ತಾಲಾ ಮತ್ತು ಗೈಲಾ ಗ್ರಾಮಗಳಲ್ಲಿ 11 ಮಂದಿ ನಾಪತ್ತೆಯಾಗಿದ್ದು, ಶೋಧ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಭಾರಿ ಮಳೆಯಿಂದಾಗಿ ಉಂಟಾದ ಭೂಕುಸಿತದಿಂದ ಮುನ್ಸಿಯಾರಿ, ಬಂಗಾಪಾನಿ ಮತ್ತು ಇತರ ಸ್ಥಳಗಳಲ್ಲಿ ರಸ್ತೆಗಳು ಹಾನಿಗೀಡಾಗಿದ್ದು, ಸಂಚಾರ ಬಂದ್ ಆಗಿದೆ. ಇದರಿಂದಾಗಿ ಹನ್ನೆರಡಕ್ಕೂ ಹೆಚ್ಚು ಗ್ರಾಮಗಳಿಗೆ ಜಿಲ್ಲಾ ಕೇಂದ್ರದಿಂದ ಸಂಪರ್ಕ ಕಡಿತಗೊಂಡಿದೆ.