<p><strong>ಅಹಮದಾಬಾದ್:</strong> ಅಹಿಂಸಾ ತತ್ವವನ್ನು ರಕ್ಷಿಸಲು ಕೆಲವೊಮ್ಮೆ ಹಿಂಸೆ ‘ಅನಿವಾರ್ಯ’ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಹಿರಿಯ ನಾಯಕ ಭಯ್ಯಾಜಿ ಜೋಶಿ ಹೇಳಿದ್ದಾರೆ. </p>.<p>ಗುಜರಾತ್ ವಿಶ್ವವಿದ್ಯಾಲಯದ ಮೈದಾನದಲ್ಲಿ ಗುರುವಾರ ನಡೆದ ‘ಹಿಂದೂ ಆಧ್ಯಾತ್ಮಿಕ ಸೇವಾ ಮೇಳ’ದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಹಿಂದೂಗಳು ತಮ್ಮ ಧರ್ಮವನ್ನು ರಕ್ಷಿಸಲು ಯಾವಾಗಲೂ ಬದ್ಧರಾಗಿದ್ದಾರೆ. ನಮ್ಮ ‘ಧರ್ಮ’ವನ್ನು ರಕ್ಷಿಸಲು, ಇತರರು ‘ಅಧರ್ಮ’ ಎಂದು ಕರೆಯುವ ಕೆಲಸಗಳನ್ನೂ ನಮಗೆ ಮಾಡಬೇಕಾಗುತ್ತದೆ. ನಮ್ಮ ಪೂರ್ವಜರು ಅಂತಹದ್ದನ್ನು ಮಾಡಿದ್ದಾರೆ’ ಎಂದರು.</p>.<p>ಮಹಾಭಾರತ ಯುದ್ಧವನ್ನು ಉಲ್ಲೇಖಿಸಿದ ಅವರು, ಅಧರ್ಮವನ್ನು ತೊಡೆದುಹಾಕಲಿಕ್ಕಾಗಿ ಪಾಂಡವರು ಯುದ್ಧದ ವೇಳೆ ಪಾಲಿಸಬೇಕಾದ ನಿಯಮಗಳನ್ನು ಬದಿಗಿಟ್ಟರು ಎಂದು ಹೇಳಿದರು.</p>.<p>‘ಅಹಿಂಸೆಯ ಕಲ್ಪನೆ ಹಿಂದೂ ಧರ್ಮದಲ್ಲಿ ಮಿಳಿತಗೊಂಡಿದೆ ಎಂಬುದನ್ನು ಅಲ್ಲಗಳೆಯುವಂತಿಲ್ಲ. ಆದರೆ, ಕೆಲವೊಮ್ಮೆ ಅಹಿಂಸಾ ತತ್ವವನ್ನು ಕಾಪಾಡಲು ನಾವು ಹಿಂಸೆಯನ್ನು ಆಶ್ರಯಿಸಬೇಕಾಗುತ್ತದೆ. ಇಲ್ಲದಿದ್ದರೆ, ಅಹಿಂಸಾ ತತ್ವಕ್ಕೆ ಉಳಿಗಾಲ ಇಲ್ಲ. ಪೂರ್ವಜರು ನಮಗೆ ಅಂತಹ ಸಂದೇಶ ನೀಡಿದ್ದಾರೆ’ ಎಂದು ಪ್ರತಿಪಾದಿಸಿದರು. </p>.<p>‘ಎಲ್ಲರನ್ನೂ ತನ್ನ ಜತೆ ಕೊಂಡೊಯ್ಯಬಲ್ಲ ಸಾಮರ್ಥ್ಯವಿರುವವರಿಗೆ ಮಾತ್ರ ಶಾಂತಿ ಸ್ಥಾಪಿಸಲು ಸಾಧ್ಯ. ಆದ್ದರಿಂದ ಭಾರತದ ಜನರು ಎಲ್ಲರನ್ನೂ ಶಾಂತಿಯ ಹಾದಿಯಲ್ಲಿ ಮುನ್ನಡೆಸಬೇಕು. ಒಂದು ಧರ್ಮವು ಇತರರಿಗೆ ಅವರ ನಂಬಿಕೆಗಳನ್ನು ಅನುಸರಿಸಲು ಅವಕಾಶ ನೀಡದಿದ್ದರೆ ಅಲ್ಲಿ ಶಾಂತಿ ಇರುವುದಿಲ್ಲ’ ಎಂದು ತಿಳಿಸಿದರು. </p>.