<p><strong>ಆರಾ/ ಬೆಗೂಸರಾಯ್ (ಬಿಹಾರ):</strong> ‘ಕರ್ನಾಟಕ, ಮಹಾರಾಷ್ಟ್ರ, ಹರಿಯಾಣ ಮತ್ತು ಮಧ್ಯ ಪ್ರದೇಶದ ಚುನಾವಣೆಗಳನ್ನು ಬಿಜೆಪಿ ಹಾಗೂ ಆರ್ಎಸ್ಎಸ್ ‘ಸಂಪೂರ್ಣವಾಗಿ ಕದ್ದಿವೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದರು.</p>.<p>ಬೆಗೂಸರಾಯ್ನಲ್ಲಿ ಪ್ರಚಾರ ಸಭೆಯಲ್ಲಿ ಪಾಲ್ಗೊಂಡ ಅವರು ‘ಚುನಾವಣಾ ಆಯೋಗವು ಬಿಹಾರದಲ್ಲಿ ಮಹಾಘಟಬಂಧನ್ ಮೈತ್ರಿಕೂಟದ ಬೆಂಬಲಿಗರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಿದೆ. ನಾವು ಇದಕ್ಕೆ ಈಗಾಗಲೇ ಪುರಾವೆಗಳನ್ನು ಒದಗಿಸಿದ್ದು, ಅದನ್ನು ಮತ್ತೆ ಒದಗಿಸುತ್ತೇವೆ’ ಎಂದರು. </p>.<p>‘ಪ್ರಧಾನಿ ಮೋದಿ ಅವರು ಮತ ಗಳಿಕೆಗಾಗಿ ಏನು ಬೇಕಾದರೂ ಮಾಡಲು ಸಿದ್ಧರಿದ್ದಾರೆ’ ಎಂದು ಹೇಳಿದ ಕಾಂಗ್ರೆಸ್ ನಾಯಕ, ‘ನೀವು ಅವರಿಗೆ (ಪ್ರಧಾನಿಗೆ) ಯೋಗ ಮಾಡಲು ಹೇಳಿದರೆ ಅವರು ಕೆಲವು ಆಸನಗಳನ್ನು ಮಾಡುತ್ತಾರೆ’ ಎಂದು ವ್ಯಂಗ್ಯವಾಡಿದರು.</p>.<p>‘ಮತ ಗಳಿಸಲು ಅವರು ವೇದಿಕೆಯ ಮೇಲೆ ನೃತ್ಯ ಮಾಡುತ್ತಾರೆ. ಚುನಾವಣೆಯ ದಿನದವರೆಗೆ ನೀವು ಏನೇ ಹೇಳಿದರೂ ಮೋದಿ ಅದನ್ನು ಮಾಡುವರು. ಏಕೆಂದರೆ, ಚುನಾವಣೆಯ ನಂತರ ಅವರು ತಮ್ಮ ನೆಚ್ಚಿನ ಉದ್ಯಮಿಗಳ ಪರವಾಗಿ ಮಾತ್ರ ಕೆಲಸ ಮಾಡುತ್ತಾರೆ’ ಎಂದು ಟೀಕಿಸಿದರು. </p>.<p>ರಾಜ್ಯದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಅದು ಯಾವುದೇ ನಿರ್ದಿಷ್ಟ ಜಾತಿಗೆ ಸೀಮಿತವಾಗಿರದೆ, ಸಮಾಜದ ಪ್ರತಿಯೊಂದು ವರ್ಗದ ಏಳಿಗೆಗಾಗಿ ಕೆಲಸ ಮಾಡುತ್ತದೆ ಎಂದು ಹೇಳಿದರು.</p>.<p>ಯುವಜನರು ನಿರುದ್ಯೋಗದಂತಹ ಜ್ವಲಂತ ಸಮಸ್ಯೆಗಳ ಬಗ್ಗೆ ಪ್ರಶ್ನೆಗಳನ್ನು ಕೇಳದಂತೆ ಅವರ ಗಮನವನ್ನು ಬೇರೆಡೆಗೆ ತಿರುಗಿಸಲು ಪ್ರಧಾನಿ ರೀಲ್ಗಳನ್ನು ವೀಕ್ಷಿಸುವಂತೆ ಕೇಳುತ್ತಿದ್ದಾರೆ ಎಂದು ಆರೋಪಿಸಿದರು.</p>.