<p><strong>ನವದಹಲಿ</strong>: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮತಗಳ್ಳತನದ ಆರೋಪ ಘೋಷಣೆಗೆ ಸಹಿ ಹಾಕಬೇಕು. ಇಲ್ಲವೇ ದೇಶದ ಜನರೆದುರು ಕ್ಷಮೆ ಕೋರಬೇಕು ಎಂದು ಚುನಾವಣಾ ಆಯೋಗದ ಮೂಲಗಳು ಶುಕ್ರವಾರ ಪ್ರತಿಕ್ರಿಯಿಸಿವೆ.</p><p>ತಮ್ಮ ವಿಶ್ಲೇಷಣೆ ಸತ್ಯವೆಂದು ಮತ್ತು ಆಯೋಗದ ವಿರುದ್ಧದ ಆರೋಪಗಳು ನಿಜವೆಂದು ರಾಹುಲ್ ಗಾಂಧಿ ಅವರು ಭಾವಿಸಿದ್ದರೆ, ತಮ್ಮ ಘೋಷಣೆಗೆ ನಿಯಮಗಳ ಆಧಾರದಲ್ಲಿ ಸಹಿ ಹಾಕಲು ಹಾಗೂ ಮತದಾರರ ಪಟ್ಟಿಗೆ ತಪ್ಪಾಗಿ ಸೇರಿಸಲಾಗಿರುವ ಅಥವಾ ಕೈಬಿಟ್ಟಿರುವ ಹೆಸರುಗಳ ವಿವರ ನೀಡಲು ಹಿಂಜರಿಯಬಾರದು ಹೇಳಿವೆ.</p><p>ಒಂದು ವೇಳೆ ರಾಹುಲ್ ಗಾಂಧಿ ಅವರು ತಮ್ಮ ಘೋಷಣೆಗೆ ಸಹಿ ಹಾಕದಿದ್ದರೆ, ವಿಶ್ಲೇಷಣೆ ಮೇಲೆ ಅವರಿಗೇ ನಂಬಿಕೆ ಇಲ್ಲ ಎಂದರ್ಥ. ಹಾಗಾದಲ್ಲಿ ಅವರು ದೇಶದ ಜನರ ಕ್ಷಮೆ ಕೇಳಬೇಕು ಎಂದು ಸ್ಪಷ್ಟವಾಗಿ ಉಲ್ಲೇಖಿಸಿವೆ.</p><p>ಗುರುವಾರ ಪತ್ರಿಕಾಗೋಷ್ಠಿ ನಡೆಸಿದ್ದ ರಾಹುಲ್, ಮೂರು ರಾಜ್ಯಗಳಲ್ಲಿ ಮತಗಳ್ಳತನವಾಗಿದೆ ಎಂದು ಆರೋಪ ಮಾಡಿದ್ದರು. ಇದಕ್ಕೆ ಸಂಬಂಧಿಸಿದ ವಿವರಗಳನ್ನು ನೀಡುವಂತೆ ಹಾಗೂ ಅಗತ್ಯ ಕ್ರಮ ಆರಂಭಿಸುವುದಕ್ಕಾಗಿ ತಾವು ಸಹಿ ಮಾಡಿದ ಘೋಷಣೆಯನ್ನು ಆಯೋಗದೊಂದಿಗೆ ಹಂಚಿಕೊಳ್ಳಬೇಕು ಎಂದು ಮುಖ್ಯ ಚುನಾವಣಾಧಿಕಾರಿಗಳು ರಾಹುಲ್ಗೆ ಕೇಳಿದ್ದಾರೆ.</p><p>ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್, ಕರ್ನಾಟಕದ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹಂಚಿಕೊಂಡು ಮತಗಳ್ಳತನದ ಆರೋಪ ಮಾಡಿದ್ದರು. ಅದಕ್ಕೆ ಪೂರಕವಾಗಿ ದಾಖಲೆಗಳನ್ನೂ ಹಂಚಿಕೊಂಡಿದ್ದರು.</p>.ಮತ ಕಳವು ಘೋಷಣೆಗೆ ಸಹಿ ಹಾಕಿ: ರಾಹುಲ್ಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ.'