<p><strong>ನವದೆಹಲಿ (ಪಿಟಿಐ):</strong> ಧರ್ಮದ ಹೆಸರಿನಲ್ಲಿ ಹಿಂಸಾಚಾರ ನಡೆಸುವುದನ್ನು ಈ 21ನೇ ಶತಮಾನದ ಭಾರತ ಸಹಿಸುವುದಿಲ್ಲ. ಇಂತಹ ವಿಭಜಕ ಶಕ್ತಿಗಳ ವಿರುದ್ಧ ಜನರು ಒಂದಾಗದಿದ್ದರೆ ನಮ್ಮ ಮುಂದಿನ ಪೀಳಿಗೆಗಳು ಇದರ ಪರಿಣಾಮ ಅನುಭವಿಸಬೇಕಾಗುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಹೇಳಿದರು.</p>.<p>‘ಹರಿಯಾಣದ ಕೆಲವೆಡೆ ನಡೆಯುತ್ತಿರುವುದಾಗಲಿ ಅಥವಾ ಆರ್ಪಿಎಫ್ ಯೋಧ ನಡೆಸಿದ ಕೃತ್ಯವಾಗಲಿ ಭಾರತ ಮಾತೆಯ ಹೃದಯದಲ್ಲಿ ಆಳವಾದ ಗಾಯ ಮಾಡಲಿವೆ’ ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.</p>.<p>‘ದ್ವೇಷ ಬಿಡಿ; ಭಾರತ ಒಗ್ಗೂಡಿಸಿ’ ಎಂದು ಟ್ವೀಟ್ನಲ್ಲಿ ಮನವಿ ಮಾಡಿರುವ ಅವರು, ‘ಹಿಂಸಾಚಾರದ ಘಟನೆಗಳ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.</p>.<div><blockquote> ಜನರಲ್ಲಿ ದ್ವೇಷದ ವಿಷ ತುಂಬಿ ಅವರನ್ನು ಪರಸ್ಪರ ಬಡಿದಾಡಿಕೊಳ್ಳುವಂತೆ ಮಾಡುವುದು ನಮ್ಮ ಸಂವಿಧಾನದ ಅಣಕ </blockquote><span class="attribution">ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷ</span></div>.<p>‘ದುರ್ಬಲ ಕಾನೂನು–ಸುವ್ಯವಸ್ಥೆ ಹಾಗೂ ದುರ್ಬಲ ಸಾಂವಿಧಾನಿಕ ಸಂಸ್ಥೆಗಳ ಕುರಿತು ಹಿಂಸಾಚಾರದ ಘಟನೆಗಳು ಗಂಭೀರ ಪ್ರಶ್ನೆಗಳನ್ನು ಎತ್ತುತ್ತವೆ. ಅಧಿಕಾರ ದಾಹದಿಂದಾಗಿ ದ್ವೇಷ ಹರಡುವ ಕಾರ್ಯ ನಡೆಯುತ್ತಿದೆ. ಇದರಿಂದಾಗಿಯೇ ಸಾಮಾಜಿಕ ಸಾಮರಸ್ಯ ಹಾಳಾಗುತ್ತಿದೆ’ ಎಂದು ಖರ್ಗೆ ಹೇಳಿದ್ದಾರೆ.</p>.<p>ಹರಿಯಾಣದ ನೂಹ್ ಪಟ್ಟಣದಲ್ಲಿ ಸೋಮವಾರ ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಶೋಭಾಯಾತ್ರೆ ತಡೆಯುವ ಪ್ರಯತ್ನ ನಡೆಯುತ್ತಿದ್ದ ವೇಳೆ ಭುಗಿಲೆದ್ದ ಹಿಂಸಾಚಾರದಲ್ಲಿ ನಾಲ್ವರು ಮೃತಪಟ್ಟು ಹಲವರು ಗಾಯಗೊಂಡಿದ್ದರು.</p>.