<p><strong>ರಾಮನಾಥಪುರ(ತಮಿಳುನಾಡು):</strong> ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸಲಾಗುವುದು ಹಾಗೂ ಪಕ್ಷದ ಹೆಸರನ್ನು ಶೀಘ್ರವೇ ಪ್ರಕಟಿಸಲಾಗುವುದು ಎಂದು, ಎಐಎಡಿಎಂಕೆ ಪರಮೋಚ್ಚ ನಾಯಕಿಯಾಗಿದ್ದ ಜೆ.ಜಯಲಲಿತಾ ಅವರ ಆಪ್ತೆ ವಿ.ಕೆ.ಶಶಿಕಲಾ ಅವರು ಮಂಗಳವಾರ ಘೋಷಿಸಿದ್ದಾರೆ.</p>.<p>ಸಮೀಪದ ಕಮುದಿಯಲ್ಲಿ ಹಮ್ಮಿಕೊಂಡಿದ್ದ ಜಯಲಲಿತಾ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ರಾಜ್ಯ ರಾಜಕೀಯದಲ್ಲಿ ನಾವು ಹೊಸ ಅಧ್ಯಾಯ ಆರಂಭಿಸಲಿದ್ದೇವೆ’ ಎಂದರು.</p>.<p>‘ಹೊಸ ಪಕ್ಷದ ಹೆಸರನ್ನು ಶೀಘ್ರವೇ ಘೋಷಿಸಲಾಗುವುದು. ಈ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ನಮ್ಮ ವಿರೋಧಿಗಳನ್ನು ಹಾಗೂ ದ್ರೋಹ ಬಗೆದವರನ್ನು ಸೋಲಿಸುವುದೇ ನೂತನ ಪಕ್ಷದ ಗುರಿ’ ಎಂದು ಹೇಳಿದರು.</p>.<p>ಇದರೊಂದಿಗೆ, ಬರುವ ಏಪ್ರಿಲ್ನಲ್ಲಿ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಚತುಷ್ಕೋನ ಸ್ಪರ್ಧೆ ಸಾಧ್ಯತೆ ಹೆಚ್ಚಾಗಿದೆ. ಡಿಎಂಕೆ ನೇತೃತ್ವದ ‘ಜಾತ್ಯತೀತ ಪ್ರಗತಿಪರ ಮೈತ್ರಿಕೂಟ’, ಎಐಎಡಿಎಂಕೆ ನೇತೃತ್ವದ ಎನ್ಡಿಎ, ನಟ ವಿಜಯ್ ಅವರ ಟಿವಿಕೆ ಪಕ್ಷವಲ್ಲದೇ, ಶಶಿಕಲಾ ಅವರ ನೂತನ ಪಕ್ಷದಿಂದಾಗಿ ಈ ಚತುಷ್ಕೋನ ಸ್ಪರ್ಧೆ ಏರ್ಪಡಲಿದೆ.</p>.<p><strong>ಅನಾವರಣ:</strong> ಉದ್ದೇಶಿತ ರಾಜಕೀಯ ಪಕ್ಷದ ಬಾವುಟವನ್ನು ಶಶಿಕಲಾ ಅವರು ಇದೇ ವೇಳೆ ಅನಾವರಣಗೊಳಿಸಿದರು.</p>.<p>ದ್ರಾವಿಡ ನಾಯಕರಾದ ಸಿ.ಎನ್.ಅಣ್ಣಾದೊರೈ, ಎಐಎಡಿಎಂಕೆ ಸಂಸ್ಥಾಪಕ ಎಂ.ಜಿ.