<p><strong>ಪತ್ತನಂತಿಟ್ಟ (ಕೇರಳ):</strong> ಶಬರಿಮಲೆಯ ಅಯ್ಯಪ್ಪ ದೇಗುಲದಲ್ಲಿ ಮಲಯಾಳ ನಟ ದಿಲೀಪ್ ಅವರಿಗೆ ವಿಐಪಿ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿದ ಆರೋಪದ ಮೇಲೆ ತಿರುವಾಂಕೂರು ದೇವಸ್ವಂ ಮಂಡಳಿ ( ಟಿಡಿಬಿ ) ನಾಲ್ವರು ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ.</p>.<p>ದಿಲೀಪ್ ಅವರಿಗೆ ವಿಐಪಿ ದರ್ಶನಕ್ಕೆ ಅವಕಾಶ ಮಾಡಿಕೊಟ್ಟಿದ್ದರಿಂದ ಭಕ್ತರ ದರ್ಶನಕ್ಕೆ ಅಡ್ಡಿಯಾಗಿದೆ. ಈ ಸಂಬಂಧ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ ಎಂದು ಟಿಡಿಬಿ ಅಧ್ಯಕ್ಷ ಪಿಎಸ್ ಪ್ರಶಾಂತ್ ಭಾನುವಾರ ಹೇಳಿದ್ದಾರೆ.</p>.<p>ಶಬರಿಮಲೆಯ ಸ್ವಾಮಿ ಅಯ್ಯಪ್ಪ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತ ಭಕ್ತರನ್ನು ಕಡೆಗಣಿಸಿ ನಟ ದಿಲೀಪ್ ಅವರಿಗೆ ವಿಐಪಿ ದರ್ಶನದ ವ್ಯವಸ್ಥೆ ಕಲ್ಪಿಸಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಪೊಲೀಸರು ಹಾಗೂ ತಿರುವಾಂಕೂರು ದೇವಸ್ವಂ ಮಂಡಳಿಯ ನಡೆಯನ್ನು ಹೈಕೋರ್ಟ್ ಕಟುವಾಗಿ ಟೀಕಿಸಿತ್ತು.</p>.<p>ನ್ಯಾಯಮೂರ್ತಿಗಳಾದ ಅನಿಲ್ ಕೆ. ನರೇಂದ್ರನ್ ಮತ್ತು ಮುರಳಿಕೃಷ್ಣ ಎಸ್. ಅವರನ್ನೊಳಗೊಂಡ ಪೀಠವು, ‘ಡಿ. 5ರಂದು ನಟನಿಗೆ ಯಾವ ಆಧಾರದ ಮೇಲೆ ಇಂತಹ ಸೌಲಭ್ಯ ಒದಗಿಸಲಾಗಿದೆ’ ಎಂದು ಪ್ರಶ್ನಿಸಿತ್ತು. ಇದಕ್ಕೆ ಸಂಬಂಧಿಸಿದ ಸಿ.ಸಿ.ಟಿ.ವಿ ಕ್ಯಾಮೆರಾದ ದೃಶ್ಯಾವಳಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚಿಸಿತ್ತು.</p>.<p>ದಿಲೀಪ್ ಅವರಿಗೆ ಯಾವ ಮಾನದಂಡದಡಿ ಸೌಲಭ್ಯ ಒದಗಿಸಲಾಗಿದೆ ಎಂಬುದನ್ನು ವಿವರಿಸುವ ವರದಿಯನ್ನು ಸಲ್ಲಿಸುವಂತೆ ನ್ಯಾಯಪೀಠವು ಪೊಲೀಸರಿಗೆ ನಿರ್ದೇಶಿಸಿತ್ತು.</p>.<p>‘ಸುಪ್ರೀಂ ಕೋರ್ಟ್ ಸೇರಿದಂತೆ ಇತರೆ ನ್ಯಾಯಾಲಯಗಳ ಆದೇಶದ ಪ್ರಕಾರ ಸಾಂವಿಧಾನಿಕ ಹುದ್ದೆಯಲ್ಲಿರುವ ವ್ಯಕ್ತಿಗಳಿಗೆ ಮಾತ್ರ ಇಂತಹ ಸೌಲಭ್ಯ ಒದಗಿಸಲು ಅನುಮತಿ ನೀಡಲಾಗಿದೆ. ಡಿ. 5ರಂದು ( ಗುರುವಾರ) ನಡೆದಿರುವುದು ಇದರ ಉಲ್ಲಂಘನೆಯಾಗಿದೆ’ ಎಂದೂ ಹೇಳಿತ್ತು.</p>.<p>ನಟ ದಿಲೀಪ್ ಅವರಿಗೆ ಐವಿಪಿ ದರ್ಶನಕ್ಕೆ ಅವಕಾಶ ನೀಡಿದ ಸುದ್ದಿ ಮಾಧ್ಯಮಗಳಲ್ಲಿ ಬಿತ್ತರಗೊಂಡಿದ್ದನ್ನು ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್ ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡಿತ್ತು.</p>.