<p>ಮಂಗಳವಾರ ಗುರುಗ್ರಾಮದ ಸೆಕ್ಷರ್ 57ರಲ್ಲಿ ಮಸೀದಿಯೊಂದಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಪರಿಣಾಮ ಇಮಾಮ್ ಒಬ್ಬರು ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಧರ್ಮದ ಹೆಸರಿನಲ್ಲಿ ಹಿಂಸಾಚಾರ ನಡೆಸುವುದನ್ನು ಈ 21ನೇ ಶತಮಾನದ ಭಾರತ ಸಹಿಸುವುದಿಲ್ಲ. ಇಂತಹ ವಿಭಜಕ ಶಕ್ತಿಗಳ ವಿರುದ್ಧ ಜನರು ಒಂದಾಗದಿದ್ದರೆ ನಮ್ಮ ಮುಂದಿನ ಪೀಳಿಗೆಗಳು ಇದರ ಪರಿಣಾಮ ಅನುಭವಿಸಬೇಕಾಗುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಹೇಳಿದರು.</p>.<p>‘ಹರಿಯಾಣದ ಕೆಲವೆಡೆ ನಡೆಯುತ್ತಿರುವುದಾಗಲಿ ಅಥವಾ ಆರ್ಪಿಎಫ್ ಯೋಧ ನಡೆಸಿದ ಕೃತ್ಯವಾಗಲಿ ಭಾರತ ಮಾತೆಯ ಹೃದಯದಲ್ಲಿ ಆಳವಾದ ಗಾಯ ಮಾಡಲಿವೆ’ ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.</p>.<p>‘ದ್ವೇಷ ಬಿಡಿ; ಭಾರತ ಒಗ್ಗೂಡಿಸಿ’ ಎಂದು ಟ್ವೀಟ್ನಲ್ಲಿ ಮನವಿ ಮಾಡಿರುವ ಅವರು, ‘ಹಿಂಸಾಚಾರದ ಘಟನೆಗಳ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.</p>.<div><blockquote> ಜನರಲ್ಲಿ ದ್ವೇಷದ ವಿಷ ತುಂಬಿ ಅವರನ್ನು ಪರಸ್ಪರ ಬಡಿದಾಡಿಕೊಳ್ಳುವಂತೆ ಮಾಡುವುದು ನಮ್ಮ ಸಂವಿಧಾನದ ಅಣಕ </blockquote><span class="attribution">ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷ</span></div>.<p>‘ದುರ್ಬಲ ಕಾನೂನು–ಸುವ್ಯವಸ್ಥೆ ಹಾಗೂ ದುರ್ಬಲ ಸಾಂವಿಧಾನಿಕ ಸಂಸ್ಥೆಗಳ ಕುರಿತು ಹಿಂಸಾಚಾರದ ಘಟನೆಗಳು ಗಂಭೀರ ಪ್ರಶ್ನೆಗಳನ್ನು ಎತ್ತುತ್ತವೆ. ಅಧಿಕಾರ ದಾಹದಿಂದಾಗಿ ದ್ವೇಷ ಹರಡುವ ಕಾರ್ಯ ನಡೆಯುತ್ತಿದೆ. ಇದರಿಂದಾಗಿಯೇ ಸಾಮಾಜಿಕ ಸಾಮರಸ್ಯ ಹಾಳಾಗುತ್ತಿದೆ’ ಎಂದು ಖರ್ಗೆ ಹೇಳಿದ್ದಾರೆ.</p>.<p>ಹರಿಯಾಣದ ನೂಹ್ ಪಟ್ಟಣದಲ್ಲಿ ಸೋಮವಾರ ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಶೋಭಾಯಾತ್ರೆ ತಡೆಯುವ ಪ್ರಯತ್ನ ನಡೆಯುತ್ತಿದ್ದ ವೇಳೆ ಭುಗಿಲೆದ್ದ ಹಿಂಸಾಚಾರದಲ್ಲಿ ನಾಲ್ವರು ಮೃತಪಟ್ಟು ಹಲವರು ಗಾಯಗೊಂಡಿದ್ದರು.</p>.<p>ಮಂಗಳವಾರ ಗುರುಗ್ರಾಮದ ಸೆಕ್ಷರ್ 57ರಲ್ಲಿ ಮಸೀದಿಯೊಂದಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಪರಿಣಾಮ ಇಮಾಮ್ ಒಬ್ಬರು ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>