<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳಿಗೆ ಸಂಬಂಧಿಸಿದ್ದು ಎನ್ನಲಾದ ಹಿಂಸಾಚಾರದಲ್ಲಿ ಮೂವರು ಮೃತಪಟ್ಟಿದ್ದಾರೆ.</p><p>ಶಂಷೇರ್ಗಂಜ್ ಪ್ರದೇಶದ ಜಾಫರಾಬಾದ್ನ ಮನೆಯೊಂದರಲ್ಲಿ ತಂದೆ ಹಾಗೂ ಮಗನ ಮೃತದೇಹ ಪತ್ತೆಯಾಗಿದೆ. ಅವರನ್ನು ಹರಗೋವಿಂದೊ ದಾಸ್ ಮತ್ತು ಚಂದನ್ ಎಂದು ಗುರುತಿಸಲಾಗಿದೆ. ಇಬ್ಬರ ದೇಹದಲ್ಲೂ ಇರಿತದ ಗಾಯಗಳು ಇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.</p><p>‘ಹಲ್ಲೆಕೋರರು ಮನೆಯನ್ನು ಹೊಕ್ಕು ತಂದೆ ಹಾಗೂ ಮಗನ ಮೇಲೆ ಹಲ್ಲೆ ನಡೆಸಿದ್ದಾರೆ. ನಂತರ ಮನೆಯನ್ನು ಲೂಟಿ ಮಾಡಿದ್ದಾರೆ. ಹಲ್ಲೆಗೊಳಗಾದ ಈ ಇಬ್ಬರ ದೇಹ ಮನೆಯೊಳಗೆ ಪತ್ತೆಯಾಯಿತು. ನಂತರ ಆಸ್ಪತ್ರೆಗೆ ಸಾಗಿಸಲಾಯಿತು. ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು’ ಎಂದಿದ್ದಾರೆ.</p><p>‘ತಂದೆ ಮತ್ತು ಮಗ ತಮ್ಮ ಮನೆಯೊಳಗೆ ಬಿದ್ದಿದ್ದರು. ಸಮೀಪದ ಆಸ್ಪತ್ರೆಗೆ ಸಾಗಿಸಿದಾಗ ಇಬ್ಬರೂ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು’ ಎಂದು ಪೊಲೀಸರು ಹೇಳಿದ್ದಾರೆ. ‘ಮನೆಯನ್ನು ಲೂಟಿ ಮಾಡಿರುವ ದುಷ್ಕರ್ಮಿಗಳು ಪರಾರಿಯಾಗುವಾಗ ಇಬ್ಬರಿಗೂ ಇರಿದಿದ್ದಾರೆ’ ಎಂದು ಅವರ ಕುಟುಂಬದ ಸದಸ್ಯರು ಆರೋಪಿಸಿದ್ದಾರೆ.</p><p>‘ಘಟನೆ ಬಗ್ಗೆ ತನಿಖೆ ಕೈಗೆತ್ತಿಕೊಳ್ಳಲಾಗಿದ್ದು, ಹತ್ಯೆಯಲ್ಲಿ ಭಾಗಿಯಾಗಿದವರನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದೇವೆ. ಸಂತ್ರಸ್ತರ ಕುಟುಂಬದ ಇತರ ಸದಸ್ಯರು ಮತ್ತು ಸ್ಥಳೀಯ ನಿವಾಸಿಗಳಿಂದ ಮಾಹಿತಿ ಕಲೆಹಾಕಿದ್ದೇವೆ’ ಎಂದು ಪೊಲೀಸರು ಹೇಳಿದ್ದಾರೆ. </p><p><strong>ಇಬ್ಬರಿಗೆ ಗುಂಡೇಟು:</strong> ಪ್ರತ್ಯೇಕ ಪ್ರಕರಣವೊಂದರಲ್ಲಿ, ಶಂಷೇರ್ಗಂಜ್ನ ಧುಲಿಯಾನ್ನಲ್ಲಿ ಇಬ್ಬರು ಗುಂಡೇಟಿನಿಂದ ಗಾಯಗೊಂಡಿದ್ದಾರೆ. ಗುಲಾಮ್ ಮೊಯಿನುದ್ದೀನ್ ಶೇಖ್ ಮತ್ತು ಇನ್ನೊಬ್ಬ ಬಾಲಕನಿಗೆ ಗುಂಡು ತಗುಲಿದೆ ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸಿವೆ. ‘ಮುರ್ಶಿದಾಬಾದ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಬ್ಬರೂ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಸ್ಥಿರವಾಗಿದೆ’ ಎಂದಿದೆ.</p><p>‘ಮುರ್ಶಿದಾಬಾದ್ ಜಿಲ್ಲೆಯ ವಿವಿಧೆಡೆ ಶುಕ್ರವಾರ ನಡೆದ ಹಿಂಸಾಚಾರದಲ್ಲಿ 15 ಪೊಲೀಸರು ಗಾಯಗೊಂಡಿದ್ದಾರೆ. ಇದುವರೆಗೆ 118 ಮಂದಿಯನ್ನು ಬಂಧಿಸಲಾಗಿದೆ’ ಎಂದು ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಜಾವೇದ್ ಶಮೀಮ್ ತಿಳಿಸಿದ್ದಾರೆ.</p>.ವಕ್ಫ್ (ತಿದ್ದುಪಡಿ) ಕಾಯ್ದೆ ಪಶ್ಚಿಮ ಬಂಗಾಳದಲ್ಲಿ ಜಾರಿಯಾಗುವುದಿಲ್ಲ: ಮಮತಾ.ವಕ್ಫ್ ಕಾಯ್ದೆ: ದೇಶದಾದ್ಯಂತ ಬಿಜೆಪಿ ಜಾಗೃತಿ ಅಭಿಯಾನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳಿಗೆ ಸಂಬಂಧಿಸಿದ್ದು ಎನ್ನಲಾದ ಹಿಂಸಾಚಾರದಲ್ಲಿ ಮೂವರು ಮೃತಪಟ್ಟಿದ್ದಾರೆ.</p><p>ಶಂಷೇರ್ಗಂಜ್ ಪ್ರದೇಶದ ಜಾಫರಾಬಾದ್ನ ಮನೆಯೊಂದರಲ್ಲಿ ತಂದೆ ಹಾಗೂ ಮಗನ ಮೃತದೇಹ ಪತ್ತೆಯಾಗಿದೆ. ಅವರನ್ನು ಹರಗೋವಿಂದೊ ದಾಸ್ ಮತ್ತು ಚಂದನ್ ಎಂದು ಗುರುತಿಸಲಾಗಿದೆ. ಇಬ್ಬರ ದೇಹದಲ್ಲೂ ಇರಿತದ ಗಾಯಗಳು ಇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.</p><p>‘ಹಲ್ಲೆಕೋರರು ಮನೆಯನ್ನು ಹೊಕ್ಕು ತಂದೆ ಹಾಗೂ ಮಗನ ಮೇಲೆ ಹಲ್ಲೆ ನಡೆಸಿದ್ದಾರೆ. ನಂತರ ಮನೆಯನ್ನು ಲೂಟಿ ಮಾಡಿದ್ದಾರೆ. ಹಲ್ಲೆಗೊಳಗಾದ ಈ ಇಬ್ಬರ ದೇಹ ಮನೆಯೊಳಗೆ ಪತ್ತೆಯಾಯಿತು. ನಂತರ ಆಸ್ಪತ್ರೆಗೆ ಸಾಗಿಸಲಾಯಿತು. ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು’ ಎಂದಿದ್ದಾರೆ.