್ಲಿ ವಾಸಿಸುತ್ತಿದ್ದಾರೆ. ಉಳಿದ 150 ಮಕ್ಕಳು ಹಾಲ್ಗಳಲ್ಲಿ ಮಲಗುತ್ತಾರೆ. ಮಕ್ಕಳು ಮದ್ರಸಾದಲ್ಲಿ ಇಸ್ಲಾಮಿಕ್ ಧಾರ್ಮಿಕ ಶಿಕ್ಷಣ ಪಡೆಯುತ್ತಿದ್ದಾರೆ. ಯಾವುದೇ ಮಗುವನ್ನು ಶಾಲೆಗೆ ಕಳುಹಿಸುವುದಿಲ್ಲ’ ಎಂದು ಅವರು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>