<p><strong>ತ್ರಿಶೂರ್ (ಕೇರಳ):</strong> 2024ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆದ್ದ ತ್ರಿಶೂರ್ ಕ್ಷೇತ್ರದಲ್ಲಿ ಭಾರಿ ಪ್ರಮಾಣದ ಮತ ಕಳ್ಳತನ ನಡೆದಿದೆ ಎಂದು ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ.ಡಿ ಸತೀಶನ್ ಶುಕ್ರವಾರ ಆರೋಪಿಸಿದ್ದಾರೆ.</p>.ಚುನಾವಣಾ ಆಯೋಗಕ್ಕೆ ಪ್ರಮಾಣಪತ್ರ ಸಲ್ಲಿಸದೇ ರಾಹುಲ್ ಪಲಾಯನ: ಬೊಮ್ಮಾಯಿ.<p>‘ತ್ರಿಶೂರ್ ಹಾಗೂ ಇತರ ಸಂಸದೀಯ ಕ್ಷೇತ್ರಗಳಲ್ಲಿ ನಡೆದಿರುವ ಮತಗಳ್ಳತನನದ ಬಗ್ಗೆ ತನಿಖೆ ನಡೆಸಬೇಕು. ಅಕ್ರಮ ವಿಧಾನಗಳ ಮೂಲಕ ಮತಗಳನ್ನು ಸೇರಿಸಿದ್ದಾಗಿ ಸಂಘ ಪರಿವಾರದ ವಿರುದ್ಧ ತ್ರಿಶೂರ್ನಲ್ಲಿ ಹಲವಾರು ದೂರುಗಳು ಬಂದಿವೆ. ಈ ಬಗ್ಗೆ ಯುಡಿಎಫ್ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಚಿಂತನೆ ನಡೆಸುತ್ತದೆ’ ಎಂದು ಕಾಂಗ್ರೆಸ್ ನಾಯಕ ಪಝಯನ್ನೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.</p><p>2024ರಲ್ಲಿ ತ್ರಿಶೂರ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸುತ್ತು. ನಟ-ರಾಜಕಾರಣಿ ಸುರೇಶ್ ಗೋಪಿಯವರು ಸಿಪಿಐ(ಎಂ) ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗ (ಎಲ್ಡಿಎಫ್) ಮತ್ತು ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಭ್ಯರ್ಥಿಗಳನ್ನು ಸೋಲಿಸಿ ಐತಿಹಾಸಿಕ ಗೆಲುವು ಸಾಧಿಸಿದ್ದರು. </p>.ಲಕ್ಷ ಮತ ಕಳವು: ಮಹದೇವಪುರ ಕ್ಷೇತ್ರದ ದಾಖಲೆ ಬಿಡುಗಡೆ ಮಾಡಿದ ರಾಹುಲ್.<p>ಸಾಂಪ್ರದಾಯಿಕವಾಗಿ ಬಿಜೆಪಿ ಸೀಮಿತ ಪ್ರಭಾವ ಹೊಂದಿರುವ ಕೇರಳದಲ್ಲಿ ಈ ಫಲಿತಾಂಶ ಅನೇಕರನ್ನು ಆಘಾತಗೊಳಿಸಿತ್ತು. </p><p>ಕರ್ನಾಟಕ, ಮಹಾರಾಷ್ಟ್ರ ಮತ್ತು ಹರಿಯಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಚುನಾವಣಾ ಪ್ರಕ್ರಿಯೆಯಲ್ಲಿ ವ್ಯಾಪಕ ಅಕ್ರಮ ಮತ್ತು ಮತದಾರರ ಪಟ್ಟಿಗಳಲ್ಲಿ ತಿರುಚುವಿಕೆ ನಡೆದಿದೆ ಎಂದು ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ ಮರುದಿನವೇ ಸತೀಶನ್ ಅವರಿಂದ ಈ ಹೇಳಿಕೆ ಹೊರಬಿದ್ದಿದೆ.</p><p>ಕರ್ನಾಟಕದ ಬೆಂಗಳೂರು ಕೇಂದ್ರ ಲೋಕಸಭೆಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1,00,250 ಮತಗಳ್ಳತನ ನಡೆದಿದೆ ಎಂದು ಗಾಂಧಿ ಆರೋಪಿಸಿದ್ದಾರೆ.</p>.