<p><strong>ನವದೆಹಲಿ:</strong> ಬಿಹಾರದಲ್ಲಿ ನಡೆಸುತ್ತಿರುವ ರೀತಿಯಲ್ಲಿಯೇ ದೇಶದಾದ್ಯಂತ ಮತದಾರರ ಪಟ್ಟಿಯ ‘ವಿಶೇಷ ಸಮಗ್ರ ಪರಿಷ್ಕರಣೆ’ಯನ್ನು (ಎಸ್ಐಆರ್) ಚುನಾವಣಾ ಆಯೋಗ ಮುಂದಿನ ತಿಂಗಳಿಂದ ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ. ಈ ದಿಸೆಯಲ್ಲಿ ಆಯೋಗವು ಎಲ್ಲ ರಾಜ್ಯಗಳಲ್ಲಿನ ತನ್ನ ಚುನಾವಣಾ ಶಾಖೆಯನ್ನು ಸಕ್ರಿಯಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.</p>.<p>ಬಿಹಾರದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಎಸ್ಐಆರ್ ಅನ್ನು ‘ಸಾಂವಿಧಾನಿಕ ಹೊಣೆಗಾರಿಕೆ’ ಎಂದು ಕಳೆದ ವಾರ ಉಲ್ಲೇಖಿಸಿದ ಸುಪ್ರೀಂ ಕೋರ್ಟ್, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣಾ ಕಾರ್ಯವನ್ನು ಮುಂದುವರಿಸಲು ಅನುಮತಿ ನೀಡಿತ್ತು. ಹೀಗಾಗಿ, ಆಯೋಗ ಈ ಕಸರತ್ತನ್ನು ದೇಶದಾದ್ಯಂತ ವಿಸ್ತರಿಸಲು ಮುಂದಾಗಿದೆ.</p>.<p>ವಿರೋಧ ಪಕ್ಷಗಳು ಈ ಪರಿಷ್ಕರಣಾ ಕಾರ್ಯವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದು, ಅರ್ಹ ಪ್ರಜೆಗಳ ಮತದಾನದ ಹಕ್ಕನ್ನು ಎಸ್ಐಆರ್ ಕಸಿದುಕೊಳ್ಳುತ್ತದೆ ಎಂದು ಪ್ರತಿಪಾದಿಸಿವೆ.</p>.<p>ಈ ಪ್ರಕರಣ ಕುರಿತು ಇದೇ 28ಕ್ಕೆ ಸುಪ್ರೀಂ ಕೋರ್ಟ್ನಲ್ಲಿ ಪುನಃ ವಿಚಾರಣೆ ನಡೆಯಲಿದೆ. ಆ ಬಳಿಕವಷ್ಟೇ ಆಯೋಗವು ಎಸ್ಐಆರ್ ಅನ್ನು ರಾಷ್ಟ್ರದಾದ್ಯಂತ ವಿಸ್ತರಿಸುವ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. </p>.<p>ವಿದೇಶಗಳಿಂದ ಅಕ್ರಮವಾಗಿ ಬಂದಿರುವ ವಲಸಿಗರ ಜನ್ಮ ಸ್ಥಳವನ್ನು ಪರಿಶೀಲಿಸುವ ಮೂಲಕ, ಅವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆಯುವುದು ಆಯೋಗದ ಉದ್ದೇಶವಾಗಿದೆ ಎಂದು ಅವರು ಹೇಳಿದ್ದಾರೆ. </p>.<p>ದೇಶದ ವಿವಿಧ ರಾಜ್ಯಗಳ ಮುಖ್ಯ ಚುನಾವಣಾ ಅಧಿಕಾರಿಗಳು, ತಮ್ಮ ರಾಜ್ಯಗಳಲ್ಲಿ ಈ ಹಿಂದೆ ಕೊನೆಯದಾಗಿ ನಡೆದ ‘ವಿಶೇಷ ಸಮಗ್ರ ಪರಿಷ್ಕರಣೆ’ ಬಳಿಕ ಪ್ರಕಟವಾದ ಮತದಾರರ ಪಟ್ಟಿಯನ್ನು ಪ್ರಕಟಿಸಲು ಆರಂಭಿಸಿದ್ದಾರೆ. </p>.