<p><strong>ಮುಂಬೈ</strong>: ಸರಪಂಚ್ ಸಂತೋಷ್ ದೇಶ್ಮುಖ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ₹2 ಕೋಟಿ ಸುಲಿಗೆ ಪ್ರಕರಣದ ಆರೋಪಿ ವಾಲ್ಮೀಕ್ ಕರಾಡ್ ಅವರು ಸಿಐಡಿ ಮುಂದೆ ಮಂಗಳವಾರ ಶರಣಾಗಿದ್ದಾರೆ. ಅವರು ಮಹಾರಾಷ್ಟ್ರದ ಸಚಿವ ಮತ್ತು ಎನ್ಸಿಪಿ ನಾಯಕ ಧನಂಜಯ್ ಮುಂಡೆ ಅವರ ಆಪ್ತ.</p>.<p>ಬೀಡ್ ಜಿಲ್ಲೆಯಲ್ಲಿ ಡಿ.9ರಂದು ಸಂತೋಷ್ ದೇಶ್ಮುಖ್ ಅವರ ಹತ್ಯೆಯಾದ ಬಳಿಕ ವಾಲ್ಮೀಕ್ ತಲೆಮರೆಸಿಕೊಂಡಿದ್ದರು.</p>.<p>ದೇಶ್ಮುಖ್ ಅಪಹರಣ ಮತ್ತು ಹತ್ಯೆ, ಅವಾಡ ಸಮೂಹದಿಂದ ಹಣ ಸುಲಿಗೆ ಹಾಗೂ ಅದರ ಭದ್ರತಾ ಸಿಬ್ಬಂದಿ ಮೇಲಿನ ಹಲ್ಲೆ ಪ್ರಕರಣಗಳ ಬಗೆಗೆ ಸಿಐಡಿ ತನಿಖೆ ನಡೆಸುತ್ತಿದೆ.</p>.<p class="title">‘ನನ್ನ ವಿರುದ್ಧ ಸುಲಿಗೆ ಪ್ರಕರಣ ದಾಖಲಿಸಲಾಗಿದೆ. ನಾನು ನಿರೀಕ್ಷಣಾ ಜಾಮೀನು ಪಡೆಯಬಹುದಿತ್ತು. ಅದರ ಬದಲಾಗಿ ಸಿಐಡಿ ಮುಂದೆ ಶರಣಾಗುತ್ತೇನೆ. ಸಂತೋಷ್ ಹತ್ಯೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಅವರಿಗೆ ಮರಣದಂಡನೆ ವಿಧಿಸಬೇಕು. ರಾಜಕೀಯ ಕಾರಣಕ್ಕೆ ನನ್ನ ಹೆಸರನ್ನು ಈ ಪ್ರಕರಣದಲ್ಲಿ ಬಳಸಿಕೊಳ್ಳಲಾಗಿದೆ’ ಎಂದು ವಾಲ್ಮೀಕ್ ಅವರು ಶರಣಾಗುವ ಮೊದಲು ವಿಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ.</p>.<p class="title">ಸಂತೋಷ್ ಹತ್ಯೆಯಲ್ಲಿ ವಾಲ್ಮೀಕ್ ಕೈವಾಡವಿದೆ. ಸುಲಿಗೆ ಮಾಡುವುದನ್ನು ವಿರೋಧಿಸಿದ್ದಕ್ಕೆ ಕೊಲೆ ನಡೆದಿದೆ ಎಂದು ಸಂತೋಷ್ ಕುಟುಂಬಸ್ಥರು ಆರೋಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಸರಪಂಚ್ ಸಂತೋಷ್ ದೇಶ್ಮುಖ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ₹2 ಕೋಟಿ ಸುಲಿಗೆ ಪ್ರಕರಣದ ಆರೋಪಿ ವಾಲ್ಮೀಕ್ ಕರಾಡ್ ಅವರು ಸಿಐಡಿ ಮುಂದೆ ಮಂಗಳವಾರ ಶರಣಾಗಿದ್ದಾರೆ. ಅವರು ಮಹಾರಾಷ್ಟ್ರದ ಸಚಿವ ಮತ್ತು ಎನ್ಸಿಪಿ ನಾಯಕ ಧನಂಜಯ್ ಮುಂಡೆ ಅವರ ಆಪ್ತ.</p>.<p>ಬೀಡ್ ಜಿಲ್ಲೆಯಲ್ಲಿ ಡಿ.9ರಂದು ಸಂತೋಷ್ ದೇಶ್ಮುಖ್ ಅವರ ಹತ್ಯೆಯಾದ ಬಳಿಕ ವಾಲ್ಮೀಕ್ ತಲೆಮರೆಸಿಕೊಂಡಿದ್ದರು.</p>.<p>ದೇಶ್ಮುಖ್ ಅಪಹರಣ ಮತ್ತು ಹತ್ಯೆ, ಅವಾಡ ಸಮೂಹದಿಂದ ಹಣ ಸುಲಿಗೆ ಹಾಗೂ ಅದರ ಭದ್ರತಾ ಸಿಬ್ಬಂದಿ ಮೇಲಿನ ಹಲ್ಲೆ ಪ್ರಕರಣಗಳ ಬಗೆಗೆ ಸಿಐಡಿ ತನಿಖೆ ನಡೆಸುತ್ತಿದೆ.</p>.<p class="title">‘ನನ್ನ ವಿರುದ್ಧ ಸುಲಿಗೆ ಪ್ರಕರಣ ದಾಖಲಿಸಲಾಗಿದೆ. ನಾನು ನಿರೀಕ್ಷಣಾ ಜಾಮೀನು ಪಡೆಯಬಹುದಿತ್ತು. ಅದರ ಬದಲಾಗಿ ಸಿಐಡಿ ಮುಂದೆ ಶರಣಾಗುತ್ತೇನೆ. ಸಂತೋಷ್ ಹತ್ಯೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಅವರಿಗೆ ಮರಣದಂಡನೆ ವಿಧಿಸಬೇಕು. ರಾಜಕೀಯ ಕಾರಣಕ್ಕೆ ನನ್ನ ಹೆಸರನ್ನು ಈ ಪ್ರಕರಣದಲ್ಲಿ ಬಳಸಿಕೊಳ್ಳಲಾಗಿದೆ’ ಎಂದು ವಾಲ್ಮೀಕ್ ಅವರು ಶರಣಾಗುವ ಮೊದಲು ವಿಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ.</p>.<p class="title">ಸಂತೋಷ್ ಹತ್ಯೆಯಲ್ಲಿ ವಾಲ್ಮೀಕ್ ಕೈವಾಡವಿದೆ. ಸುಲಿಗೆ ಮಾಡುವುದನ್ನು ವಿರೋಧಿಸಿದ್ದಕ್ಕೆ ಕೊಲೆ ನಡೆದಿದೆ ಎಂದು ಸಂತೋಷ್ ಕುಟುಂಬಸ್ಥರು ಆರೋಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>