ಮತ ಕಳವು': ವೆಬ್ಸೈಟ್ ಬಂದ್ ಆಗಿದೆ ಎಂಬ ಆರೋಪಕ್ಕೆ ಚುನಾವಣಾ ಆಯೋಗ ಹೇಳಿದ್ದೇನು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದಹಲಿ</strong>: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮತಗಳ್ಳತನದ ಆರೋಪ ಘೋಷಣೆಗೆ ಸಹಿ ಹಾಕಬೇಕು. ಇಲ್ಲವೇ ದೇಶದ ಜನರೆದುರು ಕ್ಷಮೆ ಕೋರಬೇಕು ಎಂದು ಚುನಾವಣಾ ಆಯೋಗದ ಮೂಲಗಳು ಶುಕ್ರವಾರ ಪ್ರತಿಕ್ರಿಯಿಸಿವೆ.</p><p>ತಮ್ಮ ವಿಶ್ಲೇಷಣೆ ಸತ್ಯವೆಂದು ಮತ್ತು ಆಯೋಗದ ವಿರುದ್ಧದ ಆರೋಪಗಳು ನಿಜವೆಂದು ರಾಹುಲ್ ಗಾಂಧಿ ಅವರು ಭಾವಿಸಿದ್ದರೆ, ತಮ್ಮ ಘೋಷಣೆಗೆ ನಿಯಮಗಳ ಆಧಾರದಲ್ಲಿ ಸಹಿ ಹಾಕಲು ಹಾಗೂ ಮತದಾರರ ಪಟ್ಟಿಗೆ ತಪ್ಪಾಗಿ ಸೇರಿಸಲಾಗಿರುವ ಅಥವಾ ಕೈಬಿಟ್ಟಿರುವ ಹೆಸರುಗಳ ವಿವರ ನೀಡಲು ಹಿಂಜರಿಯಬಾರದು ಹೇಳಿವೆ.</p><p>ಒಂದು ವೇಳೆ ರಾಹುಲ್ ಗಾಂಧಿ ಅವರು ತಮ್ಮ ಘೋಷಣೆಗೆ ಸಹಿ ಹಾಕದಿದ್ದರೆ, ವಿಶ್ಲೇಷಣೆ ಮೇಲೆ ಅವರಿಗೇ ನಂಬಿಕೆ ಇಲ್ಲ ಎಂದರ್ಥ. ಹಾಗಾದಲ್ಲಿ ಅವರು ದೇಶದ ಜನರ ಕ್ಷಮೆ ಕೇಳಬೇಕು ಎಂದು ಸ್ಪಷ್ಟವಾಗಿ ಉಲ್ಲೇಖಿಸಿವೆ.</p><p>ಗುರುವಾರ ಪತ್ರಿಕಾಗೋಷ್ಠಿ ನಡೆಸಿದ್ದ ರಾಹುಲ್, ಮೂರು ರಾಜ್ಯಗಳಲ್ಲಿ ಮತಗಳ್ಳತನವಾಗಿದೆ ಎಂದು ಆರೋಪ ಮಾಡಿದ್ದರು. ಇದಕ್ಕೆ ಸಂಬಂಧಿಸಿದ ವಿವರಗಳನ್ನು ನೀಡುವಂತೆ ಹಾಗೂ ಅಗತ್ಯ ಕ್ರಮ ಆರಂಭಿಸುವುದಕ್ಕಾಗಿ ತಾವು ಸಹಿ ಮಾಡಿದ ಘೋಷಣೆಯನ್ನು ಆಯೋಗದೊಂದಿಗೆ ಹಂಚಿಕೊಳ್ಳಬೇಕು ಎಂದು ಮುಖ್ಯ ಚುನಾವಣಾಧಿಕಾರಿಗಳು ರಾಹುಲ್ಗೆ ಕೇಳಿದ್ದಾರೆ.</p><p>ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್, ಕರ್ನಾಟಕದ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹಂಚಿಕೊಂಡು ಮತಗಳ್ಳತನದ ಆರೋಪ ಮಾಡಿದ್ದರು. ಅದಕ್ಕೆ ಪೂರಕವಾಗಿ ದಾಖಲೆಗಳನ್ನೂ ಹಂಚಿಕೊಂಡಿದ್ದರು.</p>.ಮತ ಕಳವು ಘೋಷಣೆಗೆ ಸಹಿ ಹಾಕಿ: ರಾಹುಲ್ಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ.'ಮತ ಕಳವು': ವೆಬ್ಸೈಟ್ ಬಂದ್ ಆಗಿದೆ ಎಂಬ ಆರೋಪಕ್ಕೆ ಚುನಾವಣಾ ಆಯೋಗ ಹೇಳಿದ್ದೇನು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>