<p>‘ಚರ್ಚ್ ಅಥವಾ ಮಿಷನರಿಗಳಂತಹ ಕೆಲವು ಸಂಸ್ಥೆಗಳು ಮಾತ್ರ ಜನರ ಸೇವೆಯಲ್ಲಿ ತೊಡಗಿಕೊಂಡಿವೆ ಎಂಬ ತಪ್ಪು ಕಲ್ಪನೆ ಎಲ್ಲ ಕಡೆ ಹರಡಿಕೊಂಡಿದೆ. ನಮ್ಮ ದೇವಾಲಯಗಳು ಅಥವಾ ಗುರುದ್ವಾರಗಳಲ್ಲಿ ಪ್ರತಿದಿನ ಸುಮಾರು 1 ಕೋಟಿ ಮಂದಿಗೆ ಆಹಾರ ವಿತರಿಸಿದ ಪ್ರಾಚೀನ ಸಂಪ್ರದಾಯವನ್ನು ನಾವು ಹೊಂದಿದ್ದೇವೆ. ಹಿಂದೂ ಧಾರ್ಮಿಕ ಸಂಘಟನೆಗಳು ಆಚರಣೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಶಾಲೆಗಳು, ಗುರುಕುಲಗಳು ಮತ್ತು ಆಸ್ಪತ್ರೆಗಳನ್ನು ನಡೆಸಿಕೊಂಡು ಹೋಗುತ್ತಿವೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್:</strong> ಅಹಿಂಸಾ ತತ್ವವನ್ನು ರಕ್ಷಿಸಲು ಕೆಲವೊಮ್ಮೆ ಹಿಂಸೆ ‘ಅನಿವಾರ್ಯ’ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಹಿರಿಯ ನಾಯಕ ಭಯ್ಯಾಜಿ ಜೋಶಿ ಹೇಳಿದ್ದಾರೆ. </p>.<p>ಗುಜರಾತ್ ವಿಶ್ವವಿದ್ಯಾಲಯದ ಮೈದಾನದಲ್ಲಿ ಗುರುವಾರ ನಡೆದ ‘ಹಿಂದೂ ಆಧ್ಯಾತ್ಮಿಕ ಸೇವಾ ಮೇಳ’ದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಹಿಂದೂಗಳು ತಮ್ಮ ಧರ್ಮವನ್ನು ರಕ್ಷಿಸಲು ಯಾವಾಗಲೂ ಬದ್ಧರಾಗಿದ್ದಾರೆ. ನಮ್ಮ ‘ಧರ್ಮ’ವನ್ನು ರಕ್ಷಿಸಲು, ಇತರರು ‘ಅಧರ್ಮ’ ಎಂದು ಕರೆಯುವ ಕೆಲಸಗಳನ್ನೂ ನಮಗೆ ಮಾಡಬೇಕಾಗುತ್ತದೆ. ನಮ್ಮ ಪೂರ್ವಜರು ಅಂತಹದ್ದನ್ನು ಮಾಡಿದ್ದಾರೆ’ ಎಂದರು.</p>.