<p><strong>ಭುಜ್ (ಗುಜರಾತ್):</strong> ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟದ ಗೆಲುವು ದೇಶದಲ್ಲಿ ನುಸುಳುಕೋರರ ವಿರುದ್ಧದ ಜನಾದೇಶವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದ್ದಾರೆ.</p>.<p>‘ಕೆಲವು ರಾಜಕೀಯ ಪಕ್ಷಗಳು ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ವಿರೋಧಿಸುತ್ತಿವೆ. ಏಕೆಂದರೆ, ನುಸುಳುಕೋರರ ಹೆಸರುಗಳು ಮತದಾರರ ಪಟ್ಟಿಯಲ್ಲಿ ಉಳಿಯುವುದನ್ನು ಖಚಿತಪಡಿಸಿಕೊಳ್ಳಲು ಆ ಪಕ್ಷಗಳು ಬಯಸುತ್ತವೆ’ ಎಂದಿದ್ದಾರೆ.</p>.<p>ಗುಜರಾತ್ನ ಕಛ್ ಜಿಲ್ಲೆಯ ಭುಜ್ನಲ್ಲಿ ಬಿಎಸ್ಎಫ್ ವಜ್ರ ಮಹೋತ್ಸವ (61ನೇ ರೈಸಿಂಗ್ ಡೇ) ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಸ್ಐಆರ್ ಪ್ರಕ್ರಿಯೆಯನ್ನು ಮತದಾರರ ಪಟ್ಟಿಯ ‘ಶುದ್ಧೀಕರಣ’ ಎಂದು ಬಣ್ಣಿಸಿದರು.</p>.<p>‘ಇಂದು, ಗಡಿ ಭದ್ರತಾ ಪಡೆಯವರು (ಬಿಎಸ್ಎಫ್) ದೇಶದ ಎಲ್ಲಾ ಗಡಿಗಳಲ್ಲಿ ಒಳನುಸುಳುವಿಕೆಯನ್ನು ತಡೆಗಟ್ಟುವಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ರಾಷ್ಟ್ರದ ಭದ್ರತೆಯ ದೃಷ್ಟಿಯಿಂದ ಮಾತ್ರವಲ್ಲದೆ, ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯು ಕಲುಷಿತಗೊಳ್ಳದಂತೆ ನೋಡಿಕೊಳ್ಳಲು ಒಳನುಸುಳುವಿಕೆಯನ್ನು ತಡೆಯುವುದು ಅಗತ್ಯವಾಗಿದೆ’ ಎಂದು ಪ್ರತಿಪಾದಿಸಿದರು.</p>.<p>ಆದರೂ, ಕೆಲವು ರಾಜಕೀಯ ಪಕ್ಷಗಳು ಒಳನುಸುಳುವಿಕೆ ತಡೆಯಲು ಕೇಂದ್ರ ಸರ್ಕಾರ ನಡೆಸುತ್ತಿರುವ ಪ್ರಯತ್ನಗಳನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದರು.</p>.<p>‘ಈ ದೇಶದಿಂದ ಪ್ರತಿಯೊಬ್ಬ ನುಸುಳುಕೋರರನ್ನು ಗಡಿಪಾರು ಮಾಡುತ್ತೇವೆ ಎಂಬುದನ್ನು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ಇದು ನಮ್ಮ ದೃಢಸಂಕಲ್ಪ’ ಎಂದು ಪುನರುಚ್ಚರಿಸಿದರು.</p>.<div><blockquote>ಅಕ್ರಮ ವಲಸಿಗರನ್ನು ಬೆಂಬಲಿಸುವ ಪಕ್ಷಗಳತ್ತ ನಾಗರಿಕರು ತಮ್ಮ ಒಲವು ತೋರುವುದಿಲ್ಲ ಎಂಬುದನ್ನು ಬಿಹಾರ ವಿಧಾನಸಭಾ ಚುನಾವಣೆ ಸಾಬೀತುಪಡಿಸಿದೆ </blockquote><span class="attribution"> ಅಮಿತ್ ಶಾ ಕೇಂದ್ರ ಗೃಹ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುಜ್ (ಗುಜರಾತ್):</strong> ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟದ ಗೆಲುವು ದೇಶದಲ್ಲಿ ನುಸುಳುಕೋರರ ವಿರುದ್ಧದ ಜನಾದೇಶವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದ್ದಾರೆ.