<p>ಅದರಂತೆ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2008 ಮತ್ತು ಉತ್ತರಾಖಂಡದಲ್ಲಿ 2006ರಲ್ಲಿ ಎಸ್ಐಆರ್ ನಡೆದಿತ್ತು. ಆ ಬಳಿಕದ ಮತದಾರರ ಪಟ್ಟಿಯನ್ನು ಈ ರಾಜ್ಯಗಳ ಸಿಇಒ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. </p>.<p>ಬಿಹಾರದಲ್ಲಿ ಕೊನೆಯ ಬಾರಿಗೆ 2003ರಲ್ಲಿ ಎಸ್ಐಆರ್ ನಡೆದಿತ್ತು. ಇತರ ಬಹುತೇಕ ರಾಜ್ಯಗಳಲ್ಲಿ 2002ರಿಂದ 2004ರ ಅವಧಿಯಲ್ಲಿ ವಿಶೇಷ ಪರಿಷ್ಕರಣಾ ಕಾರ್ಯ ನಡೆದಿವೆ ಎಂದು ಮೂಲಗಳು ತಿಳಿಸಿವೆ. </p>.<h2>ಚುನಾವಣೆ ನಡೆಯುವ ರಾಜ್ಯಗಳು: </h2>.<p>ಪ್ರಸಕ್ತ ವರ್ಷ ಬಿಹಾರದಲ್ಲಿ ಚುನಾವಣೆ ನಡೆಯಲಿದ್ದು, 2026ರಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿವೆ. </p>.<p>ಬಾಂಗ್ಲಾದೇಶ, ಮ್ಯಾನ್ಮಾರ್ ಸೇರಿದಂತೆ ಕೆಲ ವಿದೇಶಗಳ ಅಕ್ರಮ ವಲಸಿಗರು ವಿವಿಧ ರಾಜ್ಯಗಳಲ್ಲಿ ನೆಲಸಿರುವುದು ಪತ್ತೆಯಾದ ಬೆನ್ನಲ್ಲೇ ಆಯೋಗ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆಗೆ ಮುಂದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬಿಹಾರದಲ್ಲಿ ನಡೆಸುತ್ತಿರುವ ರೀತಿಯಲ್ಲಿಯೇ ದೇಶದಾದ್ಯಂತ ಮತದಾರರ ಪಟ್ಟಿಯ ‘ವಿಶೇಷ ಸಮಗ್ರ ಪರಿಷ್ಕರಣೆ’ಯನ್ನು (ಎಸ್ಐಆರ್) ಚುನಾವಣಾ ಆಯೋಗ ಮುಂದಿನ ತಿಂಗಳಿಂದ ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ. ಈ ದಿಸೆಯಲ್ಲಿ ಆಯೋಗವು ಎಲ್ಲ ರಾಜ್ಯಗಳಲ್ಲಿನ ತನ್ನ ಚುನಾವಣಾ ಶಾಖೆಯನ್ನು ಸಕ್ರಿಯಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.</p>.<p>ಬಿಹಾರದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಎಸ್ಐಆರ್ ಅನ್ನು ‘ಸಾಂವಿಧಾನಿಕ ಹೊಣೆಗಾರಿಕೆ’ ಎಂದು ಕಳೆದ ವಾರ ಉಲ್ಲೇಖಿಸಿದ ಸುಪ್ರೀಂ ಕೋರ್ಟ್, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣಾ ಕಾರ್ಯವನ್ನು ಮುಂದುವರಿಸಲು ಅನುಮತಿ ನೀಡಿತ್ತು. ಹೀಗಾಗಿ, ಆಯೋಗ ಈ ಕಸರತ್ತನ್ನು ದೇಶದಾದ್ಯಂತ ವಿಸ್ತರಿಸಲು ಮುಂದಾಗಿದೆ.</p>.