<p><strong>ಮುಂಬೈ:</strong> ಸರಪಂಚ್ ಸಂತೋಷ್ ದೇಶ್ಮುಖ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ₹2 ಕೋಟಿ ಸುಲಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ವಾಲ್ಮೀಕ್ ಕರಾಡ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇದೇ ವೇಳೆ ನ್ಯಾಯಾಲಯದ ಎದುರು ಪ್ರತಿಭಟನೆ ನಡೆಸಿದ ಅವರ ಬೆಂಬಲಿಗರು ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.</p><p>ವಾಲ್ಮೀಕ್ ಕರಾಡ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಮತ್ತೊಂದು ಗುಂಪಿನ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ ಅಧಿಕಾರಿಗಳು ಹೇಳಿದ್ದಾರೆ. </p><p>ಮಹಾರಾಷ್ಟ್ರದ ಸಚಿವ ಮತ್ತು ಎನ್ಸಿಪಿ ನಾಯಕ ಧನಂಜಯ್ ಮುಂಡೆ ಅವರ ಆಪ್ತರಾಗಿರುವ ವಾಲ್ಮೀಕ್ ಕರಾಡ್ ಈಚೆಗೆ ಪೊಲೀಸರಿಗೆ ಶರಣಾಗಿದ್ದರು. ಪೊಲೀಸರು ಕರಾಡ್ ಅವರನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.</p><p>ನ್ಯಾಯಾಲಯದ ಕಲಾಪ ನಡೆಯುತ್ತಿರುವಾಗಲೇ 30ಕ್ಕೂ ಹೆಚ್ಚು ಬೆಂಬಲಿಗರ ಗುಂಪು ವಾಲ್ಮೀಕ್ ಕರಾಡ್ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು. </p><p>ಜಿಲ್ಲಾಧಿಕಾರಿಗಳ ನಿಷೇಧಾಜ್ಞೆ ಉಲ್ಲಂಘಿಸಿದ್ದಕ್ಕಾಗಿ ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮತ್ತೊಂದೆಡೆ ಇದೇ ಪ್ರಕರಣದಲ್ಲಿ ಕರಾಡ್ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಕ್ಕಾಗಿ 15 ಮಹಿಳೆಯರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಸರಪಂಚ್ ಸಂತೋಷ್ ದೇಶ್ಮುಖ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ₹2 ಕೋಟಿ ಸುಲಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ವಾಲ್ಮೀಕ್ ಕರಾಡ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇದೇ ವೇಳೆ ನ್ಯಾಯಾಲಯದ ಎದುರು ಪ್ರತಿಭಟನೆ ನಡೆಸಿದ ಅವರ ಬೆಂಬಲಿಗರು ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.</p><p>ವಾಲ್ಮೀಕ್ ಕರಾಡ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಮತ್ತೊಂದು ಗುಂಪಿನ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ ಅಧಿಕಾರಿಗಳು ಹೇಳಿದ್ದಾರೆ. </p><p>ಮಹಾರಾಷ್ಟ್ರದ ಸಚಿವ ಮತ್ತು ಎನ್ಸಿಪಿ ನಾಯಕ ಧನಂಜಯ್ ಮುಂಡೆ ಅವರ ಆಪ್ತರಾಗಿರುವ ವಾಲ್ಮೀಕ್ ಕರಾಡ್ ಈಚೆಗೆ ಪೊಲೀಸರಿಗೆ ಶರಣಾಗಿದ್ದರು. ಪೊಲೀಸರು ಕರಾಡ್ ಅವರನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.</p><p>ನ್ಯಾಯಾಲಯದ ಕಲಾಪ ನಡೆಯುತ್ತಿರುವಾಗಲೇ 30ಕ್ಕೂ ಹೆಚ್ಚು ಬೆಂಬಲಿಗರ ಗುಂಪು ವಾಲ್ಮೀಕ್ ಕರಾಡ್ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು. </p><p>ಜಿಲ್ಲಾಧಿಕಾರಿಗಳ ನಿಷೇಧಾಜ್ಞೆ ಉಲ್ಲಂಘಿಸಿದ್ದಕ್ಕಾಗಿ ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮತ್ತೊಂದೆಡೆ ಇದೇ ಪ್ರಕರಣದಲ್ಲಿ ಕರಾಡ್ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಕ್ಕಾಗಿ 15 ಮಹಿಳೆಯರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>