ಟ್ರಂಪ್ ಬಗ್ಗೆ ಮೋದಿಗೆ ಭಯ; ದೊಡ್ಡ ಉದ್ಯಮಿಗಳ 'ರಿಮೋಟ್ ಕಂಟ್ರೋಲ್': ರಾಹುಲ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆರಾ/ ಬೆಗೂಸರಾಯ್ (ಬಿಹಾರ):</strong> ‘ಕರ್ನಾಟಕ, ಮಹಾರಾಷ್ಟ್ರ, ಹರಿಯಾಣ ಮತ್ತು ಮಧ್ಯ ಪ್ರದೇಶದ ಚುನಾವಣೆಗಳನ್ನು ಬಿಜೆಪಿ ಹಾಗೂ ಆರ್ಎಸ್ಎಸ್ ‘ಸಂಪೂರ್ಣವಾಗಿ ಕದ್ದಿವೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದರು.</p>.<p>ಬೆಗೂಸರಾಯ್ನಲ್ಲಿ ಪ್ರಚಾರ ಸಭೆಯಲ್ಲಿ ಪಾಲ್ಗೊಂಡ ಅವರು ‘ಚುನಾವಣಾ ಆಯೋಗವು ಬಿಹಾರದಲ್ಲಿ ಮಹಾಘಟಬಂಧನ್ ಮೈತ್ರಿಕೂಟದ ಬೆಂಬಲಿಗರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಿದೆ. ನಾವು ಇದಕ್ಕೆ ಈಗಾಗಲೇ ಪುರಾವೆಗಳನ್ನು ಒದಗಿಸಿದ್ದು, ಅದನ್ನು ಮತ್ತೆ ಒದಗಿಸುತ್ತೇವೆ’ ಎಂದರು. </p>.<p>‘ಪ್ರಧಾನಿ ಮೋದಿ ಅವರು ಮತ ಗಳಿಕೆಗಾಗಿ ಏನು ಬೇಕಾದರೂ ಮಾಡಲು ಸಿದ್ಧರಿದ್ದಾರೆ’ ಎಂದು ಹೇಳಿದ ಕಾಂಗ್ರೆಸ್ ನಾಯಕ, ‘ನೀವು ಅವರಿಗೆ (ಪ್ರಧಾನಿಗೆ) ಯೋಗ ಮಾಡಲು ಹೇಳಿದರೆ ಅವರು ಕೆಲವು ಆಸನಗಳನ್ನು ಮಾಡುತ್ತಾರೆ’ ಎಂದು ವ್ಯಂಗ್ಯವಾಡಿದರು.</p>.<p>‘ಮತ ಗಳಿಸಲು ಅವರು ವೇದಿಕೆಯ ಮೇಲೆ ನೃತ್ಯ ಮಾಡುತ್ತಾರೆ. ಚುನಾವಣೆಯ ದಿನದವರೆಗೆ ನೀವು ಏನೇ ಹೇಳಿದರೂ ಮೋದಿ ಅದನ್ನು ಮಾಡುವರು. ಏಕೆಂದರೆ, ಚುನಾವಣೆಯ ನಂತರ ಅವರು ತಮ್ಮ ನೆಚ್ಚಿನ ಉದ್ಯಮಿಗಳ ಪರವಾಗಿ ಮಾತ್ರ ಕೆಲಸ ಮಾಡುತ್ತಾರೆ’ ಎಂದು ಟೀಕಿಸಿದರು. </p>.<p>ರಾಜ್ಯದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಅದು ಯಾವುದೇ ನಿರ್ದಿಷ್ಟ ಜಾತಿಗೆ ಸೀಮಿತವಾಗಿರದೆ, ಸಮಾಜದ ಪ್ರತಿಯೊಂದು ವರ್ಗದ ಏಳಿಗೆಗಾಗಿ ಕೆಲಸ ಮಾಡುತ್ತದೆ ಎಂದು ಹೇಳಿದರು.</p>.<p>ಯುವಜನರು ನಿರುದ್ಯೋಗದಂತಹ ಜ್ವಲಂತ ಸಮಸ್ಯೆಗಳ ಬಗ್ಗೆ ಪ್ರಶ್ನೆಗಳನ್ನು ಕೇಳದಂತೆ ಅವರ ಗಮನವನ್ನು ಬೇರೆಡೆಗೆ ತಿರುಗಿಸಲು ಪ್ರಧಾನಿ ರೀಲ್ಗಳನ್ನು ವೀಕ್ಷಿಸುವಂತೆ ಕೇಳುತ್ತಿದ್ದಾರೆ ಎಂದು ಆರೋಪಿಸಿದರು.</p>.ಟ್ರಂಪ್ ಬಗ್ಗೆ ಮೋದಿಗೆ ಭಯ; ದೊಡ್ಡ ಉದ್ಯಮಿಗಳ 'ರಿಮೋಟ್ ಕಂಟ್ರೋಲ್': ರಾಹುಲ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>