ರಾಯಪುರ: ಛತ್ತೀಸಗಢದ ನೂತನ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಅವರ ಪ್ರಮಾಣ ವಚನ ಸ್ವೀಕಾರವು ಐತಿಹಾಸಿಕ ಸಮಾರಂಭ ಆಗಿರಲಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಪಕ್ಷದ ನಾಯಕರು ಮತ್ತು ಮುಖ್ಯಮಂತ್ರಿಗಳು ಸಮಾರಂಭದಲ್ಲಿ ಪಾಲ್ಗೊಳ್ಳುವರು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಅರುಣ್ ಸಾವ್ ಹೇಳಿದ್ದಾರೆ.