ಕಾಂಗ್ರೆಸ್ನ ಮಹತ್ವಾಕಾಂಕ್ಷೆಯ ಭಾರತ ಜೋಡಿಸಿ ಯಾತ್ರೆಯು ಸದ್ಯ ಕರ್ನಾಟಕದ ಬಳ್ಳಾರಿಯಲ್ಲಿದೆ. ಎಐಸಿಸಿ ಅಧ್ಯಕ್ಷ ಗಾದಿಯ ಚುನಾವಣೆ ಹಿನ್ನೆಲೆಯಲ್ಲಿ ಯಾತ್ರೆಗೆ ಸೋಮವಾರ ಬಿಡುವು ನೀಡಲಾಗಿದೆ. ಇನ್ನೊಂದೆಡೆ ಹಿಮಾಚಲ ಪ್ರದೇಶ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದ್ದು, ಪ್ರಚಾರ ಅಭಿಯಾನ ಬಿರುಸುಗೊಂಡಿದೆ. ಗುಜರಾತ್ಗೆ ವಿಧಾನಸಭೆಗೆ ಯಾವುದೇ ಕ್ಷಣದಲ್ಲಿ ಚುನಾವಣೆ ಘೋಷಣೆಯಾಗುವ ಸಾಧ್ಯತೆಗಳಿವೆ.