<p>ವಿರೋಧ ಪಕ್ಷಗಳು ಈ ಪರಿಷ್ಕರಣಾ ಕಾರ್ಯವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದು, ಅರ್ಹ ಪ್ರಜೆಗಳ ಮತದಾನದ ಹಕ್ಕನ್ನು ಎಸ್ಐಆರ್ ಕಸಿದುಕೊಳ್ಳುತ್ತದೆ ಎಂದು ಪ್ರತಿಪಾದಿಸಿವೆ.</p>.<p>ಈ ಪ್ರಕರಣ ಕುರಿತು ಇದೇ 28ಕ್ಕೆ ಸುಪ್ರೀಂ ಕೋರ್ಟ್ನಲ್ಲಿ ಪುನಃ ವಿಚಾರಣೆ ನಡೆಯಲಿದೆ. ಆ ಬಳಿಕವಷ್ಟೇ ಆಯೋಗವು ಎಸ್ಐಆರ್ ಅನ್ನು ರಾಷ್ಟ್ರದಾದ್ಯಂತ ವಿಸ್ತರಿಸುವ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. </p>.<p>ವಿದೇಶಗಳಿಂದ ಅಕ್ರಮವಾಗಿ ಬಂದಿರುವ ವಲಸಿಗರ ಜನ್ಮ ಸ್ಥಳವನ್ನು ಪರಿಶೀಲಿಸುವ ಮೂಲಕ, ಅವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆಯುವುದು ಆಯೋಗದ ಉದ್ದೇಶವಾಗಿದೆ ಎಂದು ಅವರು ಹೇಳಿದ್ದಾರೆ. </p>.<p>ದೇಶದ ವಿವಿಧ ರಾಜ್ಯಗಳ ಮುಖ್ಯ ಚುನಾವಣಾ ಅಧಿಕಾರಿಗಳು, ತಮ್ಮ ರಾಜ್ಯಗಳಲ್ಲಿ ಈ ಹಿಂದೆ ಕೊನೆಯದಾಗಿ ನಡೆದ ‘ವಿಶೇಷ ಸಮಗ್ರ ಪರಿಷ್ಕರಣೆ’ ಬಳಿಕ ಪ್ರಕಟವಾದ ಮತದಾರರ ಪಟ್ಟಿಯನ್ನು ಪ್ರಕಟಿಸಲು ಆರಂಭಿಸಿದ್ದಾರೆ. </p>.<p>ಅದರಂತೆ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2008 ಮತ್ತು ಉತ್ತರಾಖಂಡದಲ್ಲಿ 2006ರಲ್ಲಿ ಎಸ್ಐಆರ್ ನಡೆದಿತ್ತು. ಆ ಬಳಿಕದ ಮತದಾರರ ಪಟ್ಟಿಯನ್ನು ಈ ರಾಜ್ಯಗಳ ಸಿಇಒ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. </p>.<p>ಬಿಹಾರದಲ್ಲಿ ಕೊನೆಯ ಬಾರಿಗೆ 2003ರಲ್ಲಿ ಎಸ್ಐಆರ್ ನಡೆದಿತ್ತು. ಇತರ ಬಹುತೇಕ ರಾಜ್ಯಗಳಲ್ಲಿ 2002ರಿಂದ 2004ರ ಅವಧಿಯಲ್ಲಿ ವಿಶೇಷ ಪರಿಷ್ಕರಣಾ ಕಾರ್ಯ ನಡೆದಿವೆ ಎಂದು ಮೂಲಗಳು ತಿಳಿಸಿವೆ. </p>.<h2>ಚುನಾವಣೆ ನಡೆಯುವ ರಾಜ್ಯಗಳು: </h2>.<p>ಪ್ರಸಕ್ತ ವರ್ಷ ಬಿಹಾರದಲ್ಲಿ ಚುನಾವಣೆ ನಡೆಯಲಿದ್ದು, 2026ರಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿವೆ. </p>.<p>ಬಾಂಗ್ಲಾದೇಶ, ಮ್ಯಾನ್ಮಾರ್ ಸೇರಿದಂತೆ ಕೆಲ ವಿದೇಶಗಳ ಅಕ್ರಮ ವಲಸಿಗರು ವಿವಿಧ ರಾಜ್ಯಗಳಲ್ಲಿ ನೆಲಸಿರುವುದು ಪತ್ತೆಯಾದ ಬೆನ್ನಲ್ಲೇ ಆಯೋಗ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆಗೆ ಮುಂದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>