</p><p>‘ತಂದೆ ಮತ್ತು ಮಗ ತಮ್ಮ ಮನೆಯೊಳಗೆ ಬಿದ್ದಿದ್ದರು. ಸಮೀಪದ ಆಸ್ಪತ್ರೆಗೆ ಸಾಗಿಸಿದಾಗ ಇಬ್ಬರೂ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು’ ಎಂದು ಪೊಲೀಸರು ಹೇಳಿದ್ದಾರೆ. ‘ಮನೆಯನ್ನು ಲೂಟಿ ಮಾಡಿರುವ ದುಷ್ಕರ್ಮಿಗಳು ಪರಾರಿಯಾಗುವಾಗ ಇಬ್ಬರಿಗೂ ಇರಿದಿದ್ದಾರೆ’ ಎಂದು ಅವರ ಕುಟುಂಬದ ಸದಸ್ಯರು ಆರೋಪಿಸಿದ್ದಾರೆ.</p><p>‘ಘಟನೆ ಬಗ್ಗೆ ತನಿಖೆ ಕೈಗೆತ್ತಿಕೊಳ್ಳಲಾಗಿದ್ದು, ಹತ್ಯೆಯಲ್ಲಿ ಭಾಗಿಯಾಗಿದವರನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದೇವೆ. ಸಂತ್ರಸ್ತರ ಕುಟುಂಬದ ಇತರ ಸದಸ್ಯರು ಮತ್ತು ಸ್ಥಳೀಯ ನಿವಾಸಿಗಳಿಂದ ಮಾಹಿತಿ ಕಲೆಹಾಕಿದ್ದೇವೆ’ ಎಂದು ಪೊಲೀಸರು ಹೇಳಿದ್ದಾರೆ. </p><p><strong>ಇಬ್ಬರಿಗೆ ಗುಂಡೇಟು:</strong> ಪ್ರತ್ಯೇಕ ಪ್ರಕರಣವೊಂದರಲ್ಲಿ, ಶಂಷೇರ್ಗಂಜ್ನ ಧುಲಿಯಾನ್ನಲ್ಲಿ ಇಬ್ಬರು ಗುಂಡೇಟಿನಿಂದ ಗಾಯಗೊಂಡಿದ್ದಾರೆ. ಗುಲಾಮ್ ಮೊಯಿನುದ್ದೀನ್ ಶೇಖ್ ಮತ್ತು ಇನ್ನೊಬ್ಬ ಬಾಲಕನಿಗೆ ಗುಂಡು ತಗುಲಿದೆ ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸಿವೆ. ‘ಮುರ್ಶಿದಾಬಾದ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಬ್ಬರೂ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಸ್ಥಿರವಾಗಿದೆ’ ಎಂದಿದೆ.</p><p>‘ಮುರ್ಶಿದಾಬಾದ್ ಜಿಲ್ಲೆಯ ವಿವಿಧೆಡೆ ಶುಕ್ರವಾರ ನಡೆದ ಹಿಂಸಾಚಾರದಲ್ಲಿ 15 ಪೊಲೀಸರು ಗಾಯಗೊಂಡಿದ್ದಾರೆ. ಇದುವರೆಗೆ 118 ಮಂದಿಯನ್ನು ಬಂಧಿಸಲಾಗಿದೆ’ ಎಂದು ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಜಾವೇದ್ ಶಮೀಮ್ ತಿಳಿಸಿದ್ದಾರೆ.</p>.ವಕ್ಫ್ (ತಿದ್ದುಪಡಿ) ಕಾಯ್ದೆ ಪಶ್ಚಿಮ ಬಂಗಾಳದಲ್ಲಿ ಜಾರಿಯಾಗುವುದಿಲ್ಲ: ಮಮತಾ.ವಕ್ಫ್ ಕಾಯ್ದೆ: ದೇಶದಾದ್ಯಂತ ಬಿಜೆಪಿ ಜಾಗೃತಿ ಅಭಿಯಾನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>