ರಾಮಚಂದ್ರನ್ ಹಾಗೂ ಜಯಲಲಿತಾ ಅವರ ಚಿತ್ರಗಳನ್ನು ಈ ಬಾವುಟ ಒಳಗೊಂಡಿದೆ. ಮೇಲ್ಭಾಗದಲ್ಲಿ ಕಪ್ಪು, ಮಧ್ಯದಲ್ಲಿ ಬಿಳಿ ಹಾಗೂ ಅದರ ಕೆಳಗೆ ಕೆಂಪು ಬಣ್ಣ ಹೊಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಾಥಪುರ(ತಮಿಳುನಾಡು):</strong> ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸಲಾಗುವುದು ಹಾಗೂ ಪಕ್ಷದ ಹೆಸರನ್ನು ಶೀಘ್ರವೇ ಪ್ರಕಟಿಸಲಾಗುವುದು ಎಂದು, ಎಐಎಡಿಎಂಕೆ ಪರಮೋಚ್ಚ ನಾಯಕಿಯಾಗಿದ್ದ ಜೆ.ಜಯಲಲಿತಾ ಅವರ ಆಪ್ತೆ ವಿ.ಕೆ.ಶಶಿಕಲಾ ಅವರು ಮಂಗಳವಾರ ಘೋಷಿಸಿದ್ದಾರೆ.</p>.<p>ಸಮೀಪದ ಕಮುದಿಯಲ್ಲಿ ಹಮ್ಮಿಕೊಂಡಿದ್ದ ಜಯಲಲಿತಾ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ರಾಜ್ಯ ರಾಜಕೀಯದಲ್ಲಿ ನಾವು ಹೊಸ ಅಧ್ಯಾಯ ಆರಂಭಿಸಲಿದ್ದೇವೆ’ ಎಂದರು.</p>.<p>‘ಹೊಸ ಪಕ್ಷದ ಹೆಸರನ್ನು ಶೀಘ್ರವೇ ಘೋಷಿಸಲಾಗುವುದು. ಈ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ನಮ್ಮ ವಿರೋಧಿಗಳನ್ನು ಹಾಗೂ ದ್ರೋಹ ಬಗೆದವರನ್ನು ಸೋಲಿಸುವುದೇ ನೂತನ ಪಕ್ಷದ ಗುರಿ’ ಎಂದು ಹೇಳಿದರು.</p>.<p>ಇದರೊಂದಿಗೆ, ಬರುವ ಏಪ್ರಿಲ್ನಲ್ಲಿ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಚತುಷ್ಕೋನ ಸ್ಪರ್ಧೆ ಸಾಧ್ಯತೆ ಹೆಚ್ಚಾಗಿದೆ. ಡಿಎಂಕೆ ನೇತೃತ್ವದ ‘ಜಾತ್ಯತೀತ ಪ್ರಗತಿಪರ ಮೈತ್ರಿಕೂಟ’, ಎಐಎಡಿಎಂಕೆ ನೇತೃತ್ವದ ಎನ್ಡಿಎ, ನಟ ವಿಜಯ್ ಅವರ ಟಿವಿಕೆ ಪಕ್ಷವಲ್ಲದೇ, ಶಶಿಕಲಾ ಅವರ ನೂತನ ಪಕ್ಷದಿಂದಾಗಿ ಈ ಚತುಷ್ಕೋನ ಸ್ಪರ್ಧೆ ಏರ್ಪಡಲಿದೆ.</p>.<p><strong>ಅನಾವರಣ:</strong> ಉದ್ದೇಶಿತ ರಾಜಕೀಯ ಪಕ್ಷದ ಬಾವುಟವನ್ನು ಶಶಿಕಲಾ ಅವರು ಇದೇ ವೇಳೆ ಅನಾವರಣಗೊಳಿಸಿದರು.</p>.<p>ದ್ರಾವಿಡ ನಾಯಕರಾದ ಸಿ.ಎನ್.ಅಣ್ಣಾದೊರೈ, ಎಐಎಡಿಎಂಕೆ ಸಂಸ್ಥಾಪಕ ಎಂ.ಜಿ.ರಾಮಚಂದ್ರನ್ ಹಾಗೂ ಜಯಲಲಿತಾ ಅವರ ಚಿತ್ರಗಳನ್ನು ಈ ಬಾವುಟ ಒಳಗೊಂಡಿದೆ. ಮೇಲ್ಭಾಗದಲ್ಲಿ ಕಪ್ಪು, ಮಧ್ಯದಲ್ಲಿ ಬಿಳಿ ಹಾಗೂ ಅದರ ಕೆಳಗೆ ಕೆಂಪು ಬಣ್ಣ ಹೊಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>