</p>.<p>‘ಕೆಲವು ರಾಜಕೀಯ ಪಕ್ಷಗಳು ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ವಿರೋಧಿಸುತ್ತಿವೆ. ಏಕೆಂದರೆ, ನುಸುಳುಕೋರರ ಹೆಸರುಗಳು ಮತದಾರರ ಪಟ್ಟಿಯಲ್ಲಿ ಉಳಿಯುವುದನ್ನು ಖಚಿತಪಡಿಸಿಕೊಳ್ಳಲು ಆ ಪಕ್ಷಗಳು ಬಯಸುತ್ತವೆ’ ಎಂದಿದ್ದಾರೆ.</p>.<p>ಗುಜರಾತ್ನ ಕಛ್ ಜಿಲ್ಲೆಯ ಭುಜ್ನಲ್ಲಿ ಬಿಎಸ್ಎಫ್ ವಜ್ರ ಮಹೋತ್ಸವ (61ನೇ ರೈಸಿಂಗ್ ಡೇ) ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಸ್ಐಆರ್ ಪ್ರಕ್ರಿಯೆಯನ್ನು ಮತದಾರರ ಪಟ್ಟಿಯ ‘ಶುದ್ಧೀಕರಣ’ ಎಂದು ಬಣ್ಣಿಸಿದರು.</p>.<p>‘ಇಂದು, ಗಡಿ ಭದ್ರತಾ ಪಡೆಯವರು (ಬಿಎಸ್ಎಫ್) ದೇಶದ ಎಲ್ಲಾ ಗಡಿಗಳಲ್ಲಿ ಒಳನುಸುಳುವಿಕೆಯನ್ನು ತಡೆಗಟ್ಟುವಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ರಾಷ್ಟ್ರದ ಭದ್ರತೆಯ ದೃಷ್ಟಿಯಿಂದ ಮಾತ್ರವಲ್ಲದೆ, ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯು ಕಲುಷಿತಗೊಳ್ಳದಂತೆ ನೋಡಿಕೊಳ್ಳಲು ಒಳನುಸುಳುವಿಕೆಯನ್ನು ತಡೆಯುವುದು ಅಗತ್ಯವಾಗಿದೆ’ ಎಂದು ಪ್ರತಿಪಾದಿಸಿದರು.</p>.<p>ಆದರೂ, ಕೆಲವು ರಾಜಕೀಯ ಪಕ್ಷಗಳು ಒಳನುಸುಳುವಿಕೆ ತಡೆಯಲು ಕೇಂದ್ರ ಸರ್ಕಾರ ನಡೆಸುತ್ತಿರುವ ಪ್ರಯತ್ನಗಳನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದರು.</p>.<p>‘ಈ ದೇಶದಿಂದ ಪ್ರತಿಯೊಬ್ಬ ನುಸುಳುಕೋರರನ್ನು ಗಡಿಪಾರು ಮಾಡುತ್ತೇವೆ ಎಂಬುದನ್ನು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ಇದು ನಮ್ಮ ದೃಢಸಂಕಲ್ಪ’ ಎಂದು ಪುನರುಚ್ಚರಿಸಿದರು.</p>.<div><blockquote>ಅಕ್ರಮ ವಲಸಿಗರನ್ನು ಬೆಂಬಲಿಸುವ ಪಕ್ಷಗಳತ್ತ ನಾಗರಿಕರು ತಮ್ಮ ಒಲವು ತೋರುವುದಿಲ್ಲ ಎಂಬುದನ್ನು ಬಿಹಾರ ವಿಧಾನಸಭಾ ಚುನಾವಣೆ ಸಾಬೀತುಪಡಿಸಿದೆ </blockquote><span class="attribution"> ಅಮಿತ್ ಶಾ ಕೇಂದ್ರ ಗೃಹ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>