ಲೋಕಸಭಾ ಚುನಾವಣೆಯಲ್ಲಿ ‘ಕೈ’ ಹಿನ್ನಡೆಯ ಸತ್ಯ ಬಹಿರಂಗ: ಸಿದ್ದರಾಮಯ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತ್ರಿಶೂರ್ (ಕೇರಳ):</strong> 2024ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆದ್ದ ತ್ರಿಶೂರ್ ಕ್ಷೇತ್ರದಲ್ಲಿ ಭಾರಿ ಪ್ರಮಾಣದ ಮತ ಕಳ್ಳತನ ನಡೆದಿದೆ ಎಂದು ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ.ಡಿ ಸತೀಶನ್ ಶುಕ್ರವಾರ ಆರೋಪಿಸಿದ್ದಾರೆ.</p>.ಚುನಾವಣಾ ಆಯೋಗಕ್ಕೆ ಪ್ರಮಾಣಪತ್ರ ಸಲ್ಲಿಸದೇ ರಾಹುಲ್ ಪಲಾಯನ: ಬೊಮ್ಮಾಯಿ.<p>‘ತ್ರಿಶೂರ್ ಹಾಗೂ ಇತರ ಸಂಸದೀಯ ಕ್ಷೇತ್ರಗಳಲ್ಲಿ ನಡೆದಿರುವ ಮತಗಳ್ಳತನನದ ಬಗ್ಗೆ ತನಿಖೆ ನಡೆಸಬೇಕು. ಅಕ್ರಮ ವಿಧಾನಗಳ ಮೂಲಕ ಮತಗಳನ್ನು ಸೇರಿಸಿದ್ದಾಗಿ ಸಂಘ ಪರಿವಾರದ ವಿರುದ್ಧ ತ್ರಿಶೂರ್ನಲ್ಲಿ ಹಲವಾರು ದೂರುಗಳು ಬಂದಿವೆ. ಈ ಬಗ್ಗೆ ಯುಡಿಎಫ್ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಚಿಂತನೆ ನಡೆಸುತ್ತದೆ’ ಎಂದು ಕಾಂಗ್ರೆಸ್ ನಾಯಕ ಪಝಯನ್ನೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.</p><p>2024ರಲ್ಲಿ ತ್ರಿಶೂರ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸುತ್ತು. ನಟ-ರಾಜಕಾರಣಿ ಸುರೇಶ್ ಗೋಪಿಯವರು ಸಿಪಿಐ(ಎಂ) ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗ (ಎಲ್ಡಿಎಫ್) ಮತ್ತು ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಭ್ಯರ್ಥಿಗಳನ್ನು ಸೋಲಿಸಿ ಐತಿಹಾಸಿಕ ಗೆಲುವು ಸಾಧಿಸಿದ್ದರು. </p>.ಲಕ್ಷ ಮತ ಕಳವು: ಮಹದೇವಪುರ ಕ್ಷೇತ್ರದ ದಾಖಲೆ ಬಿಡುಗಡೆ ಮಾಡಿದ ರಾಹುಲ್.<p>ಸಾಂಪ್ರದಾಯಿಕವಾಗಿ ಬಿಜೆಪಿ ಸೀಮಿತ ಪ್ರಭಾವ ಹೊಂದಿರುವ ಕೇರಳದಲ್ಲಿ ಈ ಫಲಿತಾಂಶ ಅನೇಕರನ್ನು ಆಘಾತಗೊಳಿಸಿತ್ತು. </p><p>ಕರ್ನಾಟಕ, ಮಹಾರಾಷ್ಟ್ರ ಮತ್ತು ಹರಿಯಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಚುನಾವಣಾ ಪ್ರಕ್ರಿಯೆಯಲ್ಲಿ ವ್ಯಾಪಕ ಅಕ್ರಮ ಮತ್ತು ಮತದಾರರ ಪಟ್ಟಿಗಳಲ್ಲಿ ತಿರುಚುವಿಕೆ ನಡೆದಿದೆ ಎಂದು ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ ಮರುದಿನವೇ ಸತೀಶನ್ ಅವರಿಂದ ಈ ಹೇಳಿಕೆ ಹೊರಬಿದ್ದಿದೆ.</p><p>ಕರ್ನಾಟಕದ ಬೆಂಗಳೂರು ಕೇಂದ್ರ ಲೋಕಸಭೆಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1,00,250 ಮತಗಳ್ಳತನ ನಡೆದಿದೆ ಎಂದು ಗಾಂಧಿ ಆರೋಪಿಸಿದ್ದಾರೆ.</p>.ಲೋಕಸಭಾ ಚುನಾವಣೆಯಲ್ಲಿ ‘ಕೈ’ ಹಿನ್ನಡೆಯ ಸತ್ಯ ಬಹಿರಂಗ: ಸಿದ್ದರಾಮಯ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>