ಶಬರಿಮಲೆ | ನಟ ದಿಲೀಪ್ಗೆ VIP ದರ್ಶನ: ಪೊಲಿಸ್, TDBಗೆ ಕೇರಳ ಹೈಕೋರ್ಟ್ ತಪರಾಕಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪತ್ತನಂತಿಟ್ಟ (ಕೇರಳ):</strong> ಶಬರಿಮಲೆಯ ಅಯ್ಯಪ್ಪ ದೇಗುಲದಲ್ಲಿ ಮಲಯಾಳ ನಟ ದಿಲೀಪ್ ಅವರಿಗೆ ವಿಐಪಿ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿದ ಆರೋಪದ ಮೇಲೆ ತಿರುವಾಂಕೂರು ದೇವಸ್ವಂ ಮಂಡಳಿ ( ಟಿಡಿಬಿ ) ನಾಲ್ವರು ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ.</p>.<p>ದಿಲೀಪ್ ಅವರಿಗೆ ವಿಐಪಿ ದರ್ಶನಕ್ಕೆ ಅವಕಾಶ ಮಾಡಿಕೊಟ್ಟಿದ್ದರಿಂದ ಭಕ್ತರ ದರ್ಶನಕ್ಕೆ ಅಡ್ಡಿಯಾಗಿದೆ. ಈ ಸಂಬಂಧ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ ಎಂದು ಟಿಡಿಬಿ ಅಧ್ಯಕ್ಷ ಪಿಎಸ್ ಪ್ರಶಾಂತ್ ಭಾನುವಾರ ಹೇಳಿದ್ದಾರೆ.</p>.<p>ಶಬರಿಮಲೆಯ ಸ್ವಾಮಿ ಅಯ್ಯಪ್ಪ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತ ಭಕ್ತರನ್ನು ಕಡೆಗಣಿಸಿ ನಟ ದಿಲೀಪ್ ಅವರಿಗೆ ವಿಐಪಿ ದರ್ಶನದ ವ್ಯವಸ್ಥೆ ಕಲ್ಪಿಸಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಪೊಲೀಸರು ಹಾಗೂ ತಿರುವಾಂಕೂರು ದೇವಸ್ವಂ ಮಂಡಳಿಯ ನಡೆಯನ್ನು ಹೈಕೋರ್ಟ್ ಕಟುವಾಗಿ ಟೀಕಿಸಿತ್ತು.</p>.<p>ನ್ಯಾಯಮೂರ್ತಿಗಳಾದ ಅನಿಲ್ ಕೆ. ನರೇಂದ್ರನ್ ಮತ್ತು ಮುರಳಿಕೃಷ್ಣ ಎಸ್. ಅವರನ್ನೊಳಗೊಂಡ ಪೀಠವು, ‘ಡಿ. 5ರಂದು ನಟನಿಗೆ ಯಾವ ಆಧಾರದ ಮೇಲೆ ಇಂತಹ ಸೌಲಭ್ಯ ಒದಗಿಸಲಾಗಿದೆ’ ಎಂದು ಪ್ರಶ್ನಿಸಿತ್ತು. ಇದಕ್ಕೆ ಸಂಬಂಧಿಸಿದ ಸಿ.ಸಿ.ಟಿ.ವಿ ಕ್ಯಾಮೆರಾದ ದೃಶ್ಯಾವಳಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚಿಸಿತ್ತು.</p>.<p>ದಿಲೀಪ್ ಅವರಿಗೆ ಯಾವ ಮಾನದಂಡದಡಿ ಸೌಲಭ್ಯ ಒದಗಿಸಲಾಗಿದೆ ಎಂಬುದನ್ನು ವಿವರಿಸುವ ವರದಿಯನ್ನು ಸಲ್ಲಿಸುವಂತೆ ನ್ಯಾಯಪೀಠವು ಪೊಲೀಸರಿಗೆ ನಿರ್ದೇಶಿಸಿತ್ತು.</p>.<p>‘ಸುಪ್ರೀಂ ಕೋರ್ಟ್ ಸೇರಿದಂತೆ ಇತರೆ ನ್ಯಾಯಾಲಯಗಳ ಆದೇಶದ ಪ್ರಕಾರ ಸಾಂವಿಧಾನಿಕ ಹುದ್ದೆಯಲ್ಲಿರುವ ವ್ಯಕ್ತಿಗಳಿಗೆ ಮಾತ್ರ ಇಂತಹ ಸೌಲಭ್ಯ ಒದಗಿಸಲು ಅನುಮತಿ ನೀಡಲಾಗಿದೆ. ಡಿ. 5ರಂದು ( ಗುರುವಾರ) ನಡೆದಿರುವುದು ಇದರ ಉಲ್ಲಂಘನೆಯಾಗಿದೆ’ ಎಂದೂ ಹೇಳಿತ್ತು.</p>.<p>ನಟ ದಿಲೀಪ್ ಅವರಿಗೆ ಐವಿಪಿ ದರ್ಶನಕ್ಕೆ ಅವಕಾಶ ನೀಡಿದ ಸುದ್ದಿ ಮಾಧ್ಯಮಗಳಲ್ಲಿ ಬಿತ್ತರಗೊಂಡಿದ್ದನ್ನು ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್ ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡಿತ್ತು.</p>.ಶಬರಿಮಲೆ | ನಟ ದಿಲೀಪ್ಗೆ VIP ದರ್ಶನ: ಪೊಲಿಸ್, TDBಗೆ ಕೇರಳ ಹೈಕೋರ್ಟ್ ತಪರಾಕಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>