<p>ಮಹಾಭಾರತ ಯುದ್ಧವನ್ನು ಉಲ್ಲೇಖಿಸಿದ ಅವರು, ಅಧರ್ಮವನ್ನು ತೊಡೆದುಹಾಕಲಿಕ್ಕಾಗಿ ಪಾಂಡವರು ಯುದ್ಧದ ವೇಳೆ ಪಾಲಿಸಬೇಕಾದ ನಿಯಮಗಳನ್ನು ಬದಿಗಿಟ್ಟರು ಎಂದು ಹೇಳಿದರು.</p>.<p>‘ಅಹಿಂಸೆಯ ಕಲ್ಪನೆ ಹಿಂದೂ ಧರ್ಮದಲ್ಲಿ ಮಿಳಿತಗೊಂಡಿದೆ ಎಂಬುದನ್ನು ಅಲ್ಲಗಳೆಯುವಂತಿಲ್ಲ. ಆದರೆ, ಕೆಲವೊಮ್ಮೆ ಅಹಿಂಸಾ ತತ್ವವನ್ನು ಕಾಪಾಡಲು ನಾವು ಹಿಂಸೆಯನ್ನು ಆಶ್ರಯಿಸಬೇಕಾಗುತ್ತದೆ. ಇಲ್ಲದಿದ್ದರೆ, ಅಹಿಂಸಾ ತತ್ವಕ್ಕೆ ಉಳಿಗಾಲ ಇಲ್ಲ. ಪೂರ್ವಜರು ನಮಗೆ ಅಂತಹ ಸಂದೇಶ ನೀಡಿದ್ದಾರೆ’ ಎಂದು ಪ್ರತಿಪಾದಿಸಿದರು. </p>.<p>‘ಎಲ್ಲರನ್ನೂ ತನ್ನ ಜತೆ ಕೊಂಡೊಯ್ಯಬಲ್ಲ ಸಾಮರ್ಥ್ಯವಿರುವವರಿಗೆ ಮಾತ್ರ ಶಾಂತಿ ಸ್ಥಾಪಿಸಲು ಸಾಧ್ಯ. ಆದ್ದರಿಂದ ಭಾರತದ ಜನರು ಎಲ್ಲರನ್ನೂ ಶಾಂತಿಯ ಹಾದಿಯಲ್ಲಿ ಮುನ್ನಡೆಸಬೇಕು. ಒಂದು ಧರ್ಮವು ಇತರರಿಗೆ ಅವರ ನಂಬಿಕೆಗಳನ್ನು ಅನುಸರಿಸಲು ಅವಕಾಶ ನೀಡದಿದ್ದರೆ ಅಲ್ಲಿ ಶಾಂತಿ ಇರುವುದಿಲ್ಲ’ ಎಂದು ತಿಳಿಸಿದರು. </p>.<p>‘ಚರ್ಚ್ ಅಥವಾ ಮಿಷನರಿಗಳಂತಹ ಕೆಲವು ಸಂಸ್ಥೆಗಳು ಮಾತ್ರ ಜನರ ಸೇವೆಯಲ್ಲಿ ತೊಡಗಿಕೊಂಡಿವೆ ಎಂಬ ತಪ್ಪು ಕಲ್ಪನೆ ಎಲ್ಲ ಕಡೆ ಹರಡಿಕೊಂಡಿದೆ. ನಮ್ಮ ದೇವಾಲಯಗಳು ಅಥವಾ ಗುರುದ್ವಾರಗಳಲ್ಲಿ ಪ್ರತಿದಿನ ಸುಮಾರು 1 ಕೋಟಿ ಮಂದಿಗೆ ಆಹಾರ ವಿತರಿಸಿದ ಪ್ರಾಚೀನ ಸಂಪ್ರದಾಯವನ್ನು ನಾವು ಹೊಂದಿದ್ದೇವೆ. ಹಿಂದೂ ಧಾರ್ಮಿಕ ಸಂಘಟನೆಗಳು ಆಚರಣೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಶಾಲೆಗಳು, ಗುರುಕುಲಗಳು ಮತ್ತು ಆಸ್ಪತ್ರೆಗಳನ್ನು ನಡೆಸಿಕೊಂಡು ಹೋಗುತ್ತಿವೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>